AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ ಅಧಿವೇಶನ ಶುರುವಾಗ್ತಿದ್ದಂತೆ 3 ಬಿಜೆಪಿ ಶಾಸಕರು ಅಮಾನತು: ಪ್ರತಿಭಟಿಸಿ ಹೊರನಡೆದ ಕಾಂಗ್ರೆಸ್ ಶಾಸಕರು !

ಈ ಬಾರಿ ಬಜೆಟ್​ ಅಧಿವೇಶನದ ಪ್ರಾರಂಭದಲ್ಲಿ ರಾಜ್ಯಪಾಲರ ಭಾಷಣ ಅವಶ್ಯಕತೆ ಇಲ್ಲ ಎಂದು ಹಿಂದೆಯೇ ಟಿಆರ್​ಎಸ್​ ಹೇಳಿದೆ. ಇದನ್ನು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ವಿರೋಧಿಸುತ್ತಿವೆ.

ಬಜೆಟ್​ ಅಧಿವೇಶನ ಶುರುವಾಗ್ತಿದ್ದಂತೆ 3 ಬಿಜೆಪಿ ಶಾಸಕರು ಅಮಾನತು: ಪ್ರತಿಭಟಿಸಿ ಹೊರನಡೆದ ಕಾಂಗ್ರೆಸ್ ಶಾಸಕರು !
ಅಮಾನತುಗೊಂಡ ಬಿಜೆಪಿ ಶಾಸಕರು
TV9 Web
| Edited By: |

Updated on: Mar 07, 2022 | 4:47 PM

Share

ತೆಲಂಗಾಣ ಬಿಜೆಪಿ ಶಾಸಕರಾದ (BJP MLAs) ಟಿ.ರಾಜಾ ಸಿಂಗ್​, ಎಂ.ರಘುನಂದನ್​ ರಾವ್​ ಮತ್ತು ಎಟೆಲಾ ರಾಜೇಂದರ್​ ಅವರನ್ನು ತೆಲಂಗಾಣ ವಿಧಾನಸಭೆಯಿಂದ ಇಂದು ಅಮಾನತು ಮಾಡಲಾಗಿದೆ. ತಮ್ಮ ಅಮಾನತನ್ನು ವಿರೋಧಿಸಿ ಈ ಮೂರು ಶಾಸಕರು ವಿಧಾನಸಭೆಯ ಹೊರಗೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.  ಬಿಜೆಪಿ ಶಾಸಕರನ್ನು ಅಮಾನತು ಮಾಡುವ  ಪ್ರಸ್ತಾವನೆಯನ್ನು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಮಂಡಿಸಿದ್ದರು.

ತೆಲಂಗಾಣ ವಿಧಾನಸಭೆಯಲ್ಲಿ ಇಂದಿನಿಂದ ಬಜೆಟ್​ ಅಧಿವೇಶನ ಪ್ರಾರಂಭವಾಗಿದೆ. ಇಂದು ಮುಂಜಾನೆ ಅಧಿವೇಶನ ಪ್ರಾರಂಭವಾದ ಕೆಲವೇ ಹೊತ್ತಲ್ಲಿ, ಈ ಮೂವರೂ ಬಿಜೆಪಿ ಶಾಸಕರನ್ನು ಅಮಾನತು ಮಾಡುವ ಪ್ರಸ್ತಾಪವನ್ನು ಸಚಿವ ತಲಸಾನಿ ಶ್ರೀನಿವಾಸ್​ ಯಾದವ್ ಮಂಡಿಸಿದರು. ಅದರಂತೆ ಬಜೆಟ್ ಅಧಿವೇಶನ ಮುಗಿಯುವವರೆಗೂ ಇವರು ಅಮಾನತಿನಲ್ಲಿಯೇ ಇರುತ್ತಾರೆ. ಬಜೆಟ್​ ಅಧಿವೇಶನದ ಪ್ರಾರಂಭದಲ್ಲಿ ರಾಜ್ಯಪಾಲರ ಭಾಷಣ ನಿಗದಿ ಪಡಿಸಿಲ್ಲ ಎಂಬ ಕಾರಣಕ್ಕೆ, ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಈ ಮೂವರೂ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸುವ ಯೋಜನೆ ಹಾಕಿಕೊಂಡಿದ್ದರು. ಪ್ರತಿಭಟನೆ ಮೂಲಕ ಅಧಿವೇಶನ ಹಾಳು ಮಾಡುತ್ತಾರೆ ಎಂಬ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ.

ಹೊರನಡೆದ ಕಾಂಗ್ರೆಸ್ ಶಾಸಕರು

ಈ ಬಜೆಟ್ ಅಧಿವೇಶನದ ವೇಳೆ ಕಾಂಗ್ರೆಸ್ ಶಾಸಕರೂ ಕೂಡ ಹೊರನಡೆದಿದ್ದಾರೆ. ವಿಧಾನಸಭೆ ಸ್ಪೀಕರ್​ ಪೋಚಾರಂ ಶ್ರೀನಿವಾಸ್ ಅವರು ಏಕಪಕ್ಷೀಯವಾಗಿ ಸದನ ನಡೆಸುತ್ತಿದ್ದಾರೆ. ಎಲ್ಲ ನಿಯಮಗಳನ್ನೂ ಉಲ್ಲಂಘಿಸುತ್ತಿದ್ದಾರೆ. ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶವನ್ನೇ ಕೊಡುತ್ತಿಲ್ಲ. ಹೀಗಾಗಿ ನಾವು ಸದನದಿಂದ ಹೊರನಡೆಯುತ್ತೇವೆ ಎಂದು ಹೇಳಿದ್ದಾರೆ.

ಈ ಬಾರಿ ಬಜೆಟ್​ ಅಧಿವೇಶನದ ಪ್ರಾರಂಭದಲ್ಲಿ ರಾಜ್ಯಪಾಲರ ಭಾಷಣ ಅವಶ್ಯಕತೆ ಇಲ್ಲ ಎಂದು ಹಿಂದೆಯೇ ಟಿಆರ್​ಎಸ್​ ಹೇಳಿದೆ.  ಬಜೆಟ್​ ಅಧಿವೇಶನವೆಂದು ಹೊಸದಾಗಿ ಶುರು ಮಾಡುತ್ತಿಲ್ಲ. ಅದಕ್ಕೂ ಪೂರ್ವ ನಡೆಯುತ್ತಿದ್ದ ಅಧಿವೇಶನವನ್ನೇ ಮುಂದುವರಿಸಲಾಗಿದೆ. ಹಾಗಾಗಿ ರಾಜ್ಯಪಾಲರ ಭಾಷಣ ಬೇಡ ಎಂಬ ಸ್ಪಷ್ಟನೆ ನೀಡಿತ್ತು. ಆದರೆ ಟಿಆರ್​ಎಸ್​ನ ಈ ನಿರ್ಧಾರವನ್ನು ಬಿಜೆಪಿ-ಕಾಂಗ್ರೆಸ್​ಗಳು ಖಂಡಿಸಿವೆ. ಇದು ರಾಜ್ಯಪಾಲರಿಗೆ ಅಗೌರವ ನೀಡಿದಂತೆ ಎಂದು ಹೇಳಿವೆ.

ಇದನ್ನೂ ಓದಿ: ‘ವೇದ’ ಸಿನಿಮಾ ಮಾಡುವಾಗ ನನ್ನಲ್ಲಿ ಅಪ್ಪುನ ಹುಡಕೋ ಪ್ರಯತ್ನ ಮಾಡಿದ್ದೇನೆ; ಶಿವರಾಜ್​ಕುಮಾರ್

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ