AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ ಅಧಿವೇಶನ ಶುರುವಾಗ್ತಿದ್ದಂತೆ 3 ಬಿಜೆಪಿ ಶಾಸಕರು ಅಮಾನತು: ಪ್ರತಿಭಟಿಸಿ ಹೊರನಡೆದ ಕಾಂಗ್ರೆಸ್ ಶಾಸಕರು !

ಈ ಬಾರಿ ಬಜೆಟ್​ ಅಧಿವೇಶನದ ಪ್ರಾರಂಭದಲ್ಲಿ ರಾಜ್ಯಪಾಲರ ಭಾಷಣ ಅವಶ್ಯಕತೆ ಇಲ್ಲ ಎಂದು ಹಿಂದೆಯೇ ಟಿಆರ್​ಎಸ್​ ಹೇಳಿದೆ. ಇದನ್ನು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ವಿರೋಧಿಸುತ್ತಿವೆ.

ಬಜೆಟ್​ ಅಧಿವೇಶನ ಶುರುವಾಗ್ತಿದ್ದಂತೆ 3 ಬಿಜೆಪಿ ಶಾಸಕರು ಅಮಾನತು: ಪ್ರತಿಭಟಿಸಿ ಹೊರನಡೆದ ಕಾಂಗ್ರೆಸ್ ಶಾಸಕರು !
ಅಮಾನತುಗೊಂಡ ಬಿಜೆಪಿ ಶಾಸಕರು
TV9 Web
| Edited By: |

Updated on: Mar 07, 2022 | 4:47 PM

Share

ತೆಲಂಗಾಣ ಬಿಜೆಪಿ ಶಾಸಕರಾದ (BJP MLAs) ಟಿ.ರಾಜಾ ಸಿಂಗ್​, ಎಂ.ರಘುನಂದನ್​ ರಾವ್​ ಮತ್ತು ಎಟೆಲಾ ರಾಜೇಂದರ್​ ಅವರನ್ನು ತೆಲಂಗಾಣ ವಿಧಾನಸಭೆಯಿಂದ ಇಂದು ಅಮಾನತು ಮಾಡಲಾಗಿದೆ. ತಮ್ಮ ಅಮಾನತನ್ನು ವಿರೋಧಿಸಿ ಈ ಮೂರು ಶಾಸಕರು ವಿಧಾನಸಭೆಯ ಹೊರಗೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.  ಬಿಜೆಪಿ ಶಾಸಕರನ್ನು ಅಮಾನತು ಮಾಡುವ  ಪ್ರಸ್ತಾವನೆಯನ್ನು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಮಂಡಿಸಿದ್ದರು.

ತೆಲಂಗಾಣ ವಿಧಾನಸಭೆಯಲ್ಲಿ ಇಂದಿನಿಂದ ಬಜೆಟ್​ ಅಧಿವೇಶನ ಪ್ರಾರಂಭವಾಗಿದೆ. ಇಂದು ಮುಂಜಾನೆ ಅಧಿವೇಶನ ಪ್ರಾರಂಭವಾದ ಕೆಲವೇ ಹೊತ್ತಲ್ಲಿ, ಈ ಮೂವರೂ ಬಿಜೆಪಿ ಶಾಸಕರನ್ನು ಅಮಾನತು ಮಾಡುವ ಪ್ರಸ್ತಾಪವನ್ನು ಸಚಿವ ತಲಸಾನಿ ಶ್ರೀನಿವಾಸ್​ ಯಾದವ್ ಮಂಡಿಸಿದರು. ಅದರಂತೆ ಬಜೆಟ್ ಅಧಿವೇಶನ ಮುಗಿಯುವವರೆಗೂ ಇವರು ಅಮಾನತಿನಲ್ಲಿಯೇ ಇರುತ್ತಾರೆ. ಬಜೆಟ್​ ಅಧಿವೇಶನದ ಪ್ರಾರಂಭದಲ್ಲಿ ರಾಜ್ಯಪಾಲರ ಭಾಷಣ ನಿಗದಿ ಪಡಿಸಿಲ್ಲ ಎಂಬ ಕಾರಣಕ್ಕೆ, ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಈ ಮೂವರೂ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸುವ ಯೋಜನೆ ಹಾಕಿಕೊಂಡಿದ್ದರು. ಪ್ರತಿಭಟನೆ ಮೂಲಕ ಅಧಿವೇಶನ ಹಾಳು ಮಾಡುತ್ತಾರೆ ಎಂಬ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ.

ಹೊರನಡೆದ ಕಾಂಗ್ರೆಸ್ ಶಾಸಕರು

ಈ ಬಜೆಟ್ ಅಧಿವೇಶನದ ವೇಳೆ ಕಾಂಗ್ರೆಸ್ ಶಾಸಕರೂ ಕೂಡ ಹೊರನಡೆದಿದ್ದಾರೆ. ವಿಧಾನಸಭೆ ಸ್ಪೀಕರ್​ ಪೋಚಾರಂ ಶ್ರೀನಿವಾಸ್ ಅವರು ಏಕಪಕ್ಷೀಯವಾಗಿ ಸದನ ನಡೆಸುತ್ತಿದ್ದಾರೆ. ಎಲ್ಲ ನಿಯಮಗಳನ್ನೂ ಉಲ್ಲಂಘಿಸುತ್ತಿದ್ದಾರೆ. ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶವನ್ನೇ ಕೊಡುತ್ತಿಲ್ಲ. ಹೀಗಾಗಿ ನಾವು ಸದನದಿಂದ ಹೊರನಡೆಯುತ್ತೇವೆ ಎಂದು ಹೇಳಿದ್ದಾರೆ.

ಈ ಬಾರಿ ಬಜೆಟ್​ ಅಧಿವೇಶನದ ಪ್ರಾರಂಭದಲ್ಲಿ ರಾಜ್ಯಪಾಲರ ಭಾಷಣ ಅವಶ್ಯಕತೆ ಇಲ್ಲ ಎಂದು ಹಿಂದೆಯೇ ಟಿಆರ್​ಎಸ್​ ಹೇಳಿದೆ.  ಬಜೆಟ್​ ಅಧಿವೇಶನವೆಂದು ಹೊಸದಾಗಿ ಶುರು ಮಾಡುತ್ತಿಲ್ಲ. ಅದಕ್ಕೂ ಪೂರ್ವ ನಡೆಯುತ್ತಿದ್ದ ಅಧಿವೇಶನವನ್ನೇ ಮುಂದುವರಿಸಲಾಗಿದೆ. ಹಾಗಾಗಿ ರಾಜ್ಯಪಾಲರ ಭಾಷಣ ಬೇಡ ಎಂಬ ಸ್ಪಷ್ಟನೆ ನೀಡಿತ್ತು. ಆದರೆ ಟಿಆರ್​ಎಸ್​ನ ಈ ನಿರ್ಧಾರವನ್ನು ಬಿಜೆಪಿ-ಕಾಂಗ್ರೆಸ್​ಗಳು ಖಂಡಿಸಿವೆ. ಇದು ರಾಜ್ಯಪಾಲರಿಗೆ ಅಗೌರವ ನೀಡಿದಂತೆ ಎಂದು ಹೇಳಿವೆ.

ಇದನ್ನೂ ಓದಿ: ‘ವೇದ’ ಸಿನಿಮಾ ಮಾಡುವಾಗ ನನ್ನಲ್ಲಿ ಅಪ್ಪುನ ಹುಡಕೋ ಪ್ರಯತ್ನ ಮಾಡಿದ್ದೇನೆ; ಶಿವರಾಜ್​ಕುಮಾರ್

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ