AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಬಿಜೆಪಿ ಸಂಸದನ ಮನೆ ಹೊರಗೆ ಮೂರು ಬಾಂಬ್​ ಸ್ಫೋಟ; ಟಿಎಂಸಿ ಮೇಲೆ ಆರೋಪ

ಈ ವರ್ಷದ ಏಪ್ರಿಲ್​​ ತಿಂಗಳಲ್ಲಿ, ಅರ್ಜುನ್​ ಸಿಂಗ್​ ತಮ್ಮ ಮೇಲೆ ಗುಂಪೊಂದು ದಾಳಿ ಮಾಡಿದೆ ಎಂದು ಆರೋಪ ಮಾಡಿದ್ದರು. ಉತ್ತರ ಕೋಲ್ಕತ್ತದ ಬೆಲ್ಗಾಚಿಯಾದಲ್ಲಿ ನನ್ನ ಮೇಲೆ ಗುಂಡಿನ ದಾಳಿ ಮಾಡಲು ಪ್ರಯತ್ನ ನಡೆದಿತ್ತು.

ಪಶ್ಚಿಮ ಬಂಗಾಳ ಬಿಜೆಪಿ ಸಂಸದನ ಮನೆ ಹೊರಗೆ ಮೂರು ಬಾಂಬ್​ ಸ್ಫೋಟ; ಟಿಎಂಸಿ ಮೇಲೆ ಆರೋಪ
ಬಿಜೆಪಿ ಸಂಸದ ಅರ್ಜುನ್ ಸಿಂಗ್​
TV9 Web
| Updated By: Lakshmi Hegde|

Updated on:Sep 08, 2021 | 11:04 AM

Share

ಕೋಲ್ಕತ್ತ: ಪಶ್ಚಿಮ ಬಂಗಾಳ (West Bengal) ಬಿಜೆಪಿ ಸಂಸದ ಅರ್ಜುನ್​ ಸಿಂಗ್​​ (BJP MP Arjun Singh)ಅವರ ಕೋಲ್ಕತ್ತದಲ್ಲಿರುವ ಮನೆಯ ಬಳಿ ಇಂದು ಮುಂಜಾನೆ ಮೂರು ಬಾಂಬ್​ಗಳನ್ನು ಎಸೆಯಲಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನಕರ್​ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಎಂಪಿ ಅರ್ಜುನ್​ ಸಿಂಗ್​ ಮನೆ ಬಳಿ ನಡೆದ ಬಾಂಬ್​ ದಾಳಿ ತುಂಬ ಆತಂಕ ಹುಟ್ಟಿಸಿದೆ. ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಿಲ್ಲುವಂತೆ ಕಾಣುತ್ತಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯೇ ಅಪಾಯದಲ್ಲಿದೆ ಎನ್ನಿಸುತ್ತಿದೆ ಎಂದು ಹೇಳಿದ್ದಾರೆ. ಈ ಬಾಂಬ್​ ದಾಳಿಗೆ ತೃಣಮೂಲ ಕಾಂಗ್ರೆಸ್​ ಪಕ್ಷವೇ ಕಾರಣವೆಂದು ಬಿಜೆಪಿ ಆರೋಪ ಮಾಡಿದೆ.

ಈ ಮಧ್ಯೆ ಟಿಎಂಸಿ ತಮಗೂ, ಬಾಂಬ್​ ದಾಳಿಗೂ ಸಂಬಂಧವಿಲ್ಲ ಎಂದು ಹೇಳಿದೆ. ಬಿಜೆಪಿಯಲ್ಲಿ ಆಂತರಿಕ ಕಚ್ಚಾಟವಿದೆ. ಅವರೇ ಯಾರೋ ಸಂಸದನ ಮನೆಯನ್ನು ಗುರಿಯಾಗಿಸಿಕೊಂಡು ಬಾಂಬ್​ ದಾಳಿ ನಡೆಸಿದ್ದಾರೆ ಎಂದು ಹೇಳಿದೆ. ಪೊಲೀಸರು ತನಿಖೆ ಶುರು ಮಾಡಿದ್ದು, ಸಿಸಿಟಿವಿ ಫೂಟೇಜ್​ಗಳನ್ನೂ ಸ್ಕ್ಯಾನ್ ಮಾಡುತ್ತಿದ್ದಾರೆ. ಅರ್ಜುನ್​ ಸಿಂಗ್​ ಮನೆಯೆದುರು ಭದ್ರತೆಯನ್ನು ಹೆಚ್ಚಿಸಲಾಗಿದೆ. ಹಾಗೇ, ದಾಳಿಯ ಹಿಂದೆ ಯಾರ ಕೈವಾಡವಿದೆ ಎಂದು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ಈ ವರ್ಷದ ಏಪ್ರಿಲ್​​ ತಿಂಗಳಲ್ಲಿ, ಅರ್ಜುನ್​ ಸಿಂಗ್​ ತಮ್ಮ ಮೇಲೆ ಗುಂಪೊಂದು ದಾಳಿ ಮಾಡಿದೆ ಎಂದು ಆರೋಪ ಮಾಡಿದ್ದರು. ಉತ್ತರ ಕೋಲ್ಕತ್ತದ ಬೆಲ್ಗಾಚಿಯಾದಲ್ಲಿ ನನ್ನ ಮೇಲೆ ಗುಂಡಿನ ದಾಳಿ ಮಾಡಲು ಪ್ರಯತ್ನ ನಡೆದಿತ್ತು. ನನ್ನ ರಕ್ಷಣಾ ಸಿಬ್ಬಂದಿ ಕಾಪಾಡಿದರು ಎಂದು ಆಗ ಹೇಳಿದ್ದರು. ಅರ್ಜುನ್​ ಸಿಂಗ್​ ಮೊದಲು ತೃಣಮೂಲ ಕಾಂಗ್ರೆಸ್ ಶಾಸಕರೇ ಆಗಿದ್ದರು. 2019ರ ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಸೇರಿ, ಬಾರಕ್​ಪುರ ಕ್ಷೇತ್ರದಲ್ಲಿ ಗೆದ್ದು ಸಂಸದರಾಗಿದ್ದಾರೆ.

ಇದನ್ನೂ ಓದಿ: ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್ ವಿಚಾರ; ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ

ಇಲ್ಲಿ ಕೇವಲ ನಾಲ್ಕು ಗಂಟೆಗಳ ಅವಧಿಯಲ್ಲಿ ಜಾತ್ರೆ ಮುಗಿಯುತ್ತೆ, ಚರ್ಮ ಸಮಸ್ಯೆ ಇರುವವರು ದರ್ಶನ ಮಾಡದೆ ಹೋಗಲ್ಲ

Published On - 11:04 am, Wed, 8 September 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!