AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಬಿಜೆಪಿ ಸಂಸದನ ಮನೆ ಹೊರಗೆ ಮೂರು ಬಾಂಬ್​ ಸ್ಫೋಟ; ಟಿಎಂಸಿ ಮೇಲೆ ಆರೋಪ

ಈ ವರ್ಷದ ಏಪ್ರಿಲ್​​ ತಿಂಗಳಲ್ಲಿ, ಅರ್ಜುನ್​ ಸಿಂಗ್​ ತಮ್ಮ ಮೇಲೆ ಗುಂಪೊಂದು ದಾಳಿ ಮಾಡಿದೆ ಎಂದು ಆರೋಪ ಮಾಡಿದ್ದರು. ಉತ್ತರ ಕೋಲ್ಕತ್ತದ ಬೆಲ್ಗಾಚಿಯಾದಲ್ಲಿ ನನ್ನ ಮೇಲೆ ಗುಂಡಿನ ದಾಳಿ ಮಾಡಲು ಪ್ರಯತ್ನ ನಡೆದಿತ್ತು.

ಪಶ್ಚಿಮ ಬಂಗಾಳ ಬಿಜೆಪಿ ಸಂಸದನ ಮನೆ ಹೊರಗೆ ಮೂರು ಬಾಂಬ್​ ಸ್ಫೋಟ; ಟಿಎಂಸಿ ಮೇಲೆ ಆರೋಪ
ಬಿಜೆಪಿ ಸಂಸದ ಅರ್ಜುನ್ ಸಿಂಗ್​
TV9 Web
| Edited By: |

Updated on:Sep 08, 2021 | 11:04 AM

Share

ಕೋಲ್ಕತ್ತ: ಪಶ್ಚಿಮ ಬಂಗಾಳ (West Bengal) ಬಿಜೆಪಿ ಸಂಸದ ಅರ್ಜುನ್​ ಸಿಂಗ್​​ (BJP MP Arjun Singh)ಅವರ ಕೋಲ್ಕತ್ತದಲ್ಲಿರುವ ಮನೆಯ ಬಳಿ ಇಂದು ಮುಂಜಾನೆ ಮೂರು ಬಾಂಬ್​ಗಳನ್ನು ಎಸೆಯಲಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನಕರ್​ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಎಂಪಿ ಅರ್ಜುನ್​ ಸಿಂಗ್​ ಮನೆ ಬಳಿ ನಡೆದ ಬಾಂಬ್​ ದಾಳಿ ತುಂಬ ಆತಂಕ ಹುಟ್ಟಿಸಿದೆ. ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಿಲ್ಲುವಂತೆ ಕಾಣುತ್ತಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯೇ ಅಪಾಯದಲ್ಲಿದೆ ಎನ್ನಿಸುತ್ತಿದೆ ಎಂದು ಹೇಳಿದ್ದಾರೆ. ಈ ಬಾಂಬ್​ ದಾಳಿಗೆ ತೃಣಮೂಲ ಕಾಂಗ್ರೆಸ್​ ಪಕ್ಷವೇ ಕಾರಣವೆಂದು ಬಿಜೆಪಿ ಆರೋಪ ಮಾಡಿದೆ.

ಈ ಮಧ್ಯೆ ಟಿಎಂಸಿ ತಮಗೂ, ಬಾಂಬ್​ ದಾಳಿಗೂ ಸಂಬಂಧವಿಲ್ಲ ಎಂದು ಹೇಳಿದೆ. ಬಿಜೆಪಿಯಲ್ಲಿ ಆಂತರಿಕ ಕಚ್ಚಾಟವಿದೆ. ಅವರೇ ಯಾರೋ ಸಂಸದನ ಮನೆಯನ್ನು ಗುರಿಯಾಗಿಸಿಕೊಂಡು ಬಾಂಬ್​ ದಾಳಿ ನಡೆಸಿದ್ದಾರೆ ಎಂದು ಹೇಳಿದೆ. ಪೊಲೀಸರು ತನಿಖೆ ಶುರು ಮಾಡಿದ್ದು, ಸಿಸಿಟಿವಿ ಫೂಟೇಜ್​ಗಳನ್ನೂ ಸ್ಕ್ಯಾನ್ ಮಾಡುತ್ತಿದ್ದಾರೆ. ಅರ್ಜುನ್​ ಸಿಂಗ್​ ಮನೆಯೆದುರು ಭದ್ರತೆಯನ್ನು ಹೆಚ್ಚಿಸಲಾಗಿದೆ. ಹಾಗೇ, ದಾಳಿಯ ಹಿಂದೆ ಯಾರ ಕೈವಾಡವಿದೆ ಎಂದು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ಈ ವರ್ಷದ ಏಪ್ರಿಲ್​​ ತಿಂಗಳಲ್ಲಿ, ಅರ್ಜುನ್​ ಸಿಂಗ್​ ತಮ್ಮ ಮೇಲೆ ಗುಂಪೊಂದು ದಾಳಿ ಮಾಡಿದೆ ಎಂದು ಆರೋಪ ಮಾಡಿದ್ದರು. ಉತ್ತರ ಕೋಲ್ಕತ್ತದ ಬೆಲ್ಗಾಚಿಯಾದಲ್ಲಿ ನನ್ನ ಮೇಲೆ ಗುಂಡಿನ ದಾಳಿ ಮಾಡಲು ಪ್ರಯತ್ನ ನಡೆದಿತ್ತು. ನನ್ನ ರಕ್ಷಣಾ ಸಿಬ್ಬಂದಿ ಕಾಪಾಡಿದರು ಎಂದು ಆಗ ಹೇಳಿದ್ದರು. ಅರ್ಜುನ್​ ಸಿಂಗ್​ ಮೊದಲು ತೃಣಮೂಲ ಕಾಂಗ್ರೆಸ್ ಶಾಸಕರೇ ಆಗಿದ್ದರು. 2019ರ ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಸೇರಿ, ಬಾರಕ್​ಪುರ ಕ್ಷೇತ್ರದಲ್ಲಿ ಗೆದ್ದು ಸಂಸದರಾಗಿದ್ದಾರೆ.

ಇದನ್ನೂ ಓದಿ: ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್ ವಿಚಾರ; ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ

ಇಲ್ಲಿ ಕೇವಲ ನಾಲ್ಕು ಗಂಟೆಗಳ ಅವಧಿಯಲ್ಲಿ ಜಾತ್ರೆ ಮುಗಿಯುತ್ತೆ, ಚರ್ಮ ಸಮಸ್ಯೆ ಇರುವವರು ದರ್ಶನ ಮಾಡದೆ ಹೋಗಲ್ಲ

Published On - 11:04 am, Wed, 8 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!