AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಬಿಜೆಪಿ ಸಂಸದನ ಮನೆ ಹೊರಗೆ ಮೂರು ಬಾಂಬ್​ ಸ್ಫೋಟ; ಟಿಎಂಸಿ ಮೇಲೆ ಆರೋಪ

ಈ ವರ್ಷದ ಏಪ್ರಿಲ್​​ ತಿಂಗಳಲ್ಲಿ, ಅರ್ಜುನ್​ ಸಿಂಗ್​ ತಮ್ಮ ಮೇಲೆ ಗುಂಪೊಂದು ದಾಳಿ ಮಾಡಿದೆ ಎಂದು ಆರೋಪ ಮಾಡಿದ್ದರು. ಉತ್ತರ ಕೋಲ್ಕತ್ತದ ಬೆಲ್ಗಾಚಿಯಾದಲ್ಲಿ ನನ್ನ ಮೇಲೆ ಗುಂಡಿನ ದಾಳಿ ಮಾಡಲು ಪ್ರಯತ್ನ ನಡೆದಿತ್ತು.

ಪಶ್ಚಿಮ ಬಂಗಾಳ ಬಿಜೆಪಿ ಸಂಸದನ ಮನೆ ಹೊರಗೆ ಮೂರು ಬಾಂಬ್​ ಸ್ಫೋಟ; ಟಿಎಂಸಿ ಮೇಲೆ ಆರೋಪ
ಬಿಜೆಪಿ ಸಂಸದ ಅರ್ಜುನ್ ಸಿಂಗ್​
TV9 Web
| Edited By: |

Updated on:Sep 08, 2021 | 11:04 AM

Share

ಕೋಲ್ಕತ್ತ: ಪಶ್ಚಿಮ ಬಂಗಾಳ (West Bengal) ಬಿಜೆಪಿ ಸಂಸದ ಅರ್ಜುನ್​ ಸಿಂಗ್​​ (BJP MP Arjun Singh)ಅವರ ಕೋಲ್ಕತ್ತದಲ್ಲಿರುವ ಮನೆಯ ಬಳಿ ಇಂದು ಮುಂಜಾನೆ ಮೂರು ಬಾಂಬ್​ಗಳನ್ನು ಎಸೆಯಲಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನಕರ್​ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಎಂಪಿ ಅರ್ಜುನ್​ ಸಿಂಗ್​ ಮನೆ ಬಳಿ ನಡೆದ ಬಾಂಬ್​ ದಾಳಿ ತುಂಬ ಆತಂಕ ಹುಟ್ಟಿಸಿದೆ. ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಿಲ್ಲುವಂತೆ ಕಾಣುತ್ತಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯೇ ಅಪಾಯದಲ್ಲಿದೆ ಎನ್ನಿಸುತ್ತಿದೆ ಎಂದು ಹೇಳಿದ್ದಾರೆ. ಈ ಬಾಂಬ್​ ದಾಳಿಗೆ ತೃಣಮೂಲ ಕಾಂಗ್ರೆಸ್​ ಪಕ್ಷವೇ ಕಾರಣವೆಂದು ಬಿಜೆಪಿ ಆರೋಪ ಮಾಡಿದೆ.

ಈ ಮಧ್ಯೆ ಟಿಎಂಸಿ ತಮಗೂ, ಬಾಂಬ್​ ದಾಳಿಗೂ ಸಂಬಂಧವಿಲ್ಲ ಎಂದು ಹೇಳಿದೆ. ಬಿಜೆಪಿಯಲ್ಲಿ ಆಂತರಿಕ ಕಚ್ಚಾಟವಿದೆ. ಅವರೇ ಯಾರೋ ಸಂಸದನ ಮನೆಯನ್ನು ಗುರಿಯಾಗಿಸಿಕೊಂಡು ಬಾಂಬ್​ ದಾಳಿ ನಡೆಸಿದ್ದಾರೆ ಎಂದು ಹೇಳಿದೆ. ಪೊಲೀಸರು ತನಿಖೆ ಶುರು ಮಾಡಿದ್ದು, ಸಿಸಿಟಿವಿ ಫೂಟೇಜ್​ಗಳನ್ನೂ ಸ್ಕ್ಯಾನ್ ಮಾಡುತ್ತಿದ್ದಾರೆ. ಅರ್ಜುನ್​ ಸಿಂಗ್​ ಮನೆಯೆದುರು ಭದ್ರತೆಯನ್ನು ಹೆಚ್ಚಿಸಲಾಗಿದೆ. ಹಾಗೇ, ದಾಳಿಯ ಹಿಂದೆ ಯಾರ ಕೈವಾಡವಿದೆ ಎಂದು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ಈ ವರ್ಷದ ಏಪ್ರಿಲ್​​ ತಿಂಗಳಲ್ಲಿ, ಅರ್ಜುನ್​ ಸಿಂಗ್​ ತಮ್ಮ ಮೇಲೆ ಗುಂಪೊಂದು ದಾಳಿ ಮಾಡಿದೆ ಎಂದು ಆರೋಪ ಮಾಡಿದ್ದರು. ಉತ್ತರ ಕೋಲ್ಕತ್ತದ ಬೆಲ್ಗಾಚಿಯಾದಲ್ಲಿ ನನ್ನ ಮೇಲೆ ಗುಂಡಿನ ದಾಳಿ ಮಾಡಲು ಪ್ರಯತ್ನ ನಡೆದಿತ್ತು. ನನ್ನ ರಕ್ಷಣಾ ಸಿಬ್ಬಂದಿ ಕಾಪಾಡಿದರು ಎಂದು ಆಗ ಹೇಳಿದ್ದರು. ಅರ್ಜುನ್​ ಸಿಂಗ್​ ಮೊದಲು ತೃಣಮೂಲ ಕಾಂಗ್ರೆಸ್ ಶಾಸಕರೇ ಆಗಿದ್ದರು. 2019ರ ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಸೇರಿ, ಬಾರಕ್​ಪುರ ಕ್ಷೇತ್ರದಲ್ಲಿ ಗೆದ್ದು ಸಂಸದರಾಗಿದ್ದಾರೆ.

ಇದನ್ನೂ ಓದಿ: ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್ ವಿಚಾರ; ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ

ಇಲ್ಲಿ ಕೇವಲ ನಾಲ್ಕು ಗಂಟೆಗಳ ಅವಧಿಯಲ್ಲಿ ಜಾತ್ರೆ ಮುಗಿಯುತ್ತೆ, ಚರ್ಮ ಸಮಸ್ಯೆ ಇರುವವರು ದರ್ಶನ ಮಾಡದೆ ಹೋಗಲ್ಲ

Published On - 11:04 am, Wed, 8 September 21

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು