AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Derails: ಜಾರ್ಖಂಡ್​ನಲ್ಲಿ ಹಳಿ ತಪ್ಪಿದ ಹೌರಾ-ಮುಂಬೈ ಪ್ಯಾಸೆಂಜರ್ ರೈಲು, ಇಬ್ಬರು ಸಾವು, 20 ಮಂದಿಗೆ ಗಾಯ

ಜಾರ್ಖಂಡ್​ನಲ್ಲಿ ಇಂದು ಮುಂಜಾನೆ ಹೌರಾ-ಮುಂಬೈ ಪ್ಯಾಸೆಂಜರ್ ರೈಲು ಹಳಿತಪ್ಪಿದ್ದು, ಕನಿಷ್ಠ ಐದರಿಂದ ಆರು ಮಂದಿಗೆ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಾರ್ಖಂಡ್‌ನ ಚರಧರ್‌ಪುರ ವಿಭಾಗದ ಬಳಿ ಮುಂಜಾನೆ 3.43 ರ ಸುಮಾರಿಗೆ ಈ ಘಟನೆ ನಡೆದಿದೆ.

Train Derails: ಜಾರ್ಖಂಡ್​ನಲ್ಲಿ ಹಳಿ ತಪ್ಪಿದ ಹೌರಾ-ಮುಂಬೈ ಪ್ಯಾಸೆಂಜರ್ ರೈಲು, ಇಬ್ಬರು ಸಾವು,  20 ಮಂದಿಗೆ ಗಾಯ
ರೈಲುImage Credit source: Livemint
ನಯನಾ ರಾಜೀವ್
|

Updated on:Jul 30, 2024 | 8:34 AM

Share

ಜಾರ್ಖಂಡ್​ನಲ್ಲಿ ಇಂದು ಮುಂಜಾನೆ ಹೌರಾ-ಮುಂಬೈ ಪ್ಯಾಸೆಂಜರ್ ರೈಲು ಹಳಿತಪ್ಪಿದ್ದು, ಇಬ್ಬರು ಸಾವನ್ನಪ್ಪಿದ್ದು, ಕನಿಷ್ಠ  20 ಮಂದಿಗೆ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಾರ್ಖಂಡ್‌ನ ಚರಧರ್‌ಪುರ ವಿಭಾಗದ ಬಳಿ ಮುಂಜಾನೆ 3.43 ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲಿನ 18 ಬೋಗಿಗಳು ಹಳಿ ತಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗಾಯಗೊಂಡ ಎಲ್ಲ ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಎದುರುಗಡೆಯಿಂದ ಬರುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿ ಎದುರಿನಿಂದ ಹಾದು ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಮೇಲೆ ಪರಿಣಾಮ ಬೀರಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಚಕ್ರಧರಪುರ ರೈಲ್ವೆ ವಿಭಾಗದ ಅಧಿಕಾರಿಗಳು, ಪರಿಹಾರ ರೈಲು ಮತ್ತು ಹಲವಾರು ಆಂಬ್ಯುಲೆನ್ಸ್‌ಗಳನ್ನು ಜಿಲ್ಲಾಡಳಿತದಿಂದ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಚಕ್ರಧರಪುರ ರೈಲ್ವೆ ವಿಭಾಗದ ಹಿರಿಯ ಡಿಸಿಎಂ ಆದಿತ್ಯ ಕುಮಾರ್ ಚೌಧರಿ ತಿಳಿಸಿದ್ದಾರೆ.

ಘಟನೆಯಲ್ಲಿ 6 ಮಂದಿ ಗಾಯಗೊಂಡಿರುವ ಬಗ್ಗೆಯೂ ಮಾಹಿತಿ ಲಭಿಸಿದೆ. ಅಲ್ಲದೆ, ಬಾರಾಬಾಂಬೋ ಬಳಿ ರೈಲು ಸಂಖ್ಯೆ 12810 ಹಳಿತಪ್ಪಿದ ಘಟನೆಗಾಗಿ ಆಡಳಿತವು ಸಹಾಯವಾಣಿ ಸಂಖ್ಯೆ 0651-27-87115 ಅನ್ನು ಸಹ ತೆರೆಯಲಾಗಿದೆ. ಸಮೀಪದಲ್ಲಿ ಮತ್ತೊಂದು ಗೂಡ್ಸ್ ರೈಲಿನ ಹಳಿತಪ್ಪಿದೆ, ಆದರೆ ಎರಡು ಅಪಘಾತಗಳು ಏಕಕಾಲದಲ್ಲಿ ಸಂಭವಿಸಿವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹಳಿ ತಪ್ಪಲು ಕಾರಣವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಮೂರು ರೈಲುಗಳನ್ನು ರದ್ದುಗೊಳಿಸಲಾಯಿತು, ಹೌರಾ-ಕಾಂತಬಾಂಜಿ ಇಸ್ಪತ್ ಎಕ್ಸ್‌ಪ್ರೆಸ್ (22861), ಖರಗ್‌ಪುರ-ಧನ್‌ಬಾದ್ ಎಕ್ಸ್‌ಪ್ರೆಸ್ ಮತ್ತು ಹವ್ರಾ-ಬರ್ಬಿಲ್ ಎಕ್ಸ್‌ಪ್ರೆಸ್.

ಸೌತ್ ಬಿಹಾರ್ ಎಕ್ಸ್‌ಪ್ರೆಸ್ (13288) ಅನ್ನು ಬೇರೆ ಮಾರ್ಗಕ್ಕೆ ತಿರುಗಿಸಲಾಯಿತು ಮತ್ತು ಅಸನ್ಸೋಲ್ ಟಾಟಾ ಮೆಮು ಪಾಸ್ ವಿಶೇಷ ರೈಲು (08173) ಅನ್ನು ಅದ್ರಾದಲ್ಲಿ ಅಲ್ಪಾವಧಿಗೆ ನಿಲ್ಲಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:15 am, Tue, 30 July 24

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು