AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Derails: ಜಾರ್ಖಂಡ್​ನಲ್ಲಿ ಹಳಿ ತಪ್ಪಿದ ಹೌರಾ-ಮುಂಬೈ ಪ್ಯಾಸೆಂಜರ್ ರೈಲು, ಇಬ್ಬರು ಸಾವು, 20 ಮಂದಿಗೆ ಗಾಯ

ಜಾರ್ಖಂಡ್​ನಲ್ಲಿ ಇಂದು ಮುಂಜಾನೆ ಹೌರಾ-ಮುಂಬೈ ಪ್ಯಾಸೆಂಜರ್ ರೈಲು ಹಳಿತಪ್ಪಿದ್ದು, ಕನಿಷ್ಠ ಐದರಿಂದ ಆರು ಮಂದಿಗೆ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಾರ್ಖಂಡ್‌ನ ಚರಧರ್‌ಪುರ ವಿಭಾಗದ ಬಳಿ ಮುಂಜಾನೆ 3.43 ರ ಸುಮಾರಿಗೆ ಈ ಘಟನೆ ನಡೆದಿದೆ.

Train Derails: ಜಾರ್ಖಂಡ್​ನಲ್ಲಿ ಹಳಿ ತಪ್ಪಿದ ಹೌರಾ-ಮುಂಬೈ ಪ್ಯಾಸೆಂಜರ್ ರೈಲು, ಇಬ್ಬರು ಸಾವು,  20 ಮಂದಿಗೆ ಗಾಯ
ರೈಲುImage Credit source: Livemint
ನಯನಾ ರಾಜೀವ್
|

Updated on:Jul 30, 2024 | 8:34 AM

Share

ಜಾರ್ಖಂಡ್​ನಲ್ಲಿ ಇಂದು ಮುಂಜಾನೆ ಹೌರಾ-ಮುಂಬೈ ಪ್ಯಾಸೆಂಜರ್ ರೈಲು ಹಳಿತಪ್ಪಿದ್ದು, ಇಬ್ಬರು ಸಾವನ್ನಪ್ಪಿದ್ದು, ಕನಿಷ್ಠ  20 ಮಂದಿಗೆ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಾರ್ಖಂಡ್‌ನ ಚರಧರ್‌ಪುರ ವಿಭಾಗದ ಬಳಿ ಮುಂಜಾನೆ 3.43 ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲಿನ 18 ಬೋಗಿಗಳು ಹಳಿ ತಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗಾಯಗೊಂಡ ಎಲ್ಲ ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಎದುರುಗಡೆಯಿಂದ ಬರುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿ ಎದುರಿನಿಂದ ಹಾದು ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಮೇಲೆ ಪರಿಣಾಮ ಬೀರಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಚಕ್ರಧರಪುರ ರೈಲ್ವೆ ವಿಭಾಗದ ಅಧಿಕಾರಿಗಳು, ಪರಿಹಾರ ರೈಲು ಮತ್ತು ಹಲವಾರು ಆಂಬ್ಯುಲೆನ್ಸ್‌ಗಳನ್ನು ಜಿಲ್ಲಾಡಳಿತದಿಂದ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಚಕ್ರಧರಪುರ ರೈಲ್ವೆ ವಿಭಾಗದ ಹಿರಿಯ ಡಿಸಿಎಂ ಆದಿತ್ಯ ಕುಮಾರ್ ಚೌಧರಿ ತಿಳಿಸಿದ್ದಾರೆ.

ಘಟನೆಯಲ್ಲಿ 6 ಮಂದಿ ಗಾಯಗೊಂಡಿರುವ ಬಗ್ಗೆಯೂ ಮಾಹಿತಿ ಲಭಿಸಿದೆ. ಅಲ್ಲದೆ, ಬಾರಾಬಾಂಬೋ ಬಳಿ ರೈಲು ಸಂಖ್ಯೆ 12810 ಹಳಿತಪ್ಪಿದ ಘಟನೆಗಾಗಿ ಆಡಳಿತವು ಸಹಾಯವಾಣಿ ಸಂಖ್ಯೆ 0651-27-87115 ಅನ್ನು ಸಹ ತೆರೆಯಲಾಗಿದೆ. ಸಮೀಪದಲ್ಲಿ ಮತ್ತೊಂದು ಗೂಡ್ಸ್ ರೈಲಿನ ಹಳಿತಪ್ಪಿದೆ, ಆದರೆ ಎರಡು ಅಪಘಾತಗಳು ಏಕಕಾಲದಲ್ಲಿ ಸಂಭವಿಸಿವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹಳಿ ತಪ್ಪಲು ಕಾರಣವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಮೂರು ರೈಲುಗಳನ್ನು ರದ್ದುಗೊಳಿಸಲಾಯಿತು, ಹೌರಾ-ಕಾಂತಬಾಂಜಿ ಇಸ್ಪತ್ ಎಕ್ಸ್‌ಪ್ರೆಸ್ (22861), ಖರಗ್‌ಪುರ-ಧನ್‌ಬಾದ್ ಎಕ್ಸ್‌ಪ್ರೆಸ್ ಮತ್ತು ಹವ್ರಾ-ಬರ್ಬಿಲ್ ಎಕ್ಸ್‌ಪ್ರೆಸ್.

ಸೌತ್ ಬಿಹಾರ್ ಎಕ್ಸ್‌ಪ್ರೆಸ್ (13288) ಅನ್ನು ಬೇರೆ ಮಾರ್ಗಕ್ಕೆ ತಿರುಗಿಸಲಾಯಿತು ಮತ್ತು ಅಸನ್ಸೋಲ್ ಟಾಟಾ ಮೆಮು ಪಾಸ್ ವಿಶೇಷ ರೈಲು (08173) ಅನ್ನು ಅದ್ರಾದಲ್ಲಿ ಅಲ್ಪಾವಧಿಗೆ ನಿಲ್ಲಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:15 am, Tue, 30 July 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ