ಮತ್ತೆ ಮತಿಗೇಡಿ ಉಗ್ರರ ಅಟ್ಟಹಾಸ, ಮೂವರು CRPF ಯೋಧರು ಹುತಾತ್ಮ

ಶ್ರೀನಗರ: ಉತ್ತರ ಕಾಶ್ಮೀರದ ಹಂದ್ವಾರಾದಲ್ಲಿ ಗುಂಡಿನ ದಾಳಿಯಲ್ಲಿ ಯೋಧರು ಹುತಾತ್ಮರಾದ ಘಟನೆ ಮಾಸುವ ಮುನ್ನವೇ ಮತಿಗೇಡಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಉಗ್ರರ ಆತ್ಮಹುತಿ‌ ದಾಳಿಯಲ್ಲಿ ಮೂವರು ಸಿಆರ್​ಪಿಎಫ್​ ಯೋಧರು ಹುತಾತ್ಮರಾಗಿದ್ದಾರೆ. ಕಳೆದ 2 ದಿನಗಳ ಅಂತರದಲ್ಲಿ 2ನೇ ಬಾರಿಗೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 7 ಮಂದಿ ನಾಗರಿಕರಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಳಿಯಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆಯೂ ಹೊಡೆದುರುಳಿಸಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಮತ್ತೆ ಮತಿಗೇಡಿ ಉಗ್ರರ ಅಟ್ಟಹಾಸ, ಮೂವರು CRPF ಯೋಧರು ಹುತಾತ್ಮ
ಸಾಧು ಶ್ರೀನಾಥ್​

Updated on: May 04, 2020 | 7:35 PM

ಶ್ರೀನಗರ: ಉತ್ತರ ಕಾಶ್ಮೀರದ ಹಂದ್ವಾರಾದಲ್ಲಿ ಗುಂಡಿನ ದಾಳಿಯಲ್ಲಿ ಯೋಧರು ಹುತಾತ್ಮರಾದ ಘಟನೆ ಮಾಸುವ ಮುನ್ನವೇ ಮತಿಗೇಡಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಉಗ್ರರ ಆತ್ಮಹುತಿ‌ ದಾಳಿಯಲ್ಲಿ ಮೂವರು ಸಿಆರ್​ಪಿಎಫ್​ ಯೋಧರು ಹುತಾತ್ಮರಾಗಿದ್ದಾರೆ.

ಕಳೆದ 2 ದಿನಗಳ ಅಂತರದಲ್ಲಿ 2ನೇ ಬಾರಿಗೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 7 ಮಂದಿ ನಾಗರಿಕರಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಳಿಯಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆಯೂ ಹೊಡೆದುರುಳಿಸಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

Published On - 7:34 pm, Mon, 4 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us