AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರ್​ಗಾಂವ್​​ನ ಸಿಎನ್​​ಜಿ ಪಂಪ್​​ನ ಮೂವರು ಉದ್ಯೋಗಿಗಳ ಭೀಕರ ಹತ್ಯೆ; ತಡರಾತ್ರಿ ದುಷ್ಕರ್ಮಿಗಳಿಂದ ಕೃತ್ಯ

ಮೂವರಲ್ಲಿ ಇಬ್ಬರ ಮೃತದೇಹ ಸಿಎನ್​​ಜಿ ಪಂಪ್​​ನ ಮ್ಯಾನೇಜರ್​ ಕೋಣೆಯಲ್ಲಿ ಸಿಕ್ಕಿದ್ದು, ಇನ್ನೊಬ್ಬಾತನ ಶವ ಕೋಣೆಯ ಹೊರಗೆ ಬಿದ್ದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುರ್​ಗಾಂವ್​​ನ ಸಿಎನ್​​ಜಿ ಪಂಪ್​​ನ ಮೂವರು ಉದ್ಯೋಗಿಗಳ ಭೀಕರ ಹತ್ಯೆ; ತಡರಾತ್ರಿ ದುಷ್ಕರ್ಮಿಗಳಿಂದ ಕೃತ್ಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 28, 2022 | 10:29 AM

Share

ಗುರ್​ಗಾಂವ್​​ನ ಸೆಕ್ಟರ್​ 31ರಲ್ಲಿರುವ ಸಿಎನ್​​ಜಿ ಪಂಪ್​ (CNG Pump-ಸಂಕುಚಿತ ನೈಸರ್ಗಿಕ ಅನಿಲ ತುಂಬುವ ಸ್ಥಳ)​ನ ಮೂವರು ಉದ್ಯೋಗಿಗಳನ್ನು ನಿನ್ನೆ ತಡರಾತ್ರಿ ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ತಡರಾತ್ರಿ 2.40ರ ಹೊತ್ತಿಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಮೃತರನ್ನು ಭೂಪೇಂದ್ರ, ಪುಷ್ಪೇಂದ್ರ ಮತ್ತು ನರೇಶ್​ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಉತ್ತರ ಪ್ರದೇಶದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಆರೋಪಿಗಳು ನಾಪತ್ತೆಯಾಗಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಸಿಸಿಟಿವಿ ಫೂಟೇಜ್​​ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದು ದರೋಡೆಗಾಗಿ ನಡೆದ ಹತ್ಯೆ ಆಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವ ಆರಕ್ಷಕರು ಸದ್ಯ ಮೃತದೇಹಗಳನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ.  ಮೂವರಲ್ಲಿ ಇಬ್ಬರ ಮೃತದೇಹ ಸಿಎನ್​​ಜಿ ಪಂಪ್​​ನ ಮ್ಯಾನೇಜರ್​ ಕೋಣೆಯಲ್ಲಿ ಸಿಕ್ಕಿದ್ದು, ಇನ್ನೊಬ್ಬಾತನ ಶವ ಕೋಣೆಯ ಹೊರಗೆ ಬಿದ್ದಿತ್ತು. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೃತ ಭೂಪೇಂದ್ರ ಸಹೋದರ ಧರ್ಮೇಂದ್ರ, ನನಗೆ ಇಂದು ಬೆಳಕು ಹರಿಯುವುದಕ್ಕೂ ಮೊದಲು ಒಂದು ಕರೆ ಬಂತು. ಕೂಡಲೇ ಸಿಎನ್​​ಜಿ ಪಂಪ್​ ಬಳಿ ಹೋದೆ. ಅಲ್ಲಿಗೆ ನನ್ನ ಸೋದರ ಭೂಪೇಂದ್ರ ಶವವಾಗಿ ಬಿದ್ದಿದ್ದ ಎಂದು ಹೇಳಿದ್ದಾರೆ.

ಇದನ್ನೂ ಓದಿ: Video: ಗಡಿಯಲ್ಲಿ ಭಾರತೀಯರಿಗೆ ಹಿಂಸೆ ನೀಡಿದ ರಷ್ಯಾ ಸೈನಿಕರು; ತುಂಬ ಸಂಕಟವಾಗುತ್ತಿದೆ ಎಂದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ

Published On - 9:54 am, Mon, 28 February 22

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ