AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರ್​ಗಾಂವ್​​ನ ಸಿಎನ್​​ಜಿ ಪಂಪ್​​ನ ಮೂವರು ಉದ್ಯೋಗಿಗಳ ಭೀಕರ ಹತ್ಯೆ; ತಡರಾತ್ರಿ ದುಷ್ಕರ್ಮಿಗಳಿಂದ ಕೃತ್ಯ

ಮೂವರಲ್ಲಿ ಇಬ್ಬರ ಮೃತದೇಹ ಸಿಎನ್​​ಜಿ ಪಂಪ್​​ನ ಮ್ಯಾನೇಜರ್​ ಕೋಣೆಯಲ್ಲಿ ಸಿಕ್ಕಿದ್ದು, ಇನ್ನೊಬ್ಬಾತನ ಶವ ಕೋಣೆಯ ಹೊರಗೆ ಬಿದ್ದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುರ್​ಗಾಂವ್​​ನ ಸಿಎನ್​​ಜಿ ಪಂಪ್​​ನ ಮೂವರು ಉದ್ಯೋಗಿಗಳ ಭೀಕರ ಹತ್ಯೆ; ತಡರಾತ್ರಿ ದುಷ್ಕರ್ಮಿಗಳಿಂದ ಕೃತ್ಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 28, 2022 | 10:29 AM

Share

ಗುರ್​ಗಾಂವ್​​ನ ಸೆಕ್ಟರ್​ 31ರಲ್ಲಿರುವ ಸಿಎನ್​​ಜಿ ಪಂಪ್​ (CNG Pump-ಸಂಕುಚಿತ ನೈಸರ್ಗಿಕ ಅನಿಲ ತುಂಬುವ ಸ್ಥಳ)​ನ ಮೂವರು ಉದ್ಯೋಗಿಗಳನ್ನು ನಿನ್ನೆ ತಡರಾತ್ರಿ ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ತಡರಾತ್ರಿ 2.40ರ ಹೊತ್ತಿಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಮೃತರನ್ನು ಭೂಪೇಂದ್ರ, ಪುಷ್ಪೇಂದ್ರ ಮತ್ತು ನರೇಶ್​ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಉತ್ತರ ಪ್ರದೇಶದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಆರೋಪಿಗಳು ನಾಪತ್ತೆಯಾಗಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಸಿಸಿಟಿವಿ ಫೂಟೇಜ್​​ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದು ದರೋಡೆಗಾಗಿ ನಡೆದ ಹತ್ಯೆ ಆಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವ ಆರಕ್ಷಕರು ಸದ್ಯ ಮೃತದೇಹಗಳನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ.  ಮೂವರಲ್ಲಿ ಇಬ್ಬರ ಮೃತದೇಹ ಸಿಎನ್​​ಜಿ ಪಂಪ್​​ನ ಮ್ಯಾನೇಜರ್​ ಕೋಣೆಯಲ್ಲಿ ಸಿಕ್ಕಿದ್ದು, ಇನ್ನೊಬ್ಬಾತನ ಶವ ಕೋಣೆಯ ಹೊರಗೆ ಬಿದ್ದಿತ್ತು. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೃತ ಭೂಪೇಂದ್ರ ಸಹೋದರ ಧರ್ಮೇಂದ್ರ, ನನಗೆ ಇಂದು ಬೆಳಕು ಹರಿಯುವುದಕ್ಕೂ ಮೊದಲು ಒಂದು ಕರೆ ಬಂತು. ಕೂಡಲೇ ಸಿಎನ್​​ಜಿ ಪಂಪ್​ ಬಳಿ ಹೋದೆ. ಅಲ್ಲಿಗೆ ನನ್ನ ಸೋದರ ಭೂಪೇಂದ್ರ ಶವವಾಗಿ ಬಿದ್ದಿದ್ದ ಎಂದು ಹೇಳಿದ್ದಾರೆ.

ಇದನ್ನೂ ಓದಿ: Video: ಗಡಿಯಲ್ಲಿ ಭಾರತೀಯರಿಗೆ ಹಿಂಸೆ ನೀಡಿದ ರಷ್ಯಾ ಸೈನಿಕರು; ತುಂಬ ಸಂಕಟವಾಗುತ್ತಿದೆ ಎಂದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ

Published On - 9:54 am, Mon, 28 February 22

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!