AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರ್​ಗಾಂವ್​​ನ ಸಿಎನ್​​ಜಿ ಪಂಪ್​​ನ ಮೂವರು ಉದ್ಯೋಗಿಗಳ ಭೀಕರ ಹತ್ಯೆ; ತಡರಾತ್ರಿ ದುಷ್ಕರ್ಮಿಗಳಿಂದ ಕೃತ್ಯ

ಮೂವರಲ್ಲಿ ಇಬ್ಬರ ಮೃತದೇಹ ಸಿಎನ್​​ಜಿ ಪಂಪ್​​ನ ಮ್ಯಾನೇಜರ್​ ಕೋಣೆಯಲ್ಲಿ ಸಿಕ್ಕಿದ್ದು, ಇನ್ನೊಬ್ಬಾತನ ಶವ ಕೋಣೆಯ ಹೊರಗೆ ಬಿದ್ದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುರ್​ಗಾಂವ್​​ನ ಸಿಎನ್​​ಜಿ ಪಂಪ್​​ನ ಮೂವರು ಉದ್ಯೋಗಿಗಳ ಭೀಕರ ಹತ್ಯೆ; ತಡರಾತ್ರಿ ದುಷ್ಕರ್ಮಿಗಳಿಂದ ಕೃತ್ಯ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on:Feb 28, 2022 | 10:29 AM

Share

ಗುರ್​ಗಾಂವ್​​ನ ಸೆಕ್ಟರ್​ 31ರಲ್ಲಿರುವ ಸಿಎನ್​​ಜಿ ಪಂಪ್​ (CNG Pump-ಸಂಕುಚಿತ ನೈಸರ್ಗಿಕ ಅನಿಲ ತುಂಬುವ ಸ್ಥಳ)​ನ ಮೂವರು ಉದ್ಯೋಗಿಗಳನ್ನು ನಿನ್ನೆ ತಡರಾತ್ರಿ ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ತಡರಾತ್ರಿ 2.40ರ ಹೊತ್ತಿಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಮೃತರನ್ನು ಭೂಪೇಂದ್ರ, ಪುಷ್ಪೇಂದ್ರ ಮತ್ತು ನರೇಶ್​ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಉತ್ತರ ಪ್ರದೇಶದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಆರೋಪಿಗಳು ನಾಪತ್ತೆಯಾಗಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಸಿಸಿಟಿವಿ ಫೂಟೇಜ್​​ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದು ದರೋಡೆಗಾಗಿ ನಡೆದ ಹತ್ಯೆ ಆಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವ ಆರಕ್ಷಕರು ಸದ್ಯ ಮೃತದೇಹಗಳನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ.  ಮೂವರಲ್ಲಿ ಇಬ್ಬರ ಮೃತದೇಹ ಸಿಎನ್​​ಜಿ ಪಂಪ್​​ನ ಮ್ಯಾನೇಜರ್​ ಕೋಣೆಯಲ್ಲಿ ಸಿಕ್ಕಿದ್ದು, ಇನ್ನೊಬ್ಬಾತನ ಶವ ಕೋಣೆಯ ಹೊರಗೆ ಬಿದ್ದಿತ್ತು. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೃತ ಭೂಪೇಂದ್ರ ಸಹೋದರ ಧರ್ಮೇಂದ್ರ, ನನಗೆ ಇಂದು ಬೆಳಕು ಹರಿಯುವುದಕ್ಕೂ ಮೊದಲು ಒಂದು ಕರೆ ಬಂತು. ಕೂಡಲೇ ಸಿಎನ್​​ಜಿ ಪಂಪ್​ ಬಳಿ ಹೋದೆ. ಅಲ್ಲಿಗೆ ನನ್ನ ಸೋದರ ಭೂಪೇಂದ್ರ ಶವವಾಗಿ ಬಿದ್ದಿದ್ದ ಎಂದು ಹೇಳಿದ್ದಾರೆ.

ಇದನ್ನೂ ಓದಿ: Video: ಗಡಿಯಲ್ಲಿ ಭಾರತೀಯರಿಗೆ ಹಿಂಸೆ ನೀಡಿದ ರಷ್ಯಾ ಸೈನಿಕರು; ತುಂಬ ಸಂಕಟವಾಗುತ್ತಿದೆ ಎಂದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ

Published On - 9:54 am, Mon, 28 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ