AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರ್​ಗಾಂವ್​​ನ ಸಿಎನ್​​ಜಿ ಪಂಪ್​​ನ ಮೂವರು ಉದ್ಯೋಗಿಗಳ ಭೀಕರ ಹತ್ಯೆ; ತಡರಾತ್ರಿ ದುಷ್ಕರ್ಮಿಗಳಿಂದ ಕೃತ್ಯ

ಮೂವರಲ್ಲಿ ಇಬ್ಬರ ಮೃತದೇಹ ಸಿಎನ್​​ಜಿ ಪಂಪ್​​ನ ಮ್ಯಾನೇಜರ್​ ಕೋಣೆಯಲ್ಲಿ ಸಿಕ್ಕಿದ್ದು, ಇನ್ನೊಬ್ಬಾತನ ಶವ ಕೋಣೆಯ ಹೊರಗೆ ಬಿದ್ದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುರ್​ಗಾಂವ್​​ನ ಸಿಎನ್​​ಜಿ ಪಂಪ್​​ನ ಮೂವರು ಉದ್ಯೋಗಿಗಳ ಭೀಕರ ಹತ್ಯೆ; ತಡರಾತ್ರಿ ದುಷ್ಕರ್ಮಿಗಳಿಂದ ಕೃತ್ಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 28, 2022 | 10:29 AM

Share

ಗುರ್​ಗಾಂವ್​​ನ ಸೆಕ್ಟರ್​ 31ರಲ್ಲಿರುವ ಸಿಎನ್​​ಜಿ ಪಂಪ್​ (CNG Pump-ಸಂಕುಚಿತ ನೈಸರ್ಗಿಕ ಅನಿಲ ತುಂಬುವ ಸ್ಥಳ)​ನ ಮೂವರು ಉದ್ಯೋಗಿಗಳನ್ನು ನಿನ್ನೆ ತಡರಾತ್ರಿ ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ತಡರಾತ್ರಿ 2.40ರ ಹೊತ್ತಿಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಮೃತರನ್ನು ಭೂಪೇಂದ್ರ, ಪುಷ್ಪೇಂದ್ರ ಮತ್ತು ನರೇಶ್​ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಉತ್ತರ ಪ್ರದೇಶದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಆರೋಪಿಗಳು ನಾಪತ್ತೆಯಾಗಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಸಿಸಿಟಿವಿ ಫೂಟೇಜ್​​ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದು ದರೋಡೆಗಾಗಿ ನಡೆದ ಹತ್ಯೆ ಆಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವ ಆರಕ್ಷಕರು ಸದ್ಯ ಮೃತದೇಹಗಳನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ.  ಮೂವರಲ್ಲಿ ಇಬ್ಬರ ಮೃತದೇಹ ಸಿಎನ್​​ಜಿ ಪಂಪ್​​ನ ಮ್ಯಾನೇಜರ್​ ಕೋಣೆಯಲ್ಲಿ ಸಿಕ್ಕಿದ್ದು, ಇನ್ನೊಬ್ಬಾತನ ಶವ ಕೋಣೆಯ ಹೊರಗೆ ಬಿದ್ದಿತ್ತು. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೃತ ಭೂಪೇಂದ್ರ ಸಹೋದರ ಧರ್ಮೇಂದ್ರ, ನನಗೆ ಇಂದು ಬೆಳಕು ಹರಿಯುವುದಕ್ಕೂ ಮೊದಲು ಒಂದು ಕರೆ ಬಂತು. ಕೂಡಲೇ ಸಿಎನ್​​ಜಿ ಪಂಪ್​ ಬಳಿ ಹೋದೆ. ಅಲ್ಲಿಗೆ ನನ್ನ ಸೋದರ ಭೂಪೇಂದ್ರ ಶವವಾಗಿ ಬಿದ್ದಿದ್ದ ಎಂದು ಹೇಳಿದ್ದಾರೆ.

ಇದನ್ನೂ ಓದಿ: Video: ಗಡಿಯಲ್ಲಿ ಭಾರತೀಯರಿಗೆ ಹಿಂಸೆ ನೀಡಿದ ರಷ್ಯಾ ಸೈನಿಕರು; ತುಂಬ ಸಂಕಟವಾಗುತ್ತಿದೆ ಎಂದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ

Published On - 9:54 am, Mon, 28 February 22

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ