AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರ್​ಗಾಂವ್​​ನ ಸಿಎನ್​​ಜಿ ಪಂಪ್​​ನ ಮೂವರು ಉದ್ಯೋಗಿಗಳ ಭೀಕರ ಹತ್ಯೆ; ತಡರಾತ್ರಿ ದುಷ್ಕರ್ಮಿಗಳಿಂದ ಕೃತ್ಯ

ಮೂವರಲ್ಲಿ ಇಬ್ಬರ ಮೃತದೇಹ ಸಿಎನ್​​ಜಿ ಪಂಪ್​​ನ ಮ್ಯಾನೇಜರ್​ ಕೋಣೆಯಲ್ಲಿ ಸಿಕ್ಕಿದ್ದು, ಇನ್ನೊಬ್ಬಾತನ ಶವ ಕೋಣೆಯ ಹೊರಗೆ ಬಿದ್ದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುರ್​ಗಾಂವ್​​ನ ಸಿಎನ್​​ಜಿ ಪಂಪ್​​ನ ಮೂವರು ಉದ್ಯೋಗಿಗಳ ಭೀಕರ ಹತ್ಯೆ; ತಡರಾತ್ರಿ ದುಷ್ಕರ್ಮಿಗಳಿಂದ ಕೃತ್ಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 28, 2022 | 10:29 AM

Share

ಗುರ್​ಗಾಂವ್​​ನ ಸೆಕ್ಟರ್​ 31ರಲ್ಲಿರುವ ಸಿಎನ್​​ಜಿ ಪಂಪ್​ (CNG Pump-ಸಂಕುಚಿತ ನೈಸರ್ಗಿಕ ಅನಿಲ ತುಂಬುವ ಸ್ಥಳ)​ನ ಮೂವರು ಉದ್ಯೋಗಿಗಳನ್ನು ನಿನ್ನೆ ತಡರಾತ್ರಿ ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ತಡರಾತ್ರಿ 2.40ರ ಹೊತ್ತಿಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಮೃತರನ್ನು ಭೂಪೇಂದ್ರ, ಪುಷ್ಪೇಂದ್ರ ಮತ್ತು ನರೇಶ್​ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಉತ್ತರ ಪ್ರದೇಶದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಆರೋಪಿಗಳು ನಾಪತ್ತೆಯಾಗಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಸಿಸಿಟಿವಿ ಫೂಟೇಜ್​​ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದು ದರೋಡೆಗಾಗಿ ನಡೆದ ಹತ್ಯೆ ಆಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವ ಆರಕ್ಷಕರು ಸದ್ಯ ಮೃತದೇಹಗಳನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ.  ಮೂವರಲ್ಲಿ ಇಬ್ಬರ ಮೃತದೇಹ ಸಿಎನ್​​ಜಿ ಪಂಪ್​​ನ ಮ್ಯಾನೇಜರ್​ ಕೋಣೆಯಲ್ಲಿ ಸಿಕ್ಕಿದ್ದು, ಇನ್ನೊಬ್ಬಾತನ ಶವ ಕೋಣೆಯ ಹೊರಗೆ ಬಿದ್ದಿತ್ತು. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೃತ ಭೂಪೇಂದ್ರ ಸಹೋದರ ಧರ್ಮೇಂದ್ರ, ನನಗೆ ಇಂದು ಬೆಳಕು ಹರಿಯುವುದಕ್ಕೂ ಮೊದಲು ಒಂದು ಕರೆ ಬಂತು. ಕೂಡಲೇ ಸಿಎನ್​​ಜಿ ಪಂಪ್​ ಬಳಿ ಹೋದೆ. ಅಲ್ಲಿಗೆ ನನ್ನ ಸೋದರ ಭೂಪೇಂದ್ರ ಶವವಾಗಿ ಬಿದ್ದಿದ್ದ ಎಂದು ಹೇಳಿದ್ದಾರೆ.

ಇದನ್ನೂ ಓದಿ: Video: ಗಡಿಯಲ್ಲಿ ಭಾರತೀಯರಿಗೆ ಹಿಂಸೆ ನೀಡಿದ ರಷ್ಯಾ ಸೈನಿಕರು; ತುಂಬ ಸಂಕಟವಾಗುತ್ತಿದೆ ಎಂದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ

Published On - 9:54 am, Mon, 28 February 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ