ರಾಖಿ, ಇಯರ್​ಫೋನ್, ಕೀ ಸೇರಿ 100 ವಸ್ತುಗಳಿದ್ದಿದ್ದು ಅಂಗಡಿಯಲ್ಲಲ್ಲ, ವ್ಯಕ್ತಿಯ ಹೊಟ್ಟೆಯಲ್ಲಿ

ಮೂರು ಗಂಟೆಗಳ ಶಸ್ತ್ರ ಚಿಕಿತ್ಸೆ ಬಳಿಕ ವೈದ್ಯರಿಗೆ ಕಾದಿತ್ತು ಅಚ್ಚರಿ, ರಾಖಿ, ಇಯರ್​ಫೋನ್, ಬೀಗ, ಕೀ ಸೇರಿ ವ್ಯಕ್ತಿಯ ಹೊಟ್ಟೆಯಿಂದ ಬರೋಬ್ಬರಿ 100 ವಸ್ತುಗಳನ್ನು ವೈದ್ಯರು ಹೊರತೆಗೆದಿದ್ದರು. ಘಟನೆ ಏನು?: ಪಂಜಾಬ್​ನ ಮೊಗಾದ 40 ವರ್ಷದ ವ್ಯಕ್ತಿಯೊಬ್ಬರು ಕಳೆದ ಎರಡು ದಿನಗಳಿಂದ ತುಂಬಾ ಹೊಟ್ಟೆನೋವು ಬರುತ್ತಿದೆ ಎಂದು ವೈದ್ಯರ ಬಳಿಗೆ ಬಂದಿದ್ದರು, ವೈದ್ಯರು ಎಕ್ಸ್​-ರೇ ಮಾಡಿ ನೋಡಿದಾಗ ಅವರ ಹೊಟ್ಟೆಯಲ್ಲಿ ಹಲವು ವಸ್ತುಗಳಿರುವುದು ಕಂಡುಬಂದಿದೆ. ಹಾಗಾಗಿ ಕೂಡಲೇ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ರಾಖಿ, ಇಯರ್​ಫೋನ್, ಕೀ ಸೇರಿ 100 ವಸ್ತುಗಳಿದ್ದಿದ್ದು ಅಂಗಡಿಯಲ್ಲಲ್ಲ, ವ್ಯಕ್ತಿಯ ಹೊಟ್ಟೆಯಲ್ಲಿ
ಶಸ್ತ್ರಚಿಕಿತ್ಸೆImage Credit source: India Today
Follow us
|

Updated on: Sep 29, 2023 | 8:08 AM

ಮೂರು ಗಂಟೆಗಳ ಶಸ್ತ್ರ ಚಿಕಿತ್ಸೆ ಬಳಿಕ ವೈದ್ಯರಿಗೆ ಕಾದಿತ್ತು ಅಚ್ಚರಿ, ರಾಖಿ, ಇಯರ್​ಫೋನ್, ಬೀಗ, ಕೀ ಸೇರಿ ವ್ಯಕ್ತಿಯ ಹೊಟ್ಟೆಯಿಂದ ಬರೋಬ್ಬರಿ 100 ವಸ್ತುಗಳನ್ನು ವೈದ್ಯರು ಹೊರತೆಗೆದಿದ್ದರು. ಘಟನೆ ಏನು?: ಪಂಜಾಬ್​ನ ಮೊಗಾದ 40 ವರ್ಷದ ವ್ಯಕ್ತಿಯೊಬ್ಬರು ಕಳೆದ ಎರಡು ದಿನಗಳಿಂದ ತುಂಬಾ ಹೊಟ್ಟೆನೋವು ಬರುತ್ತಿದೆ ಎಂದು ವೈದ್ಯರ ಬಳಿಗೆ ಬಂದಿದ್ದರು, ವೈದ್ಯರು ಎಕ್ಸ್​-ರೇ ಮಾಡಿ ನೋಡಿದಾಗ ಅವರ ಹೊಟ್ಟೆಯಲ್ಲಿ ಹಲವು ವಸ್ತುಗಳಿರುವುದು ಕಂಡುಬಂದಿದೆ. ಹಾಗಾಗಿ ಕೂಡಲೇ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಅವರ ಹೊಟ್ಟೆಯಿಂದ ಇಯರ್​ಫೋನ್​ಗಳು, ರಾಖಿ, ದಾರಗಳು, ಮೊಳೆಗಳು, ಕೀ, ಬೀಗ, ವಾಷರ್​ಗಳು ಸೇರಿದಂತೆ ಹಲವು ವಸ್ತುಗಳಿದ್ದವು. ವ್ಯಕ್ತಿ ಕಳೆದ ಎರಡು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಅವರು ಮೊಗದ ಮೆಡಿಸಿಟಿ ಆಸ್ಪತ್ರೆಗೆ ಭೇಟಿ ನೀಡಿದರು, ತೀವ್ರ ಹೊಟ್ಟೆ ನೋವು, ಜ್ವರ ಮತ್ತು ವಾಂತಿ ಹೇಳಿಕೊಂಡಿದ್ದರು.

ಮೆಡಿಸಿಟಿ ನಿರ್ದೇಶಕ ಡಾ ಅಜ್ಮೀರ್ ಕಲ್ರಾ ಅವರು ಮಾತನಾಡಿ, ತಮ್ಮ ವೃತ್ತಿಜೀವನದಲ್ಲಿ ಇದು ಮೊದಲ ಪ್ರಕರಣವಾಗಿದೆ, ಆದರೆ ವೈದ್ಯರು ಈ ಎಲ್ಲಾ ವಸ್ತುಗಳನ್ನು ಯಶಸ್ವಿಯಾಗಿ ತೆಗೆದುಹಾಕಿದ್ದಾರೆ ಎಂದಿದ್ದಾರೆ.

ಮತ್ತಷ್ಟು ಓದಿ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಕೇವಲ 67 ರೂ.ನಂತೆ ಐವರಿಗೆ ಮಂಡಿ ಶಸ್ತ್ರಚಿಕಿತ್ಸೆ

ಆದರೆ, ಈ ವಸ್ತುಗಳು ಹೊಟ್ಟೆಯಲ್ಲಿ ಬಹಳ ಸಮಯ ಇದ್ದ ಕಾರಣ ರೋಗಿಯ ಸ್ಥಿತಿ ಇನ್ನೂ ಸ್ಥಿರವಾಗಿಲ್ಲ ಎಂದು ಅವರು ಹೇಳಿದರು. ರೋಗಲಕ್ಷಣಗಳು ಉಲ್ಬಣಗೊಂಡ ನಂತರ ಮತ್ತು ಅವರು ನಿದ್ರಿಸಲು ಸಹ ಸಾಧ್ಯವಾಗಲಿಲ್ಲ, ನಾವು ವೈದ್ಯರನ್ನು ಸಂಪರ್ಕಿಸಿದ್ದೇವೆ ಎಂದು ಕುಟುಂಬದವರು ಹೇಳಿದ್ದಾರೆ.

ಈ ಎಲ್ಲಾ ವಸ್ತುಗಳನ್ನು ಹೇಗೆ ತಿಂದಿದ್ದಾರೆ ಎಂಬುದು ಮಾತ್ರ ನಮಗೆ ತಿಳಿದಿಲ್ಲ, ಅವರಿಗೆ ಮಾನಸಿಕ ಸಮಸ್ಯೆ ಇರಬಹುದು ಎಂದು ಊಹಿಸಲಾಗಿದೆ. ಈ ವ್ಯಕ್ತಿ ಎರಡು ವರ್ಷಗಳಿಂದ ಹೊಟ್ಟೆಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಈ ವಸ್ತುಗಳು ದೀರ್ಘಕಾಲದವರೆಗೆ ಅವರ ಹೊಟ್ಟೆಯೊಳಗೆ ಇದ್ದವು ಮತ್ತು ಇದು ಇತರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಿದೆ ಎಂದು ಅವರು ಹೇಳಿದರು.

ಹಲವಾರು ವೈದ್ಯರ ಬಳಿಗೆ ಕರೆದೊಯ್ದಿದ್ದರು ಆದರೆ ಅವರ ನೋವಿನ ಹಿಂದಿನ ಕಾರಣವನ್ನು ಯಾರೂ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು