AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲ ಗಡಿ ರೇಖೆ ದಾಟಿದ್ದಕ್ಕೆ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಮೂವರು ಮೀನುಗಾರರ ಬಂಧನ

ತಮಿಳುನಾಡಿನ ಸುಮಾರು 45 ಭಾರತೀಯ ಮೀನುಗಾರರು ಶ್ರೀಲಂಕಾ ಅಧಿಕಾರಿಗಳ ವಶದಲ್ಲಿದ್ದಾರೆ. 2022ರ ಜನವರಿಯಿಂದ ತಮಿಳುನಾಡಿನ 87 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಸುಮಾರು 42 ಜನರನ್ನು ಬಿಡುಗಡೆ ಮಾಡಲಾಗಿದೆ.

ಕಡಲ ಗಡಿ ರೇಖೆ ದಾಟಿದ್ದಕ್ಕೆ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಮೂವರು ಮೀನುಗಾರರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 31, 2022 | 7:29 PM

Share

ಚೆನ್ನೈ: ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು (IMBL) ದಾಟಿ ಶ್ರೀಲಂಕಾದ ನೀರಿನಲ್ಲಿ ಮೀನುಗಾರಿಕೆ ನಡೆಸಿದ್ದಕ್ಕಾಗಿ ತಮಿಳುನಾಡಿನ ಪುದುಕೊಟ್ಟೈ ಮೂಲದ ಮೂವರು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಬುಧವಾರ ತಡರಾತ್ರಿ ಮೀನುಗಾರರನ್ನು ಬಂಧಿಸಿದ್ದಲ್ಲದೆ ಶ್ರೀಲಂಕಾದವರು ಯಾಂತ್ರೀಕೃತ ಮೀನುಗಾರಿಕೆ ದೋಣಿಯನ್ನೂ ವಶಪಡಿಸಿಕೊಂಡಿದ್ದಾರೆ ಎಂದು ತಮಿಳುನಾಡು ಮೀನುಗಾರಿಕೆ ಇಲಾಖೆ ಹೊರಡಿಸಿದ ಹೇಳಿಕೆ ತಿಳಿಸಿದೆ.

ಈ ಘಟನೆಗೆ ಮೀನುಗಾರರ ಸಂಘಗಳು ಆಕ್ರೋಶ ವ್ಯಕ್ತಪಡಿಸಿವೆ. ರಾಮನಾಥಪುರಂನಲ್ಲಿರುವ ಮೀನುಗಾರರ ಸಂಘದ ಮುಖಂಡ ಜೆ. ಜೇಸುದಾಸ್ ಐಎಎನ್‌ಎಸ್‌ಗೆ ಪ್ರತಿಕ್ರಿಯೆ ನೀಡಿದ್ದು, “ಇದು ನಿಜವಾಗಿಯೂ ಆಕ್ಷೇಪಾರ್ಹವಾಗಿದೆ. ನಮ್ಮ ಸರ್ಕಾರವು ಶ್ರೀಲಂಕಾದವರಿಗೆ ಬಿಕ್ಕಟ್ಟಿನ ಸಂದರ್ಭದಲ್ಲಿ ಬೆಂಬಲ ನೀಡುತ್ತಿದೆ. ಆದರೆ, ಅವರು ಭಾರತೀಯನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ. ಶ್ರೀಲಂಕನ್ನರು ನಮ್ಮ ಮೀನುಗಾರರನ್ನು ಬಂಧಿಸಿ ನಮ್ಮ ಬೆಲೆಬಾಳುವ ದೋಣಿಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಇದು ಸ್ವೀಕಾರಾರ್ಹವಲ್ಲ. ತಮಿಳುನಾಡು ಸರ್ಕಾರವು ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇದರಿಂದ ಜನರು ಈಗ ಸಮುದ್ರಕ್ಕೆ ಹೋಗಲು ಹೆದರುತ್ತಿದ್ದಾರೆ ಮತ್ತು ಹಲವಾರು ಮೀನುಗಾರಿಕಾ ಕುಗ್ರಾಮಗಳು ಕಡು ಬಡತನದಲ್ಲಿವೆ ಎಂದಿದ್ದಾರೆ.

ವಿಶೇಷವೆಂದರೆ, ಶ್ರೀಲಂಕಾ ನೌಕಾಪಡೆಯು ಈ ವಾರವೇ ತಮಿಳುನಾಡಿನ ನಾಲ್ವರು ಭಾರತೀಯ ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ದೋಣಿಗಳನ್ನು ಸಹ ವಶಪಡಿಸಿಕೊಂಡಿದೆ. 2022ರ ಜನವರಿಯಿಂದ ತಮಿಳುನಾಡಿನ 87 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಸುಮಾರು 42 ಜನರನ್ನು ಬಿಡುಗಡೆ ಮಾಡಲಾಗಿದೆ.

ತಮಿಳುನಾಡಿನ ಸುಮಾರು 45 ಭಾರತೀಯ ಮೀನುಗಾರರು ಶ್ರೀಲಂಕಾ ಅಧಿಕಾರಿಗಳ ವಶದಲ್ಲಿದ್ದಾರೆ. ಬುಧವಾರ ನಾಗಪಟ್ಟನಂನಲ್ಲಿ ಭಾರತೀಯ ಸಮುದ್ರದ ನೀರನ್ನು ದಾಟಿದ ಶ್ರೀಲಂಕಾದ ಮೀನುಗಾರನನ್ನು ಭಾರತೀಯ ಕೋಸ್ಟ್ ಗಾರ್ಡ್ ವಶಕ್ಕೆ ತೆಗೆದುಕೊಂಡಿತ್ತು.

ಇದನ್ನೂ ಓದಿ: Sagarmala: ಸಾಗರಮಾಲಾ ಯೋಜನೆಗೆ ಮೀನುಗಾರರಿಂದ ವಿರೋಧ; ಶಾಸಕಿ ರೂಪಾಲಿ ನಾಯ್ಕ್ ಜೊತೆ ಮಾತಿನ ಚಕಮಕಿ

ಗುಜರಾತ್​ನ ಭುಜ್​ನಲ್ಲಿ ಇಂದು ಮತ್ತೆ 7 ಪಾಕಿಸ್ತಾನಿ ಮೀನುಗಾರಿಕಾ ಬೋಟ್​ಗಳು ವಶಕ್ಕೆ

Published On - 7:29 pm, Thu, 31 March 22

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ