AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲ ಗಡಿ ರೇಖೆ ದಾಟಿದ್ದಕ್ಕೆ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಮೂವರು ಮೀನುಗಾರರ ಬಂಧನ

ತಮಿಳುನಾಡಿನ ಸುಮಾರು 45 ಭಾರತೀಯ ಮೀನುಗಾರರು ಶ್ರೀಲಂಕಾ ಅಧಿಕಾರಿಗಳ ವಶದಲ್ಲಿದ್ದಾರೆ. 2022ರ ಜನವರಿಯಿಂದ ತಮಿಳುನಾಡಿನ 87 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಸುಮಾರು 42 ಜನರನ್ನು ಬಿಡುಗಡೆ ಮಾಡಲಾಗಿದೆ.

ಕಡಲ ಗಡಿ ರೇಖೆ ದಾಟಿದ್ದಕ್ಕೆ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಮೂವರು ಮೀನುಗಾರರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 31, 2022 | 7:29 PM

Share

ಚೆನ್ನೈ: ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು (IMBL) ದಾಟಿ ಶ್ರೀಲಂಕಾದ ನೀರಿನಲ್ಲಿ ಮೀನುಗಾರಿಕೆ ನಡೆಸಿದ್ದಕ್ಕಾಗಿ ತಮಿಳುನಾಡಿನ ಪುದುಕೊಟ್ಟೈ ಮೂಲದ ಮೂವರು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಬುಧವಾರ ತಡರಾತ್ರಿ ಮೀನುಗಾರರನ್ನು ಬಂಧಿಸಿದ್ದಲ್ಲದೆ ಶ್ರೀಲಂಕಾದವರು ಯಾಂತ್ರೀಕೃತ ಮೀನುಗಾರಿಕೆ ದೋಣಿಯನ್ನೂ ವಶಪಡಿಸಿಕೊಂಡಿದ್ದಾರೆ ಎಂದು ತಮಿಳುನಾಡು ಮೀನುಗಾರಿಕೆ ಇಲಾಖೆ ಹೊರಡಿಸಿದ ಹೇಳಿಕೆ ತಿಳಿಸಿದೆ.

ಈ ಘಟನೆಗೆ ಮೀನುಗಾರರ ಸಂಘಗಳು ಆಕ್ರೋಶ ವ್ಯಕ್ತಪಡಿಸಿವೆ. ರಾಮನಾಥಪುರಂನಲ್ಲಿರುವ ಮೀನುಗಾರರ ಸಂಘದ ಮುಖಂಡ ಜೆ. ಜೇಸುದಾಸ್ ಐಎಎನ್‌ಎಸ್‌ಗೆ ಪ್ರತಿಕ್ರಿಯೆ ನೀಡಿದ್ದು, “ಇದು ನಿಜವಾಗಿಯೂ ಆಕ್ಷೇಪಾರ್ಹವಾಗಿದೆ. ನಮ್ಮ ಸರ್ಕಾರವು ಶ್ರೀಲಂಕಾದವರಿಗೆ ಬಿಕ್ಕಟ್ಟಿನ ಸಂದರ್ಭದಲ್ಲಿ ಬೆಂಬಲ ನೀಡುತ್ತಿದೆ. ಆದರೆ, ಅವರು ಭಾರತೀಯನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ. ಶ್ರೀಲಂಕನ್ನರು ನಮ್ಮ ಮೀನುಗಾರರನ್ನು ಬಂಧಿಸಿ ನಮ್ಮ ಬೆಲೆಬಾಳುವ ದೋಣಿಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಇದು ಸ್ವೀಕಾರಾರ್ಹವಲ್ಲ. ತಮಿಳುನಾಡು ಸರ್ಕಾರವು ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇದರಿಂದ ಜನರು ಈಗ ಸಮುದ್ರಕ್ಕೆ ಹೋಗಲು ಹೆದರುತ್ತಿದ್ದಾರೆ ಮತ್ತು ಹಲವಾರು ಮೀನುಗಾರಿಕಾ ಕುಗ್ರಾಮಗಳು ಕಡು ಬಡತನದಲ್ಲಿವೆ ಎಂದಿದ್ದಾರೆ.

ವಿಶೇಷವೆಂದರೆ, ಶ್ರೀಲಂಕಾ ನೌಕಾಪಡೆಯು ಈ ವಾರವೇ ತಮಿಳುನಾಡಿನ ನಾಲ್ವರು ಭಾರತೀಯ ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ದೋಣಿಗಳನ್ನು ಸಹ ವಶಪಡಿಸಿಕೊಂಡಿದೆ. 2022ರ ಜನವರಿಯಿಂದ ತಮಿಳುನಾಡಿನ 87 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಸುಮಾರು 42 ಜನರನ್ನು ಬಿಡುಗಡೆ ಮಾಡಲಾಗಿದೆ.

ತಮಿಳುನಾಡಿನ ಸುಮಾರು 45 ಭಾರತೀಯ ಮೀನುಗಾರರು ಶ್ರೀಲಂಕಾ ಅಧಿಕಾರಿಗಳ ವಶದಲ್ಲಿದ್ದಾರೆ. ಬುಧವಾರ ನಾಗಪಟ್ಟನಂನಲ್ಲಿ ಭಾರತೀಯ ಸಮುದ್ರದ ನೀರನ್ನು ದಾಟಿದ ಶ್ರೀಲಂಕಾದ ಮೀನುಗಾರನನ್ನು ಭಾರತೀಯ ಕೋಸ್ಟ್ ಗಾರ್ಡ್ ವಶಕ್ಕೆ ತೆಗೆದುಕೊಂಡಿತ್ತು.

ಇದನ್ನೂ ಓದಿ: Sagarmala: ಸಾಗರಮಾಲಾ ಯೋಜನೆಗೆ ಮೀನುಗಾರರಿಂದ ವಿರೋಧ; ಶಾಸಕಿ ರೂಪಾಲಿ ನಾಯ್ಕ್ ಜೊತೆ ಮಾತಿನ ಚಕಮಕಿ

ಗುಜರಾತ್​ನ ಭುಜ್​ನಲ್ಲಿ ಇಂದು ಮತ್ತೆ 7 ಪಾಕಿಸ್ತಾನಿ ಮೀನುಗಾರಿಕಾ ಬೋಟ್​ಗಳು ವಶಕ್ಕೆ

Published On - 7:29 pm, Thu, 31 March 22

Follow Us
Web contact
Web contact

TV9 Kannada

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ