AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ಕಾರು ಕಂದಕಕ್ಕೆ ಉರುಳಿ ಮೂವರು ಅಧಿಕಾರಿಗಳ ದುರ್ಮರಣ

ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಈ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಕಾರು ಕಂದಕಕ್ಕೆ ಉರುಳಿ ಮೂವರು ಅಧಿಕಾರಿಗಳ ದುರ್ಮರಣ
ಜಮ್ಮು ಕಾಶ್ಮೀರದ ಪೊಲೀಸ್
TV9 Web
| Edited By: |

Updated on: Nov 14, 2022 | 3:45 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ದೋಡಾ ಜಿಲ್ಲೆಯಲ್ಲಿ ಸೋಮವಾರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಮೂವರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ (Accident) ಒಬ್ಬರು ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಈ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ವಾಹನವು ರಸ್ತೆ ಮತ್ತು ಕಟ್ಟಡ ಇಲಾಖೆಯ ತಂಡದ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದಾಗ ಬಟೋಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಅಸ್ಸಾರ್ ಬಳಿ ಇಂದು ಬೆಳಿಗ್ಗೆ 10.45ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಸ್ಟೇಷನ್ ಹೌಸ್ ಅಧಿಕಾರಿ ಭುವಿಂದರ್ ಕೊತ್ವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಜಮ್ಮು ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ; ಮೂವರು ಸಾವು, 17 ಜನರಿಗೆ ಗಾಯ

ಅಧಿಕಾರಿಗಳಿದ್ದ ವಾಹನವು 200 ಮೀಟರ್ ಆಳದ ಕಮರಿಗೆ ಉರುಳಿದ್ದು, ಪೂಂಚ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ರಫೀಕ್ ಶಾ, ಉಧಂಪುರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರಿಂಗ್ ಕಮಲ್ ಕಿಶೋರ್ ಶರ್ಮಾ ಮತ್ತು ದೋಡಾದ ಚಾಲಕ ಮೊಹಮ್ಮದ್ ಹಫೀಜ್ ಸಾವನ್ನಪ್ಪಿದ್ದಾರೆ.

ಈ ಅಪಘಾತದಲ್ಲಿ ಸೂಪರಿಂಟೆಂಡಿಂಗ್ ಇಂಜಿನಿಯರ್ ಸುರೇಶ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಮಂಜು ಮುಸುಕಿದ ವಾತಾವರಣ ಮತ್ತು ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ಅಧಿಕಾರಿಯನ್ನು ವಿಶೇಷ ಚಿಕಿತ್ಸೆಗಾಗಿ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ