AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ದುರ್ಗಾ ಪೂಜೆ ಪೆಂಡಾಲ್​ನಲ್ಲಿ ಬೆಂಕಿ ದುರಂತ; ಮೂವರು ಸಾವು, 60 ಜನರಿಗೆ ಗಾಯ

ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಔರೈ ಪಟ್ಟಣದ ದುರ್ಗಾಪೂಜಾ ಪೆಂಡಾಲ್​ನಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ಹಾಗೇ 60 ಜನರು ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ದುರ್ಗಾ ಪೂಜೆ ಪೆಂಡಾಲ್​ನಲ್ಲಿ ಬೆಂಕಿ ದುರಂತ; ಮೂವರು ಸಾವು, 60 ಜನರಿಗೆ ಗಾಯ
ಭದೋಹಿಯಲ್ಲಿ ಬೆಂಕಿ ಅವಘಡದಲ್ಲಿ ಗಾಯಗೊಂಡವರು
TV9 Web
| Updated By: ಸುಷ್ಮಾ ಚಕ್ರೆ|

Updated on: Oct 03, 2022 | 8:50 AM

Share

ವಾರಾಣಸಿ: ಉತ್ತರ ಪ್ರದೇಶದ ಭದೋಹಿಯಲ್ಲಿ ನಿನ್ನೆ (ಭಾನುವಾರ) ರಾತ್ರಿ ದುರ್ಗಾ ಪೂಜೆಯ (Durga Puja) ಪೆಂಡಾಲ್​ನಲ್ಲಿ ಭಾರೀ ಬೆಂಕಿ ದುರಂತ (Fire Accident) ಸಂಭವಿಸಿದೆ. ಈ ಬೆಂಕಿ ಅವಘಡದಲ್ಲಿ 10, 12 ವರ್ಷದ ಬಾಲಕರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಹಾಗೇ 60 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ದುರ್ಗಾ ಪೂಜೆಯ ಪೆಂಡಾಲ್​ನಲ್ಲಿ ಆರತಿ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎನ್ನಲಾಗಿದೆ.

ಗಾಯಗೊಂಡ ಭಕ್ತರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಯ ಸಮಯದಲ್ಲಿ ಸುಮಾರು 150 ಜನರು ಪೆಂಡಾಲ್​ನೊಳಗೆ ಇದ್ದರು. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ ಹೇಳಿದ್ದಾರೆ.

ಇದನ್ನೂ ಓದಿ: Breaking News ಚೀನಾದ ರೆಸ್ಟೋರೆಂಟ್​​ನಲ್ಲಿ ಬೆಂಕಿ ಅವಘಡ: 17 ಮಂದಿ ಸುಟ್ಟು ಭಸ್ಮ, ಹಲವರಿಗೆ ಗಾಯ

ಈ ಘಟನೆಯಲ್ಲಿ ಮೃತಪಟ್ಟವರ ಪೈಕಿ 12 ವರ್ಷದ ಬಾಲಕ ಕೂಡ ಸೇರಿದ್ದಾನೆ. ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಔರೈ ಪಟ್ಟಣದ ದುರ್ಗಾಪೂಜಾ ಪೆಂಡಾಲ್​ನಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಬಾಲಕರು ಸಾವನ್ನಪ್ಪಿದ್ದು, ಗಾಯಗೊಂಡವರನ್ನು ವಾರಾಣಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?