AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದ ಔಷಧ ತಯಾರಿಕಾ ಘಟಕದಲ್ಲಿ ಸ್ಫೋಟ; 3 ಜನ ಸಾವು

ಗೌರಿಪಟ್ಟಣಂನಲ್ಲಿರುವ ವಿಷನ್ ಡ್ರಗ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಸಿಬ್ಬಂದಿ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದ ಔಷಧ ತಯಾರಿಕಾ ಘಟಕದಲ್ಲಿ ಸ್ಫೋಟ; 3 ಜನ ಸಾವು
ಡ್ರಗ್ಸ್ ತಯಾರಿಕಾ ಘಟಕದಲ್ಲಿ ಸ್ಫೋಟ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 16, 2022 | 2:09 PM

Share

ಅಮರಾವತಿ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗೌರಿಪಟ್ಟಣಂನಲ್ಲಿ ಡ್ರಗ್ಸ್ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ, ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲಾಧಿಕಾರಿ ಕೆ. ಮಾಧವಿ ಲತಾ ಅವರು ಸಂತ್ರಸ್ತರ ಸಂಬಂಧಿಕರಿಗೆ ತಲಾ 20 ಲಕ್ಷ ರೂ. ಧನಸಹಾಯ ಘೋಷಿಸಿದ್ದಾರೆ. ನಿರ್ವಹಣಾ ಲೋಪವೇ ಈ ಸ್ಫೋಟಕ್ಕೆ ಕಾರಣ ಎನ್ನಲಾಗಿದೆ. ಈ ಪ್ರಕರಣದ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಗೌರಿಪಟ್ಟಣಂನಲ್ಲಿರುವ ವಿಷನ್ ಡ್ರಗ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಸಿಬ್ಬಂದಿ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Istanbul Blast: ಟರ್ಕಿಯ ಇಸ್ತಾಂಬುಲ್​ನಲ್ಲಿ ಮಹಿಳಾ ಉಗ್ರರಿಂದ ಬಾಂಬ್ ಸ್ಫೋಟ; 6 ಜನ ಸಾವು, 81 ಮಂದಿಗೆ ಗಾಯ

“ನೀರು ಮತ್ತು ರಾಸಾಯನಿಕಗಳನ್ನು ಮರುಬಳಕೆ ಮಾಡುವ ಪೈಪ್‌ಲೈನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದೆ. ಉಪ ವ್ಯವಸ್ಥಾಪಕರು, ಶಿಫ್ಟ್ ಇನ್‌ಚಾರ್ಜ್ ಮತ್ತು ಕೆಮಿಸ್ಟ್​ ಕೆಲಸದಲ್ಲಿದ್ದರು. ಹೆಚ್ಚಿನ ತಾಪಮಾನದಿಂದ ಉಂಟಾದ ಒತ್ತಡದಿಂದ ಪೈಪ್‌ಲೈನ್ ಸ್ಫೋಟಗೊಂಡಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸ್ಫೋಟದ ಪ್ರಭಾವದಿಂದ ಒಡೆದ ಗಾಜಿನ ಚೂರುಗಳು ಮತ್ತು ತಗಡಿನ ಹಾಳೆಗಳು ಹಾರಿ ಮೂವರಿಗೆ ಚುಚ್ಚಿದ್ದರಿಂದ ಅವರು ಸಾವನ್ನಪ್ಪಿದ್ದಾರೆ. ಈ ಘಟಕದಲ್ಲಿದ್ದ ಇತರ ಕಾರ್ಮಿಕರು ಮೂವರನ್ನು ಕೊವ್ವೂರು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!