AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Miyazaki Mangoes: ಈ ಮಾವಿನ ಹಣ್ಣಿಗೆ ಕೆ.ಜಿಗೆ 3 ಲಕ್ಷ ರೂ.! ಜಪಾನ್​​ನ​​ ದುಬಾರಿ ಮಾವು ಬೆಳೆದ ಭಾರತೀಯ ರೈತ

ಒಡಿಶಾ ರೈತರೊಬ್ಬರು ತಮ್ಮ ತೋಟದಲ್ಲಿ ದುಬಾರಿ ಮಾವಿನ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಈ ಬಗ್ಗೆ ವರದಿ ಮಾಡಿದ ಸುದ್ದಿ ಸಂಸ್ಥೆ ಎಎನ್​​ಐ ಪ್ರಕಾರ, ಒಡಿಶಾದ ಕಲಹಂಡಿ ಜಿಲ್ಲೆಯ ಭೋಯ್ ಎಂಬ ರೈತ ತನ್ನ ತೋಟದಲ್ಲಿ ಜಪಾನ್‌ನ ಮಿಯಾಜಾಕಿ ತಳಿಯ ಮಾವಿನಹಣ್ಣುಗಳನ್ನು ಬೆಳೆಯುತ್ತಿದ್ದಾರೆ.

Miyazaki Mangoes: ಈ ಮಾವಿನ ಹಣ್ಣಿಗೆ ಕೆ.ಜಿಗೆ 3 ಲಕ್ಷ ರೂ.! ಜಪಾನ್​​ನ​​ ದುಬಾರಿ ಮಾವು ಬೆಳೆದ ಭಾರತೀಯ ರೈತ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 27, 2023 | 12:20 PM

Share

ಭುವನೇಶ್ವರ, ಜು.27: ಈ ಬಾರಿಯ ಮಳೆಯಿಂದ ಅನೇಕ ಬೆಳೆಗಳು ನಾಶವಾಗಿದೆ, ಇನ್ನೊಂದು ಕಡೆ ಹಣ್ಣು – ತರಕಾರಿಗಳ ಬೆಲೆ ಏರಿಕೆಯಾಗುತ್ತಿರುವ ಬಿಸಿ, ಈ ಮಧ್ಯೆ ಒಡಿಶಾ ರೈತರೊಬ್ಬರು ತಮ್ಮ ತೋಟದಲ್ಲಿ ದುಬಾರಿ ಮಾವಿನ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಈ ಬಗ್ಗೆ ವರದಿ ಮಾಡಿದ ಸುದ್ದಿ ಸಂಸ್ಥೆ ಎಎನ್​​ಐ ಪ್ರಕಾರ, ಒಡಿಶಾದ ಕಲಹಂಡಿ ಜಿಲ್ಲೆಯ ಭೋಯ್ ಎಂಬ ರೈತ ತನ್ನ ತೋಟದಲ್ಲಿ ಜಪಾನ್‌ನ ಮಿಯಾಜಾಕಿ ತಳಿಯ ಮಾವಿನಹಣ್ಣುಗಳನ್ನು (Miyazaki Mangoes) ಬೆಳೆಯುತ್ತಿದ್ದಾರೆ.

ಈ ಮಾವಿನ ಹಣ್ಣಿನ ಇನ್ನೊಂದು ವಿಶೇಷವೆಂದರೆ, ವಿಶಿಷ್ಟ ರುಚಿ ಮತ್ತು ಅದರ ಮೌಲ್ಯಕ್ಕಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ₹ 2.5 ಲಕ್ಷದಿಂದ 3 ಲಕ್ಷದವರೆಗೆ ಇರುತ್ತದೆ. ಭೋಯಿ ಅವರು ತಮ್ಮ ಜಮೀನಿನಲ್ಲಿ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಈ ‘ಮಿಯಾಜಾಕಿ’ ತಳಿ ಮಾವುವನ್ನು ರಾಜ್ಯ ತೋಟಗಾರಿಕಾ ಇಲಾಖೆ ಮೂಲಕ ಬೀಜವನ್ನು ಪಡೆದ ನಂತರ ಬೆಳೆದಿದ್ದಾರೆ.

ಮಿಯಾಜಾಕಿ ಪ್ರಭೇದವು ಮೂಲತಃ ಜಪಾನಿನ ತಳಿಯಾಗಿದೆ. ಅದರ ವಿಶಿಷ್ಟ ಸುವಾಸನೆ ಮತ್ತು ಔಷಧೀಯ ಮೌಲ್ಯಕ್ಕಾಗಿ ಇದು ವಿದೇಶಗಳಲ್ಲಿ ಭಾರಿ ಬೇಡಿಕೆಯನ್ನು ಹೊಂದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಜಪಾನಿಯರ ಪ್ರಕಾರ, ವಿಶ್ವದ ಅತ್ಯಂತ ದುಬಾರಿ ಮಾವಿನ ಮೂಲ ಹೆಸರು “ತೈಯೊ ನೋ ತಮಾಗೊ” ಅಥವಾ ಕೆಂಪು ಸೂರ್ಯ​ ಎಂದು ಕರೆಯುತ್ತಾರೆ. ಜಪಾನ್‌ನ ಮಿಯಾಜಾಕಿ ಪ್ರಿಫೆಕ್ಚರ್‌ನಲ್ಲಿ ಮಾರಾಟ ಮಾಡಲಾಗುತ್ತದೆ. ಇನ್ನೂ ಇದನ್ನು ಜಗತ್ತಿನದ್ಯಾಂತ “ಮಿಯಾಜಾಕಿ” ಎಂದು ಕರೆಯುತ್ತಾರೆ.

ಇದನ್ನೂ ಓದಿ: ವಿಶ್ವದಲ್ಲಿ ಅತಿ ದುಬಾರಿ ಮಾವಿನ ಹಣ್ಣು ಯಾವುದು ಗೊತ್ತೇ? ಹಣ್ಣಿನ ಬೆಲೆ ಕೇಳಿದ್ರೆ ಹುಬ್ಬೇರುವುದು ಗ್ಯಾರೆಂಟಿ!

ಪ್ರತಿ ಏಪ್ರಿಲ್‌ನಲ್ಲಿ, ಮಿಯಾಜಾಕಿ ಮಾವುವನ್ನು ಕೇಂದ್ರ ಸಗಟು ಮಾರುಕಟ್ಟೆಯಲ್ಲಿ ಹರಾಜು ಮಾಡಲಾಗುತ್ತದೆ ಇತ್ತೀಚೆಗೆ, ರಾಯ್‌ಪುರ ಮತ್ತು ಸಿಲಿಗುರಿಯಲ್ಲಿ ನಡೆದ ಮಾವು ಉತ್ಸವದಲ್ಲಿ ಮಿಯಾಜಾಕಿ ತಳಿಯನ್ನು ಪ್ರದರ್ಶಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!