AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Miyazaki Mangoes: ಈ ಮಾವಿನ ಹಣ್ಣಿಗೆ ಕೆ.ಜಿಗೆ 3 ಲಕ್ಷ ರೂ.! ಜಪಾನ್​​ನ​​ ದುಬಾರಿ ಮಾವು ಬೆಳೆದ ಭಾರತೀಯ ರೈತ

ಒಡಿಶಾ ರೈತರೊಬ್ಬರು ತಮ್ಮ ತೋಟದಲ್ಲಿ ದುಬಾರಿ ಮಾವಿನ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಈ ಬಗ್ಗೆ ವರದಿ ಮಾಡಿದ ಸುದ್ದಿ ಸಂಸ್ಥೆ ಎಎನ್​​ಐ ಪ್ರಕಾರ, ಒಡಿಶಾದ ಕಲಹಂಡಿ ಜಿಲ್ಲೆಯ ಭೋಯ್ ಎಂಬ ರೈತ ತನ್ನ ತೋಟದಲ್ಲಿ ಜಪಾನ್‌ನ ಮಿಯಾಜಾಕಿ ತಳಿಯ ಮಾವಿನಹಣ್ಣುಗಳನ್ನು ಬೆಳೆಯುತ್ತಿದ್ದಾರೆ.

Miyazaki Mangoes: ಈ ಮಾವಿನ ಹಣ್ಣಿಗೆ ಕೆ.ಜಿಗೆ 3 ಲಕ್ಷ ರೂ.! ಜಪಾನ್​​ನ​​ ದುಬಾರಿ ಮಾವು ಬೆಳೆದ ಭಾರತೀಯ ರೈತ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 27, 2023 | 12:20 PM

Share

ಭುವನೇಶ್ವರ, ಜು.27: ಈ ಬಾರಿಯ ಮಳೆಯಿಂದ ಅನೇಕ ಬೆಳೆಗಳು ನಾಶವಾಗಿದೆ, ಇನ್ನೊಂದು ಕಡೆ ಹಣ್ಣು – ತರಕಾರಿಗಳ ಬೆಲೆ ಏರಿಕೆಯಾಗುತ್ತಿರುವ ಬಿಸಿ, ಈ ಮಧ್ಯೆ ಒಡಿಶಾ ರೈತರೊಬ್ಬರು ತಮ್ಮ ತೋಟದಲ್ಲಿ ದುಬಾರಿ ಮಾವಿನ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಈ ಬಗ್ಗೆ ವರದಿ ಮಾಡಿದ ಸುದ್ದಿ ಸಂಸ್ಥೆ ಎಎನ್​​ಐ ಪ್ರಕಾರ, ಒಡಿಶಾದ ಕಲಹಂಡಿ ಜಿಲ್ಲೆಯ ಭೋಯ್ ಎಂಬ ರೈತ ತನ್ನ ತೋಟದಲ್ಲಿ ಜಪಾನ್‌ನ ಮಿಯಾಜಾಕಿ ತಳಿಯ ಮಾವಿನಹಣ್ಣುಗಳನ್ನು (Miyazaki Mangoes) ಬೆಳೆಯುತ್ತಿದ್ದಾರೆ.

ಈ ಮಾವಿನ ಹಣ್ಣಿನ ಇನ್ನೊಂದು ವಿಶೇಷವೆಂದರೆ, ವಿಶಿಷ್ಟ ರುಚಿ ಮತ್ತು ಅದರ ಮೌಲ್ಯಕ್ಕಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ₹ 2.5 ಲಕ್ಷದಿಂದ 3 ಲಕ್ಷದವರೆಗೆ ಇರುತ್ತದೆ. ಭೋಯಿ ಅವರು ತಮ್ಮ ಜಮೀನಿನಲ್ಲಿ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಈ ‘ಮಿಯಾಜಾಕಿ’ ತಳಿ ಮಾವುವನ್ನು ರಾಜ್ಯ ತೋಟಗಾರಿಕಾ ಇಲಾಖೆ ಮೂಲಕ ಬೀಜವನ್ನು ಪಡೆದ ನಂತರ ಬೆಳೆದಿದ್ದಾರೆ.

ಮಿಯಾಜಾಕಿ ಪ್ರಭೇದವು ಮೂಲತಃ ಜಪಾನಿನ ತಳಿಯಾಗಿದೆ. ಅದರ ವಿಶಿಷ್ಟ ಸುವಾಸನೆ ಮತ್ತು ಔಷಧೀಯ ಮೌಲ್ಯಕ್ಕಾಗಿ ಇದು ವಿದೇಶಗಳಲ್ಲಿ ಭಾರಿ ಬೇಡಿಕೆಯನ್ನು ಹೊಂದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಜಪಾನಿಯರ ಪ್ರಕಾರ, ವಿಶ್ವದ ಅತ್ಯಂತ ದುಬಾರಿ ಮಾವಿನ ಮೂಲ ಹೆಸರು “ತೈಯೊ ನೋ ತಮಾಗೊ” ಅಥವಾ ಕೆಂಪು ಸೂರ್ಯ​ ಎಂದು ಕರೆಯುತ್ತಾರೆ. ಜಪಾನ್‌ನ ಮಿಯಾಜಾಕಿ ಪ್ರಿಫೆಕ್ಚರ್‌ನಲ್ಲಿ ಮಾರಾಟ ಮಾಡಲಾಗುತ್ತದೆ. ಇನ್ನೂ ಇದನ್ನು ಜಗತ್ತಿನದ್ಯಾಂತ “ಮಿಯಾಜಾಕಿ” ಎಂದು ಕರೆಯುತ್ತಾರೆ.

ಇದನ್ನೂ ಓದಿ: ವಿಶ್ವದಲ್ಲಿ ಅತಿ ದುಬಾರಿ ಮಾವಿನ ಹಣ್ಣು ಯಾವುದು ಗೊತ್ತೇ? ಹಣ್ಣಿನ ಬೆಲೆ ಕೇಳಿದ್ರೆ ಹುಬ್ಬೇರುವುದು ಗ್ಯಾರೆಂಟಿ!

ಪ್ರತಿ ಏಪ್ರಿಲ್‌ನಲ್ಲಿ, ಮಿಯಾಜಾಕಿ ಮಾವುವನ್ನು ಕೇಂದ್ರ ಸಗಟು ಮಾರುಕಟ್ಟೆಯಲ್ಲಿ ಹರಾಜು ಮಾಡಲಾಗುತ್ತದೆ ಇತ್ತೀಚೆಗೆ, ರಾಯ್‌ಪುರ ಮತ್ತು ಸಿಲಿಗುರಿಯಲ್ಲಿ ನಡೆದ ಮಾವು ಉತ್ಸವದಲ್ಲಿ ಮಿಯಾಜಾಕಿ ತಳಿಯನ್ನು ಪ್ರದರ್ಶಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ