AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Miyazaki Mangoes: ಈ ಮಾವಿನ ಹಣ್ಣಿಗೆ ಕೆ.ಜಿಗೆ 3 ಲಕ್ಷ ರೂ.! ಜಪಾನ್​​ನ​​ ದುಬಾರಿ ಮಾವು ಬೆಳೆದ ಭಾರತೀಯ ರೈತ

ಒಡಿಶಾ ರೈತರೊಬ್ಬರು ತಮ್ಮ ತೋಟದಲ್ಲಿ ದುಬಾರಿ ಮಾವಿನ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಈ ಬಗ್ಗೆ ವರದಿ ಮಾಡಿದ ಸುದ್ದಿ ಸಂಸ್ಥೆ ಎಎನ್​​ಐ ಪ್ರಕಾರ, ಒಡಿಶಾದ ಕಲಹಂಡಿ ಜಿಲ್ಲೆಯ ಭೋಯ್ ಎಂಬ ರೈತ ತನ್ನ ತೋಟದಲ್ಲಿ ಜಪಾನ್‌ನ ಮಿಯಾಜಾಕಿ ತಳಿಯ ಮಾವಿನಹಣ್ಣುಗಳನ್ನು ಬೆಳೆಯುತ್ತಿದ್ದಾರೆ.

Miyazaki Mangoes: ಈ ಮಾವಿನ ಹಣ್ಣಿಗೆ ಕೆ.ಜಿಗೆ 3 ಲಕ್ಷ ರೂ.! ಜಪಾನ್​​ನ​​ ದುಬಾರಿ ಮಾವು ಬೆಳೆದ ಭಾರತೀಯ ರೈತ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 27, 2023 | 12:20 PM

ಭುವನೇಶ್ವರ, ಜು.27: ಈ ಬಾರಿಯ ಮಳೆಯಿಂದ ಅನೇಕ ಬೆಳೆಗಳು ನಾಶವಾಗಿದೆ, ಇನ್ನೊಂದು ಕಡೆ ಹಣ್ಣು – ತರಕಾರಿಗಳ ಬೆಲೆ ಏರಿಕೆಯಾಗುತ್ತಿರುವ ಬಿಸಿ, ಈ ಮಧ್ಯೆ ಒಡಿಶಾ ರೈತರೊಬ್ಬರು ತಮ್ಮ ತೋಟದಲ್ಲಿ ದುಬಾರಿ ಮಾವಿನ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಈ ಬಗ್ಗೆ ವರದಿ ಮಾಡಿದ ಸುದ್ದಿ ಸಂಸ್ಥೆ ಎಎನ್​​ಐ ಪ್ರಕಾರ, ಒಡಿಶಾದ ಕಲಹಂಡಿ ಜಿಲ್ಲೆಯ ಭೋಯ್ ಎಂಬ ರೈತ ತನ್ನ ತೋಟದಲ್ಲಿ ಜಪಾನ್‌ನ ಮಿಯಾಜಾಕಿ ತಳಿಯ ಮಾವಿನಹಣ್ಣುಗಳನ್ನು (Miyazaki Mangoes) ಬೆಳೆಯುತ್ತಿದ್ದಾರೆ.

ಈ ಮಾವಿನ ಹಣ್ಣಿನ ಇನ್ನೊಂದು ವಿಶೇಷವೆಂದರೆ, ವಿಶಿಷ್ಟ ರುಚಿ ಮತ್ತು ಅದರ ಮೌಲ್ಯಕ್ಕಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ₹ 2.5 ಲಕ್ಷದಿಂದ 3 ಲಕ್ಷದವರೆಗೆ ಇರುತ್ತದೆ. ಭೋಯಿ ಅವರು ತಮ್ಮ ಜಮೀನಿನಲ್ಲಿ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಈ ‘ಮಿಯಾಜಾಕಿ’ ತಳಿ ಮಾವುವನ್ನು ರಾಜ್ಯ ತೋಟಗಾರಿಕಾ ಇಲಾಖೆ ಮೂಲಕ ಬೀಜವನ್ನು ಪಡೆದ ನಂತರ ಬೆಳೆದಿದ್ದಾರೆ.

ಮಿಯಾಜಾಕಿ ಪ್ರಭೇದವು ಮೂಲತಃ ಜಪಾನಿನ ತಳಿಯಾಗಿದೆ. ಅದರ ವಿಶಿಷ್ಟ ಸುವಾಸನೆ ಮತ್ತು ಔಷಧೀಯ ಮೌಲ್ಯಕ್ಕಾಗಿ ಇದು ವಿದೇಶಗಳಲ್ಲಿ ಭಾರಿ ಬೇಡಿಕೆಯನ್ನು ಹೊಂದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಜಪಾನಿಯರ ಪ್ರಕಾರ, ವಿಶ್ವದ ಅತ್ಯಂತ ದುಬಾರಿ ಮಾವಿನ ಮೂಲ ಹೆಸರು “ತೈಯೊ ನೋ ತಮಾಗೊ” ಅಥವಾ ಕೆಂಪು ಸೂರ್ಯ​ ಎಂದು ಕರೆಯುತ್ತಾರೆ. ಜಪಾನ್‌ನ ಮಿಯಾಜಾಕಿ ಪ್ರಿಫೆಕ್ಚರ್‌ನಲ್ಲಿ ಮಾರಾಟ ಮಾಡಲಾಗುತ್ತದೆ. ಇನ್ನೂ ಇದನ್ನು ಜಗತ್ತಿನದ್ಯಾಂತ “ಮಿಯಾಜಾಕಿ” ಎಂದು ಕರೆಯುತ್ತಾರೆ.

ಇದನ್ನೂ ಓದಿ: ವಿಶ್ವದಲ್ಲಿ ಅತಿ ದುಬಾರಿ ಮಾವಿನ ಹಣ್ಣು ಯಾವುದು ಗೊತ್ತೇ? ಹಣ್ಣಿನ ಬೆಲೆ ಕೇಳಿದ್ರೆ ಹುಬ್ಬೇರುವುದು ಗ್ಯಾರೆಂಟಿ!

ಪ್ರತಿ ಏಪ್ರಿಲ್‌ನಲ್ಲಿ, ಮಿಯಾಜಾಕಿ ಮಾವುವನ್ನು ಕೇಂದ್ರ ಸಗಟು ಮಾರುಕಟ್ಟೆಯಲ್ಲಿ ಹರಾಜು ಮಾಡಲಾಗುತ್ತದೆ ಇತ್ತೀಚೆಗೆ, ರಾಯ್‌ಪುರ ಮತ್ತು ಸಿಲಿಗುರಿಯಲ್ಲಿ ನಡೆದ ಮಾವು ಉತ್ಸವದಲ್ಲಿ ಮಿಯಾಜಾಕಿ ತಳಿಯನ್ನು ಪ್ರದರ್ಶಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ