Sign In

By signing in or creating an account, you agree with Associated Broadcasting Company's Terms & Conditions and Privacy Policy.

Rafale Jets: ಭಾರತದ ವಾಯುಸೇನೆ ಸೇರಿದ ಮೂರು ರಫೇಲ್​ ಯುದ್ಧವಿಮಾನಗಳು; ಫ್ರಾನ್ಸ್​ನಿಂದ ನಾನ್​-ಸ್ಟಾಪ್​ ಹಾರಾಟ

ಇದೀಗ ಭಾರತವನ್ನು ತಲುಪಿರುವ ಮೂರು ರಫೇಲ್​​ ಯುದ್ಧವಿಮಾನಗಳು, ವಾಯುಪಡೆಯ ಎರಡನೇ ಸ್ಕ್ವಾಡ್ರನ್​​ ಸೇರಿಕೊಳ್ಳಲಿವೆ. ಈ ಎರಡನೇ ಸ್ಕ್ವಾಡ್ರನ್​ಗಳು ಪಶ್ಚಿಮ ಬಂಗಾಳದ ಹಶಿಮಾರಾ ವಾಯುನೆಲೆಯಲ್ಲಿ ಜುಲೈ ತಿಂಗಳ ಅಂತ್ಯದಿಂದ ಕಾರ್ಯಾಚರಣೆ ನಡೆಸಲಿವೆ.

Rafale Jets: ಭಾರತದ ವಾಯುಸೇನೆ ಸೇರಿದ ಮೂರು ರಫೇಲ್​ ಯುದ್ಧವಿಮಾನಗಳು; ಫ್ರಾನ್ಸ್​ನಿಂದ ನಾನ್​-ಸ್ಟಾಪ್​ ಹಾರಾಟ
ರಫೇಲ್​ ಯುದ್ಧ ವಿಮಾನ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Lakshmi Hegde

Updated on:Jul 22, 2021 | 8:30 AM

ಮತ್ತೆ ಮೂರು ರಫೇಲ್​ ಯುದ್ಧವಿಮಾನ (Rafale Jets)ಗಳು ಬುಧವಾರ ಭಾರತ ಸೇನೆಯನ್ನು ಸೇರ್ಪಡೆಗೊಂಡಿವೆ. ಫ್ರಾನ್ಸ್​ನಿಂದ ಹೊರಟಿದ್ದ ಈ ಜೆಟ್​​ಗಳು ಮಧ್ಯೆ ಎಲ್ಲಿಯೂ ನಿಲುಗಡೆ ಪಡೆಯದೆ, ನೇರವಾಗಿ ಭಾರತೀಯ ವಾಯುಸೇನೆ (Indian Air Force) ತಲುಪಿವೆ. ಇನ್ನು ರಫೇಲ್​ ಜೆಟ್​​ಗಳಿಗೆ ಯುನೈಟೆಡ್​ ಅರಬ್​ ಎಮಿರೇಟ್ಸ್​ (UAE)ನ ವಾಯುಪಡೆ ಮಾರ್ಗಮಧ್ಯೆ, ಹಾರಾಟದ ಸ್ಥಿತಿಯಲ್ಲಿ ಇದ್ದಾಗಲೇ ಇಂಧನ ತುಂಬಿದೆ ಎಂದು ಭಾರತೀಯ ವಾಯು ಪಡೆ ಟ್ವೀಟ್​ ಮಾಡಿ ತಿಳಿಸಿದೆ. ಹಾಗೇ, ಮಾರ್ಗ ಮಧ್ಯೆ ಇಂಧನ ತುಂಬಿಕೊಟ್ಟ UAE ವಾಯುಪಡೆಗೆ ಧನ್ಯವಾದವನ್ನೂ ಹೇಳಿದೆ.

ಇದೀಗ ಭಾರತವನ್ನು ತಲುಪಿರುವ ಮೂರು ರಫೇಲ್​​ ಯುದ್ಧವಿಮಾನಗಳು, ವಾಯುಪಡೆಯ ಎರಡನೇ ಸ್ಕ್ವಾಡ್ರನ್​​ ಸೇರಿಕೊಳ್ಳಲಿವೆ. ಈ ಎರಡನೇ ಸ್ಕ್ವಾಡ್ರನ್​ಗಳು ಪಶ್ಚಿಮ ಬಂಗಾಳದ ಹಶಿಮಾರಾ ವಾಯುನೆಲೆಯಲ್ಲಿ ಜುಲೈ ತಿಂಗಳ ಅಂತ್ಯದಿಂದ ಕಾರ್ಯಾಚರಣೆ ನಡೆಸಲಿವೆ. ಹಾಗೇ, ಮೊದಲನೇ ರಫೇಲ್​ ಸ್ಕ್ವಾಡ್ರನ್​ ಈಗಾಗಲೇ ಅಂಬಾಲಾದ ವಾಯುನೆಲೆಯಲ್ಲಿ ಕಾರ್ಯಾಚರಣೆ ಶುರು ಮಾಡಿದೆ. ಪೂರ್ವ ಲಡಾಖ್​ನ ಚೀನಾ ಗಡಿಗಳಲ್ಲಿ ಮತ್ತು ಇತರ ಪ್ರದೇಶಗಳಲ್ಲಿ ಗಸ್ತು ತಿರುಗಲು ಶುರು ಮಾಡಿವೆ. ಹಶಿಮಾರಾ ವಾಯುನೆಲೆಯಿಂದ ಹಲವು ಚೀನಾ ವಾಯುನೆಲೆಗಳು ಸಮೀಪದಲ್ಲೇ ಇದ್ದು, ಇದೀಗ ರಫೇಲ್​ ಜೆಟ್​ನ ಎರಡನೇ ಸ್ಕ್ವಾಡ್ರನ್​​ನಿಂದ ಸಹಜವಾಗಿಯೇ ಇಲ್ಲಿನ ವಾಯುಪಡೆಗೆ ಉತ್ತೇಜನ ದೊರೆಯಲಿದೆ.

ಫ್ರಾನ್ಸ್​ನೊಂದಿಗೆ ಭಾರತ 2016ರಲ್ಲಿ ಮಾಡಿಕೊಂಡ ಅನ್ವಯ ಇಲ್ಲಿಗೆ ಒಟ್ಟು 36 ರಫೇಲ್​ ಜೆಟ್​ಗಳು ಬರಲಿವೆ. ಎರಡು ಇಂಜಿನ್​​ಗಳ ರಫೇಲ್​ ಜೆಟ್​​ಗಳು ನೆಲ ಮತ್ತು ಸಮುದ್ರ ದಾಳಿ, ನ್ಯೂಕ್ಲಿಯರ್​ ಅಟ್ಯಾಕ್​ನಂತಹ ಅಪಾಯಕಾರಿ ದಾಳಿ ವಿರುದ್ಧವೂ ನಿಲ್ಲಬಹುದಾದ ಸಾಮರ್ಥ್ಯಹೊಂದಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ, ಗಾಂಜಾ ನಶೆಯಲ್ಲಿ ರಸ್ತೆ ಬದಿ ನಿಂತಿದ್ದ ವಾಹನಗಳ ಗಾಜು ಪುಡಿ ಪುಡಿ

3 more Rafale jets arrived to India from France

Published On - 8:30 am, Thu, 22 July 21

Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ