ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು; 4 ಜನ ನಾಪತ್ತೆ

ಮಹಾರಾಷ್ಟ್ರದ ಸಿಂಧುದುರ್ಗ ಕರಾವಳಿಯಲ್ಲಿ ಒಂದೇ ಕುಟುಂಬದ ಮೂವರು ಮುಳುಗಿ ಮೃತಪಟ್ಟಿದ್ದಾರೆ. ಕಾಣೆಯಾದ ನಾಲ್ವರಿಗಾಗಿ ಹುಡುಕಾಟ ನಡೆಯುತ್ತಿದೆ. ಸಿಂಧುದುರ್ಗದ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಪಿಕ್ನಿಕ್ ಬಂದ ಸಮಯದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಮುಳುಗಿ ಮೃತಪಟ್ಟಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇಂದು ಸಂಜೆ 4 ಗಂಟೆ ಸುಮಾರಿಗೆ 8 ಜನರ ಕುಟುಂಬವೊಂದು ಪಿಕ್ನಿಕ್‌ಗೆ ಹೋಗಿದ್ದಾಗ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಈ ಘಟನೆ ನಡೆದಿದೆ.

ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು; 4 ಜನ ನಾಪತ್ತೆ
Representative Image

Updated on: Oct 03, 2025 | 10:02 PM

ಮುಂಬೈ, ಅಕ್ಟೋಬರ್ 3: ಮಹಾರಾಷ್ಟ್ರದಲ್ಲಿ (Maharashtra) ನಡೆದ ದುರಂತ ಘಟನೆಯಲ್ಲಿ ಇಲ್ಲಿನ ಸಿಂಧುದುರ್ಗ ಜಿಲ್ಲೆಯ ಅರೇಬಿಯನ್ ಸಮುದ್ರದಲ್ಲಿ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅವರೊಂದಿಗೆ ಸಮುದ್ರಕ್ಕೆ ಇಳಿದಿದ್ದ ಇತರ ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಸಂಜೆ 4 ಗಂಟೆ ಸುಮಾರಿಗೆ 8 ಜನರ ಕುಟುಂಬವೊಂದು ಪಿಕ್ನಿಕ್‌ಗೆ ಹೋಗಿದ್ದಾಗ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಈ ಘಟನೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅವರಲ್ಲಿ ಇಬ್ಬರು ಕುಡಾಲ್ (ಸಿಂಧುದುರ್ಗ) ಮೂಲದವರಾಗಿದ್ದರೆ, ಇತರ 6 ಮಂದಿ ಕರ್ನಾಟಕದ ಬೆಳಗಾವಿಯಿಂದ ಬಂದಿದ್ದರು.

ಇದನ್ನೂ ಓದಿ: 2 ವರ್ಷದೊಳಗಿನ ಮಕ್ಕಳಿಗೆ ಶೀತ, ಕೆಮ್ಮಿನ ಸಿರಪ್ ನೀಡಬೇಡಿ; 11 ಮಕ್ಕಳ ಸಾವಿನ ಬಳಿಕ ಕೇಂದ್ರ ಸರ್ಕಾರ ಎಚ್ಚರಿಕೆ

ಈ 8 ಮಂದಿಯೂ ಈಜಲು ಸಮುದ್ರಕ್ಕೆ ಇಳಿದರು. ಆದರೆ, ಸ್ವಲ್ಪ ಸಮಯದ ನಂತರ ನೀರಿನ ಆಳ ಗೊತ್ತಾಗದೆ ಅವರು ಮುಳುಗಲು ಪ್ರಾರಂಭಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ವಿಷಯ ತಿಳಿದ ನಂತರ ಪೊಲೀಸರು ಮತ್ತು ಸ್ಥಳೀಯ ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಶೋಧದ ಸಮಯದಲ್ಲಿ 3 ಶವಗಳು ಪತ್ತೆಯಾಗಿದ್ದು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ: ಕರೂರ್ ಕಾಲ್ತುಳಿತ ಪ್ರಕರಣ; ವಿಜಯ್ ವಿರುದ್ಧ ಹೈಕೋರ್ಟ್ ಆಕ್ರೋಶ, ಎಸ್​ಐಟಿ ತನಿಖೆಗೆ ಆದೇಶ

ಹಾಗೇ, ನೀರಿನಲ್ಲಿ ಮುಳುಗಿದ್ದ 16 ವರ್ಷದ ಬಾಲಕಿಯನ್ನು ರಕ್ಷಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ರಕ್ಷಣಾ ತಂಡಗಳು ಸಂಜೆಯಿಂದ ಉಳಿದವರಿಗಾಗಿ ಹುಡುಕಾಟ ಮುಂದುವರೆಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:01 pm, Fri, 3 October 25