AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಪಾಲ್​ ನೀರು ಸಂಸ್ಕರಣ ಘಟಕದಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆ; ಹಲವರ ಸ್ಥಿತಿ ಗಂಭೀರ

ಮಧ್ಯಪ್ರದೇಶದ ಭೋಪಾಲ್‌ನಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಈ ಘಟನೆ ನಡೆದಿದ್ದು, ಅನಿಲ ಸೋರಿಕೆಯಿಂದಾಗಿ ಅನೇಕ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ.

ಭೋಪಾಲ್​ ನೀರು ಸಂಸ್ಕರಣ ಘಟಕದಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆ; ಹಲವರ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 27, 2022 | 8:28 AM

Share

ಭೋಪಾಲ್: ಮಧ್ಯಪ್ರದೇಶದ ಭೋಪಾಲ್ (Bhopal) ನೀರು ಸಂಸ್ಕರಣಾ ಘಟಕದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಉಸಿರಾಟದ ತೊಂದರೆಯಿಂದ ಬುಧವಾರ ತಡರಾತ್ರಿ ಹಲವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನೂ ಅನೇಕರು ಅನಾರೋಗ್ಯಕ್ಕೆ ಒಳಗಾಗಿದ್ದು, ಅವರ ಕಣ್ಣುಗಳಲ್ಲಿ ಕಿರಿಕಿರಿ ಮತ್ತು ಉಸಿರಾಟದ ತೊಂದರೆಯನ್ನು ಅನುಭವಿಸಿದ್ದಾರೆ.

ಮಧ್ಯಪ್ರದೇಶದ ಭೋಪಾಲ್‌ನಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಈ ಘಟನೆ ನಡೆದಿದ್ದು, ಅನಿಲ ಸೋರಿಕೆಯಿಂದಾಗಿ ಅನೇಕ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಭೋಪಾಲ್ ಜಿಲ್ಲಾಧಿಕಾರಿ ಹಾಗೂ ಮುನ್ಸಿಪಲ್ ಕಾರ್ಪೊರೇಷನ್ ಕಮಿಷನರ್ ಸ್ಥಳಕ್ಕೆ ಆಗಮಿಸಿದ್ದಾರೆ. ಈ ಪ್ರದೇಶದಲ್ಲಿನ ನೀರು ಸಂಸ್ಕರಣಾ ಘಟಕದಲ್ಲಿ ಅಳವಡಿಸಲಾಗಿರುವ 900 ಕೆಜಿ ತೂಕದ ಕ್ಲೋರಿನ್ ಗ್ಯಾಸ್ ಸಿಲಿಂಡರ್‌ನ ನಳಿಕೆಯು ಅಸಮರ್ಪಕ ಕಾರ್ಯದಿಂದ ಸೋರಿಕೆಯಾಗಲು ಪ್ರಾರಂಭಿಸಿತ್ತು.

ಈ ಪ್ರದೇಶದಲ್ಲಿ ಗಂಭೀರವಾಗಿದ್ದ ಗಾಯಗೊಂಡಿದ್ದ ಸುಮಾರು ಮೂವರನ್ನು ಉಸಿರಾಟದ ತೊಂದರೆಯಿಂದ ಹಮಿಡಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Crime News: ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಲಕ್ನೋದಲ್ಲಿ ಓರ್ವ ಸಾವು; 8 ತಿಂಗಳ ಮಗು ಸೇರಿ ಐವರಿಗೆ ಗಾಯ

ಭೋಪಾಲ್ ಅನಿಲ ದುರಂತ ಪರಿಹಾರ ಮತ್ತು ಪುನರ್ವಸತಿ ಸಚಿವ ವಿಶ್ವಾಸ್ ಸಾರಂಗ್ ಮತ್ತು ಭೋಪಾಲ್ ಮೇಯರ್ ಮಾಲ್ತಿ ರೈ ಅವರು ಹಮಿಡಿಯಾ ಆಸ್ಪತ್ರೆಗೆ ಆಗಮಿಸಿ ಗಾಯಗೊಂಡವರ ಪರಿಸ್ಥಿತಿಯನ್ನು ವಿಚಾರಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇಂದು (ಅಕ್ಟೋಬರ್ 27) ಆ ಪ್ರದೇಶದಲ್ಲಿ ನೀರು ಸರಬರಾಜು ಮಾಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ ಮತ್ತು ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಟ್ವೀಟ್ ಮಾಡಿದ್ದಾರೆ. “ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಮದರ್ ಇಂಡಿಯಾ ಕಾಲೋನಿಯಲ್ಲಿ, ಕ್ಲೋರಿನ್ ಗ್ಯಾಸ್ ಟ್ಯಾಂಕ್ ಸೋರಿಕೆಯಿಂದಾಗಿ ಕಣ್ಣುಗಳು, ಉಸಿರಾಟದ ತೊಂದರೆಗಳು ಮತ್ತು ಕೆಲವರು ಆಸ್ಪತ್ರೆಗೆ ದಾಖಲಾದ ಸುದ್ದಿ ಮುನ್ನೆಲೆಗೆ ಬಂದಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?