AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್‌ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು

ಗುಜರಾತ್ ರಾಜ್ಯದ ರಾಜ್​ಕೋಟ್ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ. ಇಂದು ಬೆಳಗ್ಗೆ ಕುಟುಂಬಸ್ಥರು ಹೋಗುತ್ತಿದ್ದ ಕಾರೊಂದು ಅಚಾನಕ್ಕಾಗಿ ಸೇತುವೆಯಿಂದ ಕೆಳಗೆ ಉರುಳಿದೆ. ಇದರಿಂದಾಗಿ 3 ಜನರು ಮೃತಪಟ್ಟಿದ್ದಾರೆ. ಕಾರು ಕೆಳಗೆ ಬಿದ್ದಿದ್ದರೂ ಅವರು ಬದುಕುಳಿಯುವ ಸಾಧ್ಯತೆಯಿತ್ತು. ಆದರೆ, ಆ ಕಾರಿಗೆ ಬೆಖಿ ಹೊತ್ತಿಕೊಂಡಿದೆ. ಇದರಿಂದ ಕಾರಿನಲ್ಲಿದ್ದವರು ಸಜೀವ ದಹನವಾಗಿದ್ದಾರೆ.

ರಾಜ್‌ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು
Rajkot AccidentImage Credit source: x
ಸುಷ್ಮಾ ಚಕ್ರೆ
|

Updated on:Jan 30, 2026 | 7:54 PM

Share

ರಾಜ್‌ಕೋಟ್, ಜನವರಿ 30: ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಕಾರು ಸೇತುವೆಯಿಂದ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಮೂವರು ಸುಟ್ಟು ಕರಕಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿನ ಗೊಂಡಾಲ್-ಅಟ್ಕೋಟ್ ಹೆದ್ದಾರಿಯಲ್ಲಿ ಬೆಳಿಗ್ಗೆ 5.30ರ ಸುಮಾರಿಗೆ ಕಾರು ಛೋಟಾ ಉದೇಪುರದಿಂದ ಗೊಂಡಾಲ್ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ (Accident) ಸಂಭವಿಸಿದೆ.

ಕಾರು ಸಣ್ಣ ಹೊಳೆಯೊಂದರ ಮೇಲಿನ 8 ಅಡಿ ಎತ್ತರದ ಸೇತುವೆಯ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು, ಕೆಳಗೆ ಉರುಳಿತು. ಕಾರು ಬಿದ್ದ ತಕ್ಷಣ ಅದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದವರು ಒಳಗೆ ಸಿಲುಕಿಕೊಂಡರು. ಇದರಿಂದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Video: ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ

ಮೃತರ ಸುಟ್ಟ ಶವಗಳನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Fri, 30 January 26

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್