AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ವಿಚ್ಛೇದನಕ್ಕೆ ಟ್ರಾಫಿಕ್​ ಕಾರಣ ಎಂದ ಅಮೃತಾ ಫಡ್ನವೀಸ್​; ಬೆಂಗಳೂರಿಗರು ಇದನ್ನು ಓದಬೇಡಿ ಎಂದ ಪ್ರಿಯಾಂಕಾ ಚತುರ್ವೇದಿ

ಇನ್ನೊಂದೆಡೆ ಮುಂಬೈ ಮೇಯರ್​ ಕಿಶೋರಿ ಪೆಡ್ನೇಕರ್​ ಕೂಡ ಅಮೃತಾ ಫಡ್ನವೀಸ್​ಗೆ ಪ್ರತಿಕ್ರಿಯೆ ನೀಡಿದ್ದಾರೆ. ಟ್ರಾಫಿಕ್​ ಕೂಡ ಡಿವೋರ್ಸ್​ಗೆ ಕಾರಣವಾಗುತ್ತದೆ ಎಂದು ಅವರು ಹೇಳಿದ ಮಾತು ನಿಜಕ್ಕೂ ಅಚ್ಚರಿ ಮೂಡಿಸಿದೆ ಎಂದಿದ್ದಾರೆ.

ಮುಂಬೈನಲ್ಲಿ ವಿಚ್ಛೇದನಕ್ಕೆ ಟ್ರಾಫಿಕ್​ ಕಾರಣ ಎಂದ ಅಮೃತಾ ಫಡ್ನವೀಸ್​; ಬೆಂಗಳೂರಿಗರು ಇದನ್ನು ಓದಬೇಡಿ ಎಂದ ಪ್ರಿಯಾಂಕಾ ಚತುರ್ವೇದಿ
ಅಮೃತಾ ಫಡ್ನವೀಸ್​
TV9 Web
| Edited By: |

Updated on: Feb 05, 2022 | 4:34 PM

Share

ಮುಂಬೈನಲ್ಲಿ ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಟ್ರಾಫಿಕ್ (Divorces due to Traffic) ​ ಕೂಡ ಕಾರಣವಂತೆ. ಇಂಥದ್ದೊಂದು ಅಚ್ಚರಿಯ ವಿಚಾರವನ್ನು ಮಹಾರಾಷ್ಟ್ರ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ ಫಡ್ನವೀಸ್ (Devendra Fadnavis’ wife Amruta Fadnavis )​ ಹೇಳಿದ್ದು, ಅದಕ್ಕೆ ಪ್ರತಿಯಾಗಿ ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ ವ್ಯಂಗ್ಯವಾಡಿದ್ದಾರೆ. ಈ ವರ್ಷದ ಅತ್ಯುತ್ತಮ ಅತಾರ್ಕಿಕ ವಿಚಾರ ಇದು ಎಂದು ಹೇಳಿದ್ದಾರೆ. ಇನ್ನೊಂದೆಡೆ ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್​ ಪ್ರತಿಕ್ರಿಯೆ ನೀಡಿ, ಇಂಥದ್ದೊಂದು ತರ್ಕವನ್ನು ಇದೇ ಮೊದಲ ಬಾರಿಗೆ ಕೇಳುತ್ತಿರುವುದಾಗಿ ತಿಳಿಸಿದ್ದಾರೆ. ಇನ್ನು ನೆಟ್ಟಿಗರಂತೂ ಅಮೃತಾರನ್ನು ಸಿಕ್ಕಾಪಟೆ ಟ್ರೋಲ್​ ಮಾಡುತ್ತಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮುಂಬೈನಲ್ಲಿನ ರಸ್ತೆ ದುಃಸ್ಥಿತಿ, ಟ್ರಾಫಿಕ್​ ಬಗ್ಗೆ  ಮಾತನಾಡಿದ ಅಮೃತಾ ಫಡ್ನವೀಸ್​, ನಾನೊಬ್ಬಳು ಸಾಮಾನ್ಯ ನಾಗರಿಕಳಾಗಿ ಈ ವಿಚಾರ ಹೇಳುತ್ತಿದ್ದೇನೆ. ಮುಂಬೈನಲ್ಲಿ ಟ್ರಾಫಿಕ್​​ನಿಂದಾಗಿ ಅದೆಷ್ಟೋ ಜನರಿಗೆ ತಮ್ಮ ಕುಟುಂಬಕ್ಕೆ ಸಮಯಕೊಡಲು ಸಾಧ್ಯವಾಗುತ್ತಿಲ್ಲ. ಇದು ವಿಚ್ಛೇದನಕ್ಕೆ ಕಾರಣವಾಗುತ್ತಿದೆ. ವಾಣಿಜ್ಯ ನಗರಿಯಲ್ಲಿ ಶೇ.3ರಷ್ಟು ವಿಚ್ಛೇದನಗಳಿಗೆ ಟ್ರಾಫಿಕ್​​ ಕಾರಣವಾಗಿದೆ ಎಂದು ಹೇಳಿದ್ದಾರೆ. ಮುಂದುವರಿದು ಮಾತನಾಡಿದ ಅವರು, ನಾನು ದೇವೇಂದ್ರ ಫಡ್ನವೀಸ್​ ಪತ್ನಿಯಾಗಿ ಮಾತನಾಡುತ್ತಿಲ್ಲ. ನಾನೊಬ್ಬಳು ಸಾಮಾನ್ಯ ಮಹಿಳೆಯಾಗಿ ಹೇಳುತ್ತಿದ್ದೇನೆ. ನನಗಂತೂ ಮುಂಬೈ ರಸ್ತೆಯ ಗುಂಡಿಗಳು, ಟ್ರಾಫಿಕ್​ ಸಹಿಸಿಕೊಂಡು ಸಾಕಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿಗರು ಇದನ್ನು ಓದಬೇಡಿ ! ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ ಟ್ವೀಟ್ ಮೂಲಕ ಅಮೃತಾ ಫಡ್ನವೀಸ್ ಹೇಳಿಕೆಗೆ ವ್ಯಂಗ್ಯವಾಡಿದ್ದಾರೆ. ಅಮೃತಾ ಹೆಸರನ್ನು ಉಲ್ಲೇಖಿಸದೆ ಟ್ವೀಟ್ ಮಾಡಿದ ಅವರು, ಶೇ.3ರಷ್ಟು ಡಿವೋರ್ಸ್​ಗಳು ಟ್ರಾಫಿಕ್​​ನಿಂದ ಆಗುತ್ತಿದೆ ಎಂದು ಹೇಳುತ್ತಿರುವ ಮಹಿಳೆಗೆ ಅತ್ಯುತ್ತಮ ಅತಾರ್ಕಿಕ ಪ್ರಶಸ್ತಿ ನೀಡಬೇಕು. ಹೀಗೆ ಬುದ್ಧಿಗೆ ಬ್ರೇಕ್​ ನೀಡುವ ಬದಲು ರಜಾದಿನದ ಬ್ರೇಕ್​ ತೆಗದುಕೊಂಡು ಮನಸು ಸರಿ ಮಾಡಿಕೊಳ್ಳಿ ಎಂದಿದ್ದಾರೆ. ಅಷ್ಟೇ ಅಲ್ಲ, ಬೆಂಗಳೂರಿನ ಕುಟುಂಬಗಳು ಈ ಸುದ್ದಿಯನ್ನು ಓದಬೇಡಿ. ನಿಮ್ಮ ಮದುವೆಗೆ ಮಾರಕವಾಗಬಹುದು ಎಂದೂ ಹೇಳಿದ್ದಾರೆ.

ಇನ್ನೊಂದೆಡೆ ಮುಂಬೈ ಮೇಯರ್​ ಕಿಶೋರಿ ಪೆಡ್ನೇಕರ್​ ಕೂಡ ಅಮೃತಾ ಫಡ್ನವೀಸ್​ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅಮೃತಾ ಅವರು ನಮ್ಮ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರ ಪತ್ನಿ. ಟ್ರಾಫಿಕ್​ ಕೂಡ ಡಿವೋರ್ಸ್​ಗೆ ಕಾರಣವಾಗುತ್ತದೆ ಎಂದು ಅವರು ಹೇಳಿದ ಮಾತು ನಿಜಕ್ಕೂ ಅಚ್ಚರಿ ಮೂಡಿಸಿದೆ. ವಿಚ್ಛೇದನಕ್ಕೆ ಹಲವು ಕಾರಣಗಳು ಇರಬಹುದು. ಅದರಲ್ಲಿ ಟ್ರಾಫಿಕ್​ನಿಂದಲೂ ಡಿವೋರ್ಸ್ ಆಗುತ್ತದೆ ಎಂಬುದನ್ನು ಇದೇ ಮೊದಲ ಬಾರಿ ಕೇಳುತ್ತಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: India vs West Indies: ಯುವ ದಾಂಡಿಗನೊಂದಿಗೆ ಇನಿಂಗ್ಸ್ ಆರಂಭಿಸಲಿರುವ ರೋಹಿತ್ ಶರ್ಮಾ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು