AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಷ್ಟಿಹೀನ ಶಿಕ್ಷಕ ಪಾಠ ಮಾಡುತ್ತಿದ್ದರೆ, ಅವರೆದುರು ನೃತ್ಯ ಮಾಡಿದ ವಿದ್ಯಾರ್ಥಿಗಳು; ಮೂವರಿಗೆ ಗೇಟ್​ಪಾಸ್​

ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ವಿಡಿಯೋ ನೋಡಿದ ಬಳಿಕವೇ ಇದು ನಮ್ಮ ಅರಿವಿಗೆ ಬಂತು ಎಂದುರಾಸಿಪುರಂ ಜಿಲ್ಲಾ ಶೈಕ್ಷಣಿಕ ಅಧಿಕಾರಿ ಬಾಲಸುಬ್ರಹ್ಮಣ್ಯಂ ತಿಳಿಸಿದ್ದಾರೆ.

ದೃಷ್ಟಿಹೀನ ಶಿಕ್ಷಕ ಪಾಠ ಮಾಡುತ್ತಿದ್ದರೆ, ಅವರೆದುರು ನೃತ್ಯ ಮಾಡಿದ ವಿದ್ಯಾರ್ಥಿಗಳು; ಮೂವರಿಗೆ ಗೇಟ್​ಪಾಸ್​
ತರಗತಿ ಕೋಣೆ ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 03, 2021 | 4:56 PM

Share

ದೃಷ್ಟಿ ಹೀನ ಶಿಕ್ಷಕನ ಎದುರು ತರಗತಿ ಕೋಣೆಯಲ್ಲಿ ನೃತ್ಯ ಮಾಡಿದ ಮೂವರು ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಗೆ ಕಳಿಸಲಾಗಿದೆ. ಆ ಮೂವರಿಗೂ ವರ್ಗಾವಣೆ ಸರ್ಟಿಫಿಕೆಟ್​ ನೀಡಲಾಗಿದ್ದು, ಬೇರೆ ಯಾವುದಾದರೂ ಶಾಲೆ ಸೇರಬಹುದು ಎಂದೂ ಹೇಳಲಾಗಿದೆ. ಈ ಘಟನೆ ನಡೆದದ್ದು ತಮಿಳುನಾಡಿನ ರಾಸಿಪುರಂನಲ್ಲಿರುವ ಸರ್ಕಾರಿ ಶಾಲೆಯಲ್ಲಿ. ಕಣ್ಣು ಕಾಣದ ಶಿಕ್ಷಕನ ಎದುರು ಕುಣಿದು, ತಮಾಷೆ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಸೋಷಿಯಲ್ ಮೀಡಿಯಾದಲ್ಲೂ ಸಿಕ್ಕಾಪಟೆ ಆಕ್ರೋಶ ವ್ಯಕ್ತವಾಗಿದೆ.

ಶಿಕ್ಷಕನ ಹೆಸರು ಪನ್ನೀರ್​. ಇವರು ಇತಿಹಾಸ ವಿಷಯ ಕಲಿಸುವ ಶಿಕ್ಷಕರಾಗಿದ್ದಾರೆ. ಆದರೆ ಇವರಿಗೆ ಕಣ್ಣು ಕಾಣಿಸುವುದಿಲ್ಲ. ರಾಸಿಪುರಂನ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುವ ಇವರು ಎಂದಿನಂತೆ ಪಾಠ ಕಲಿಸುತ್ತಿದ್ದರೆ, ಮೂವರು ವಿದ್ಯಾರ್ಥಿಗಳು ಅಲ್ಲಿಯೇ ನೃತ್ಯ ಮಾಡಿದ್ದಾರೆ. ಇನ್ಯಾರೋ ಅದನ್ನು ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಸಿಕ್ಕಾಪಟೆ ವೈರಲ್ ಆಗಿದೆ. ದೃಷ್ಟಿಹೀನರಾಗಿರುವ ಶಿಕ್ಷಕ ತನ್ನ ಎದುರು ವಿದ್ಯಾರ್ಥಿಗಳು ಕುಣಿಯುತ್ತಿದ್ದಾರೆ ಎಂಬುದನ್ನು ಅರಿಯದೆ ಪಾಠ ಮಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಕ್ರಮ ಕೈಗೊಂಡ ಶಾಲೆ ಇನ್ನು ಘಟನೆ ಗಮನಕ್ಕೆ ಬರುತ್ತಿದ್ದಂತೆ ಶಾಲೆ ಕ್ರಮ ಕೈಗೊಂಡಿದೆ. ನೃತ್ಯ ಮಾಡಿದ ಮೂವರೂ ವಿದ್ಯಾರ್ಥಿಗಳಿಗೆ ಶಾಲೆಯಿಂದ ಗೇಟ್​ಪಾಸ್​ ಕೊಟ್ಟಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ವಿಡಿಯೋ ನೋಡಿದ ಬಳಿಕವೇ ಇದು ನಮ್ಮ ಅರಿವಿಗೆ ಬಂತು ಎಂದು ಹೇಳಿರುವ ರಾಸಿಪುರಂ ಜಿಲ್ಲಾ ಶೈಕ್ಷಣಿಕ ಅಧಿಕಾರಿ ಬಾಲಸುಬ್ರಹ್ಮಣ್ಯಂ, ನಿಜಕ್ಕೂ ವಿಡಿಯೋ ನೋಡಿ ಶಾಕ್​ ಆಗಿದೆ. ವಿದ್ಯಾರ್ಥಿಗಳಿಂದ ಇಂಥ ವರ್ತನೆ ನಿರೀಕ್ಷೆ ಮಾಡಿರಲಿಲ್ಲ. ಡ್ಯಾನ್ಸ್ ಮಾಡಿದ ಮೂವರಿಗೂ ವರ್ಗಾವಣೆ ಪತ್ರ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Hangal Bypoll 2021: ಬಿಜೆಪಿಯಿಂದ ಉದಾಸಿ ಪತ್ನಿಗೆ ಟಿಕೆಟ್? ಕಾಂಗ್ರೆಸ್ ಟಿಕೆಟ್ ನನಗೆ ಬೇಕು ಎಂದ ಮನೋಹರ್ ತಹಶೀಲ್ದಾರ್

ಭಾರತ್ ಬಂದ್ ವೇಳೆ ಪೊಲೀಸ್ ಇನ್ಸ್​ಪೆಕ್ಟರ್​ ವಾಕಿಟಾಕಿ ಕಳವು

Published On - 4:54 pm, Sun, 3 October 21

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?