AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಮುಗಿಸಿ ಮನೆಗೆ ತೆರಳಲು ಶಾಲೆ ಎದುರು ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಕಾರು: ಸ್ಥಳದಲ್ಲೇ ಮೂವರು ಸಾವು

ಪರೀಕ್ಷೆ ಮುಗಿಸಿ ಮನೆಗೆ ತೆರಳಲೆಂದು ಶಾಲೆಯ ಎದುರು ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

ಪರೀಕ್ಷೆ ಮುಗಿಸಿ ಮನೆಗೆ ತೆರಳಲು ಶಾಲೆ ಎದುರು ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಕಾರು: ಸ್ಥಳದಲ್ಲೇ ಮೂವರು ಸಾವು
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on: Mar 23, 2023 | 7:36 AM

Share

ಮುಖ್ಯಾಂಶಗಳು

  • ಒಡಿಶಾದ ಶಾಲೆಯೊಂದರ ಬಳಿ ಭೀಕರ ಅಪಘಾತ ಮೂವರು ವಿದ್ಯಾರ್ಥಿಗಳು ಸಾವು
  • ಪರೀಕ್ಷೆ ಮುಗಿಸಿ ಮನೆಗೆ ತೆರಳಲು ಶಾಲೆ ಎದುರು ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಕಾರು: ಸ್ಥಳದಲ್ಲೇ ಮೂವರು ಸಾವು
  • ಶಾರದಾಪಲ್ಲಿಯ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗಳು, ಪರೀಕ್ಷೆ ಮುಗಿಸಿ ಶಾಲೆಯ ಗೇಟ್​ ಬಳಿ ಬಸ್​ಗಾಗಿ ಕಾಯುತ್ತಿರುವಾಗ ವೇಗವಾಗಿ ಬಂದ ಕಾರು ಗೋಡೆಗೆ ಡಿಕ್ಕಿ ಹೊಡೆದು ಬಳಿಕ ವಿದ್ಯಾರ್ಥಿಗಳ ಮೇಲೆ ಉರುಳಿ ಬಿದ್ದಿದೆ.

ಪರೀಕ್ಷೆ ಮುಗಿಸಿ ಮನೆಗೆ ತೆರಳಲೆಂದು ಶಾಲೆಯ ಎದುರು ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಮತ್ತೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಾರದಾಪಲ್ಲಿಯ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗಳು, ಪರೀಕ್ಷೆ ಮುಗಿಸಿ ಶಾಲೆಯ ಗೇಟ್​ ಬಳಿ ಬಸ್​ಗಾಗಿ ಕಾಯುತ್ತಿರುವಾಗ ವೇಗವಾಗಿ ಬಂದ ಕಾರು ಗೋಡೆಗೆ ಡಿಕ್ಕಿ ಹೊಡೆದು ಬಳಿಕ ವಿದ್ಯಾರ್ಥಿಗಳ ಮೇಲೆ ಉರುಳಿ ಬಿದ್ದಿದೆ.

ಮತ್ತಷ್ಟು ಓದಿ: Chikkamagaluru: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗೆ 50 ಸಾವಿರ ರೂ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ