AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ 20 ವಿಶ್ವಕಪ್​ ಪಂದ್ಯದಲ್ಲಿ ಪಾಕ್​ ಗೆಲುವು ಸಂಭ್ರಮಿಸಿದ 3 ವಿದ್ಯಾರ್ಥಿಗಳ ಬಂಧನ; ದೇಶದ್ರೋಹ ಕೇಸ್​ ದಾಖಲಿಸಲು ಯುಪಿ ಸರ್ಕಾರ ನಿರ್ಧಾರ

ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾಗಿ ಮುಖ್ಯಮಂತ್ರಿ​ ಕಚೇರಿ ಇಂದು ಬೆಳಗ್ಗೆ ಟ್ವೀಟ್​ ಮಾಡಿದೆ.

ಟಿ 20 ವಿಶ್ವಕಪ್​ ಪಂದ್ಯದಲ್ಲಿ ಪಾಕ್​ ಗೆಲುವು ಸಂಭ್ರಮಿಸಿದ 3 ವಿದ್ಯಾರ್ಥಿಗಳ ಬಂಧನ; ದೇಶದ್ರೋಹ ಕೇಸ್​ ದಾಖಲಿಸಲು ಯುಪಿ ಸರ್ಕಾರ ನಿರ್ಧಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 28, 2021 | 1:25 PM

Share

ಇತ್ತೀಚೆಗೆ ನಡೆದ ಟಿ 20 ವಿಶ್ವಕಪ್​ ಪಂದ್ಯದಲ್ಲಿ ಪಾಕಿಸ್ತಾನದ ಎದುರು ಭಾರತ ಸೋತಿದ್ದು ಇಲ್ಲಿನ ಕ್ರಿಕೆಟ್​ ಪ್ರೇಮಿಗಳಿಗೆ ತೀವ್ರ ಬೇಸರ ಉಂಟು ಮಾಡಿದೆ. ಭಾರತ-ಪಾಕಿಸ್ತಾನ ಕ್ರಿಕೆಟ್​ (India Pakistan T20) ಪಂದ್ಯವೆಂದರೆ ಮೊದಲಿನಿಂದಲೂ ಅಲ್ಲೊಂದು ಪ್ರತಿಷ್ಠೆ ಇದ್ದೇ ಇರುತ್ತದೆ. ಅದನ್ನು ಹೆಚ್ಚಿನವರು ದ್ವೇಷದ ದೃಷ್ಟಿಯಿಂದಲೇ ನೋಡುತ್ತಾರೆ. ಅದರೊಂದಿಗೆ ಪಾಕಿಸ್ತಾನ(Pakistan)ದ ಗೆಲುವನ್ನು ಸಂಭ್ರಮಿಸುವವರೂ ಅಲ್ಲೊಬ್ಬರು, ಇಲ್ಲೊಬ್ಬರು ಸಿಗುತ್ತಾರೆ. ಹಾಗೇ ಈ ಬಾರಿ ಟಿ 20ಯಲ್ಲಿ ಪಾಕ್​ ಗೆದ್ದಿದ್ದನ್ನು ಸಂಭ್ರಮಿಸಿದ ಮೂವರು ವಿದ್ಯಾರ್ಥಿಗಳನ್ನು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಲಾಗಿದೆ. 

ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾಗಿ ಮುಖ್ಯಮಂತ್ರಿ​ ಕಚೇರಿ ಇಂದು ಬೆಳಗ್ಗೆ ಟ್ವೀಟ್​ ಮಾಡಿದೆ. ಬಂಧಿತರಾದ ಮೂರು ವಿದ್ಯಾರ್ಥಿಗಳೂ ಕಾಶ್ಮೀರದವರೇ ಆಗಿದ್ದು, ರಾಜಾ ಬಲವಂತ್​ ಸಿಂಗ್​ ಕಾಲೇಜಿನಲ್ಲಿ ಇಂಜನಿಯರಿಂಗ್​ ಓದುತ್ತಿದ್ದಾರೆ. ಬಂಧಿತರನ್ನು ಅರ್ಶೀದ್​ ಯುಸುಫ್​, ಇನಾಯತ್​ ಅಲ್ತಫ್​ ಶೇಖ್​​ ಮತ್ತು ಶೌಕತ್​ ಅಹ್ಮದ್​ ಗನೈ ಎಂದು ಗುರುತಿಸಲಾಗಿದೆ. ಇವರಲ್ಲಿ ಅರ್ಶೀದ್​ ಮತ್ತು ಇನಾಯತ್​ ಇಬ್ಬರೂ ಇಂಜನಿಯರಿಂಗ್​ ಪದವಿ ಮೂರನೇ ವರ್ಷದಲ್ಲಿ, ಶೌಕತ್​ ನಾಲ್ಕನೇ ವರ್ಷದಲ್ಲಿ ಓದುತ್ತಿದ್ದಾರೆ.  ಧರ್ಮದ ಆಧಾರದ ಮೇಲೆ ಗುಂಪುಗಳ ನಡುವೆ ವೈರತ್ವ ಮತ್ತು ಸೈಬರ್​ ಭಯೋತ್ಪಾದನೆಯನ್ನು ಉತ್ತೇಜಿಸಿದ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.

ಸದ್ಯ ಕಾಲೇಜು ಮೂವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ಅವರು ಪಾಕಿಸ್ತಾನ ಪರ ಸ್ಟೇಟಸ್​ ಹಾಕುತ್ತಿದ್ದು, ಅಶಿಸ್ತಿನ ವರ್ತನೆ ತೋರಿಸುತ್ತಿದ್ದುದು ಬೆಳಕಿಗೆ ಬಂದ ನಂತರ ಅವರನ್ನು ಅಮಾನತುಗೊಳಿಸಿಸಲಾಗಿದೆ ಎಂದು ಕಾಲೇಜು ತಿಳಿಸಿದೆ. ಇವರ ಹೊರತಾಗಿ, ಕ್ರಿಕೆಟ್ ಪಂದ್ಯಕ್ಕೆ ಸಂಬಂಧಪಟ್ಟ ಪ್ರಕರಣದಲ್ಲಿ ಲಖನೌದಿಂದ ಮೂವರನ್ನು, ಬರೇಲಿಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್, ನಾಳೆಯಿಂದ ಭಕ್ತರಿಗೆ ದರ್ಶನ ಭಾಗ್ಯ

Redmi Note 11 Series: ಇಂದು ಬಹುನಿರೀಕ್ಷಿತ ರೆಡ್ಮಿ ನೋಟ್ 11 ಸರಣಿ ಸ್ಮಾರ್ಟ್​ಫೋನ್ ಬಿಡುಗಡೆ: ಏನು ವಿಶೇಷತೇ?, ಬೆಲೆ?

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ