AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ 20 ವಿಶ್ವಕಪ್​ ಪಂದ್ಯದಲ್ಲಿ ಪಾಕ್​ ಗೆಲುವು ಸಂಭ್ರಮಿಸಿದ 3 ವಿದ್ಯಾರ್ಥಿಗಳ ಬಂಧನ; ದೇಶದ್ರೋಹ ಕೇಸ್​ ದಾಖಲಿಸಲು ಯುಪಿ ಸರ್ಕಾರ ನಿರ್ಧಾರ

ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾಗಿ ಮುಖ್ಯಮಂತ್ರಿ​ ಕಚೇರಿ ಇಂದು ಬೆಳಗ್ಗೆ ಟ್ವೀಟ್​ ಮಾಡಿದೆ.

ಟಿ 20 ವಿಶ್ವಕಪ್​ ಪಂದ್ಯದಲ್ಲಿ ಪಾಕ್​ ಗೆಲುವು ಸಂಭ್ರಮಿಸಿದ 3 ವಿದ್ಯಾರ್ಥಿಗಳ ಬಂಧನ; ದೇಶದ್ರೋಹ ಕೇಸ್​ ದಾಖಲಿಸಲು ಯುಪಿ ಸರ್ಕಾರ ನಿರ್ಧಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 28, 2021 | 1:25 PM

Share

ಇತ್ತೀಚೆಗೆ ನಡೆದ ಟಿ 20 ವಿಶ್ವಕಪ್​ ಪಂದ್ಯದಲ್ಲಿ ಪಾಕಿಸ್ತಾನದ ಎದುರು ಭಾರತ ಸೋತಿದ್ದು ಇಲ್ಲಿನ ಕ್ರಿಕೆಟ್​ ಪ್ರೇಮಿಗಳಿಗೆ ತೀವ್ರ ಬೇಸರ ಉಂಟು ಮಾಡಿದೆ. ಭಾರತ-ಪಾಕಿಸ್ತಾನ ಕ್ರಿಕೆಟ್​ (India Pakistan T20) ಪಂದ್ಯವೆಂದರೆ ಮೊದಲಿನಿಂದಲೂ ಅಲ್ಲೊಂದು ಪ್ರತಿಷ್ಠೆ ಇದ್ದೇ ಇರುತ್ತದೆ. ಅದನ್ನು ಹೆಚ್ಚಿನವರು ದ್ವೇಷದ ದೃಷ್ಟಿಯಿಂದಲೇ ನೋಡುತ್ತಾರೆ. ಅದರೊಂದಿಗೆ ಪಾಕಿಸ್ತಾನ(Pakistan)ದ ಗೆಲುವನ್ನು ಸಂಭ್ರಮಿಸುವವರೂ ಅಲ್ಲೊಬ್ಬರು, ಇಲ್ಲೊಬ್ಬರು ಸಿಗುತ್ತಾರೆ. ಹಾಗೇ ಈ ಬಾರಿ ಟಿ 20ಯಲ್ಲಿ ಪಾಕ್​ ಗೆದ್ದಿದ್ದನ್ನು ಸಂಭ್ರಮಿಸಿದ ಮೂವರು ವಿದ್ಯಾರ್ಥಿಗಳನ್ನು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಲಾಗಿದೆ. 

ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾಗಿ ಮುಖ್ಯಮಂತ್ರಿ​ ಕಚೇರಿ ಇಂದು ಬೆಳಗ್ಗೆ ಟ್ವೀಟ್​ ಮಾಡಿದೆ. ಬಂಧಿತರಾದ ಮೂರು ವಿದ್ಯಾರ್ಥಿಗಳೂ ಕಾಶ್ಮೀರದವರೇ ಆಗಿದ್ದು, ರಾಜಾ ಬಲವಂತ್​ ಸಿಂಗ್​ ಕಾಲೇಜಿನಲ್ಲಿ ಇಂಜನಿಯರಿಂಗ್​ ಓದುತ್ತಿದ್ದಾರೆ. ಬಂಧಿತರನ್ನು ಅರ್ಶೀದ್​ ಯುಸುಫ್​, ಇನಾಯತ್​ ಅಲ್ತಫ್​ ಶೇಖ್​​ ಮತ್ತು ಶೌಕತ್​ ಅಹ್ಮದ್​ ಗನೈ ಎಂದು ಗುರುತಿಸಲಾಗಿದೆ. ಇವರಲ್ಲಿ ಅರ್ಶೀದ್​ ಮತ್ತು ಇನಾಯತ್​ ಇಬ್ಬರೂ ಇಂಜನಿಯರಿಂಗ್​ ಪದವಿ ಮೂರನೇ ವರ್ಷದಲ್ಲಿ, ಶೌಕತ್​ ನಾಲ್ಕನೇ ವರ್ಷದಲ್ಲಿ ಓದುತ್ತಿದ್ದಾರೆ.  ಧರ್ಮದ ಆಧಾರದ ಮೇಲೆ ಗುಂಪುಗಳ ನಡುವೆ ವೈರತ್ವ ಮತ್ತು ಸೈಬರ್​ ಭಯೋತ್ಪಾದನೆಯನ್ನು ಉತ್ತೇಜಿಸಿದ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.

ಸದ್ಯ ಕಾಲೇಜು ಮೂವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ಅವರು ಪಾಕಿಸ್ತಾನ ಪರ ಸ್ಟೇಟಸ್​ ಹಾಕುತ್ತಿದ್ದು, ಅಶಿಸ್ತಿನ ವರ್ತನೆ ತೋರಿಸುತ್ತಿದ್ದುದು ಬೆಳಕಿಗೆ ಬಂದ ನಂತರ ಅವರನ್ನು ಅಮಾನತುಗೊಳಿಸಿಸಲಾಗಿದೆ ಎಂದು ಕಾಲೇಜು ತಿಳಿಸಿದೆ. ಇವರ ಹೊರತಾಗಿ, ಕ್ರಿಕೆಟ್ ಪಂದ್ಯಕ್ಕೆ ಸಂಬಂಧಪಟ್ಟ ಪ್ರಕರಣದಲ್ಲಿ ಲಖನೌದಿಂದ ಮೂವರನ್ನು, ಬರೇಲಿಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್, ನಾಳೆಯಿಂದ ಭಕ್ತರಿಗೆ ದರ್ಶನ ಭಾಗ್ಯ

Redmi Note 11 Series: ಇಂದು ಬಹುನಿರೀಕ್ಷಿತ ರೆಡ್ಮಿ ನೋಟ್ 11 ಸರಣಿ ಸ್ಮಾರ್ಟ್​ಫೋನ್ ಬಿಡುಗಡೆ: ಏನು ವಿಶೇಷತೇ?, ಬೆಲೆ?

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ