AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ 20 ವಿಶ್ವಕಪ್​ ಪಂದ್ಯದಲ್ಲಿ ಪಾಕ್​ ಗೆಲುವು ಸಂಭ್ರಮಿಸಿದ 3 ವಿದ್ಯಾರ್ಥಿಗಳ ಬಂಧನ; ದೇಶದ್ರೋಹ ಕೇಸ್​ ದಾಖಲಿಸಲು ಯುಪಿ ಸರ್ಕಾರ ನಿರ್ಧಾರ

ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾಗಿ ಮುಖ್ಯಮಂತ್ರಿ​ ಕಚೇರಿ ಇಂದು ಬೆಳಗ್ಗೆ ಟ್ವೀಟ್​ ಮಾಡಿದೆ.

ಟಿ 20 ವಿಶ್ವಕಪ್​ ಪಂದ್ಯದಲ್ಲಿ ಪಾಕ್​ ಗೆಲುವು ಸಂಭ್ರಮಿಸಿದ 3 ವಿದ್ಯಾರ್ಥಿಗಳ ಬಂಧನ; ದೇಶದ್ರೋಹ ಕೇಸ್​ ದಾಖಲಿಸಲು ಯುಪಿ ಸರ್ಕಾರ ನಿರ್ಧಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 28, 2021 | 1:25 PM

Share

ಇತ್ತೀಚೆಗೆ ನಡೆದ ಟಿ 20 ವಿಶ್ವಕಪ್​ ಪಂದ್ಯದಲ್ಲಿ ಪಾಕಿಸ್ತಾನದ ಎದುರು ಭಾರತ ಸೋತಿದ್ದು ಇಲ್ಲಿನ ಕ್ರಿಕೆಟ್​ ಪ್ರೇಮಿಗಳಿಗೆ ತೀವ್ರ ಬೇಸರ ಉಂಟು ಮಾಡಿದೆ. ಭಾರತ-ಪಾಕಿಸ್ತಾನ ಕ್ರಿಕೆಟ್​ (India Pakistan T20) ಪಂದ್ಯವೆಂದರೆ ಮೊದಲಿನಿಂದಲೂ ಅಲ್ಲೊಂದು ಪ್ರತಿಷ್ಠೆ ಇದ್ದೇ ಇರುತ್ತದೆ. ಅದನ್ನು ಹೆಚ್ಚಿನವರು ದ್ವೇಷದ ದೃಷ್ಟಿಯಿಂದಲೇ ನೋಡುತ್ತಾರೆ. ಅದರೊಂದಿಗೆ ಪಾಕಿಸ್ತಾನ(Pakistan)ದ ಗೆಲುವನ್ನು ಸಂಭ್ರಮಿಸುವವರೂ ಅಲ್ಲೊಬ್ಬರು, ಇಲ್ಲೊಬ್ಬರು ಸಿಗುತ್ತಾರೆ. ಹಾಗೇ ಈ ಬಾರಿ ಟಿ 20ಯಲ್ಲಿ ಪಾಕ್​ ಗೆದ್ದಿದ್ದನ್ನು ಸಂಭ್ರಮಿಸಿದ ಮೂವರು ವಿದ್ಯಾರ್ಥಿಗಳನ್ನು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಲಾಗಿದೆ. 

ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾಗಿ ಮುಖ್ಯಮಂತ್ರಿ​ ಕಚೇರಿ ಇಂದು ಬೆಳಗ್ಗೆ ಟ್ವೀಟ್​ ಮಾಡಿದೆ. ಬಂಧಿತರಾದ ಮೂರು ವಿದ್ಯಾರ್ಥಿಗಳೂ ಕಾಶ್ಮೀರದವರೇ ಆಗಿದ್ದು, ರಾಜಾ ಬಲವಂತ್​ ಸಿಂಗ್​ ಕಾಲೇಜಿನಲ್ಲಿ ಇಂಜನಿಯರಿಂಗ್​ ಓದುತ್ತಿದ್ದಾರೆ. ಬಂಧಿತರನ್ನು ಅರ್ಶೀದ್​ ಯುಸುಫ್​, ಇನಾಯತ್​ ಅಲ್ತಫ್​ ಶೇಖ್​​ ಮತ್ತು ಶೌಕತ್​ ಅಹ್ಮದ್​ ಗನೈ ಎಂದು ಗುರುತಿಸಲಾಗಿದೆ. ಇವರಲ್ಲಿ ಅರ್ಶೀದ್​ ಮತ್ತು ಇನಾಯತ್​ ಇಬ್ಬರೂ ಇಂಜನಿಯರಿಂಗ್​ ಪದವಿ ಮೂರನೇ ವರ್ಷದಲ್ಲಿ, ಶೌಕತ್​ ನಾಲ್ಕನೇ ವರ್ಷದಲ್ಲಿ ಓದುತ್ತಿದ್ದಾರೆ.  ಧರ್ಮದ ಆಧಾರದ ಮೇಲೆ ಗುಂಪುಗಳ ನಡುವೆ ವೈರತ್ವ ಮತ್ತು ಸೈಬರ್​ ಭಯೋತ್ಪಾದನೆಯನ್ನು ಉತ್ತೇಜಿಸಿದ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.

ಸದ್ಯ ಕಾಲೇಜು ಮೂವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ಅವರು ಪಾಕಿಸ್ತಾನ ಪರ ಸ್ಟೇಟಸ್​ ಹಾಕುತ್ತಿದ್ದು, ಅಶಿಸ್ತಿನ ವರ್ತನೆ ತೋರಿಸುತ್ತಿದ್ದುದು ಬೆಳಕಿಗೆ ಬಂದ ನಂತರ ಅವರನ್ನು ಅಮಾನತುಗೊಳಿಸಿಸಲಾಗಿದೆ ಎಂದು ಕಾಲೇಜು ತಿಳಿಸಿದೆ. ಇವರ ಹೊರತಾಗಿ, ಕ್ರಿಕೆಟ್ ಪಂದ್ಯಕ್ಕೆ ಸಂಬಂಧಪಟ್ಟ ಪ್ರಕರಣದಲ್ಲಿ ಲಖನೌದಿಂದ ಮೂವರನ್ನು, ಬರೇಲಿಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್, ನಾಳೆಯಿಂದ ಭಕ್ತರಿಗೆ ದರ್ಶನ ಭಾಗ್ಯ

Redmi Note 11 Series: ಇಂದು ಬಹುನಿರೀಕ್ಷಿತ ರೆಡ್ಮಿ ನೋಟ್ 11 ಸರಣಿ ಸ್ಮಾರ್ಟ್​ಫೋನ್ ಬಿಡುಗಡೆ: ಏನು ವಿಶೇಷತೇ?, ಬೆಲೆ?

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ