AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ; ಮುಂದುವರಿದ ಕಾರ್ಯಾಚರಣೆ

ನಿನ್ನೆ ಜಮ್ಮು-ಕಾಶ್ಮೀರದ ಪುಲ್ವಾಮಾದ ಆವಂತಿಪೋರಾದಲ್ಲಿ ಕೂಡ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಅದರಲ್ಲಿ ಜೈಶ್​ ಇ ಮೊಹಮ್ಮದ್​ ಸಂಘಟನೆಯ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿತ್ತು.

ಶ್ರೀನಗರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ; ಮುಂದುವರಿದ ಕಾರ್ಯಾಚರಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 16, 2022 | 10:12 AM

Share

ಶ್ರೀನಗರದ ನೌಗಮ್​​ ಪ್ರದೇಶದಲ್ಲಿ ಇಂದು ಭದ್ರತಾ ಪಡೆ ಸಿಬ್ಬಂದಿ (Security Forces) ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಮೃತ ಭಯೋತ್ಪಾದಕರಿಂದ ಅಪಾರ ಪ್ರಮಾಣದ ಮಾರಕಾಸ್ತ್ರಗಳು, ಶಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ನೌಗಾಮ್​​ನಲ್ಲಿ ಉಗ್ರರು (Terrorists) ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಆ ಪ್ರದೇಶವನ್ನು ಸುತ್ತುವರಿದಿದ್ದರು. ರಕ್ಷಣಾ ಸಿಬ್ಬಂದಿ ಪ್ರದೇಶವನ್ನು ಸುತ್ತುವರಿದ ಬೆನ್ನಲ್ಲೇ, ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಅದಕ್ಕೆ ಪ್ರತಿ ದಾಳಿ ನಡೆಸಿದ ಪೊಲೀಸರು ಮೂವರನ್ನು ಹತ್ಯೆ ಮಾಡಿದ್ದಾರೆ.   

ನಿನ್ನೆ ಜಮ್ಮು-ಕಾಶ್ಮೀರದ ಪುಲ್ವಾಮಾದ ಆವಂತಿಪೋರಾದಲ್ಲಿ ಕೂಡ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಅದರಲ್ಲಿ ಜೈಶ್​ ಇ ಮೊಹಮ್ಮದ್​ ಸಂಘಟನೆಯ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿತ್ತು. ನಿನ್ನೆ  ಚಾರ್ಸೂ ಗ್ರಾಮದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಶೋಧ ಕಾರ್ಯ ನಡೆಸುತ್ತಿರುವ ತಂಡವು ಶಂಕಿತ ಸ್ಥಳವನ್ನು ಸುತ್ತುವರೆದಿದ್ದರಿಂದ ಅಡಗಿಕೊಂಡಿದ್ದ ಭಯೋತ್ಪಾದಕನು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದನು. ಇದರಿಂದ ಎರಡೂ ಕಡೆಗಳಿಂದ ಗುಂಡಿನ ಚಕಮಕಿ ಶುರುವಾಗಿತ್ತು ಎಂದು ಕಾಶ್ಮೀರ ಐಜಿಪಿ ವಿಜಯ್​ಕುಮಾರ್ ತಿಳಿಸಿದ್ದರು.

ಇದನ್ನೂ ಓದಿ: The Kashmir Files: ಮೀಟುಗೋಲು; ಸುಟ್ಟ ಮನೆಗಳು, ಅರೆಬಿದ್ದ ಮನೆಗಳಿಗೆ ಆಗ ತಾನೇ ಸರ್ಕಾರ ಮರಮ್ಮತ್ತು ಮಾಡಿತ್ತು

Published On - 9:46 am, Wed, 16 March 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ