AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ; ಮುಂದುವರಿದ ಕಾರ್ಯಾಚರಣೆ

ನಿನ್ನೆ ಜಮ್ಮು-ಕಾಶ್ಮೀರದ ಪುಲ್ವಾಮಾದ ಆವಂತಿಪೋರಾದಲ್ಲಿ ಕೂಡ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಅದರಲ್ಲಿ ಜೈಶ್​ ಇ ಮೊಹಮ್ಮದ್​ ಸಂಘಟನೆಯ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿತ್ತು.

ಶ್ರೀನಗರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ; ಮುಂದುವರಿದ ಕಾರ್ಯಾಚರಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 16, 2022 | 10:12 AM

Share

ಶ್ರೀನಗರದ ನೌಗಮ್​​ ಪ್ರದೇಶದಲ್ಲಿ ಇಂದು ಭದ್ರತಾ ಪಡೆ ಸಿಬ್ಬಂದಿ (Security Forces) ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಮೃತ ಭಯೋತ್ಪಾದಕರಿಂದ ಅಪಾರ ಪ್ರಮಾಣದ ಮಾರಕಾಸ್ತ್ರಗಳು, ಶಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ನೌಗಾಮ್​​ನಲ್ಲಿ ಉಗ್ರರು (Terrorists) ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಆ ಪ್ರದೇಶವನ್ನು ಸುತ್ತುವರಿದಿದ್ದರು. ರಕ್ಷಣಾ ಸಿಬ್ಬಂದಿ ಪ್ರದೇಶವನ್ನು ಸುತ್ತುವರಿದ ಬೆನ್ನಲ್ಲೇ, ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಅದಕ್ಕೆ ಪ್ರತಿ ದಾಳಿ ನಡೆಸಿದ ಪೊಲೀಸರು ಮೂವರನ್ನು ಹತ್ಯೆ ಮಾಡಿದ್ದಾರೆ.   

ನಿನ್ನೆ ಜಮ್ಮು-ಕಾಶ್ಮೀರದ ಪುಲ್ವಾಮಾದ ಆವಂತಿಪೋರಾದಲ್ಲಿ ಕೂಡ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಅದರಲ್ಲಿ ಜೈಶ್​ ಇ ಮೊಹಮ್ಮದ್​ ಸಂಘಟನೆಯ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿತ್ತು. ನಿನ್ನೆ  ಚಾರ್ಸೂ ಗ್ರಾಮದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಶೋಧ ಕಾರ್ಯ ನಡೆಸುತ್ತಿರುವ ತಂಡವು ಶಂಕಿತ ಸ್ಥಳವನ್ನು ಸುತ್ತುವರೆದಿದ್ದರಿಂದ ಅಡಗಿಕೊಂಡಿದ್ದ ಭಯೋತ್ಪಾದಕನು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದನು. ಇದರಿಂದ ಎರಡೂ ಕಡೆಗಳಿಂದ ಗುಂಡಿನ ಚಕಮಕಿ ಶುರುವಾಗಿತ್ತು ಎಂದು ಕಾಶ್ಮೀರ ಐಜಿಪಿ ವಿಜಯ್​ಕುಮಾರ್ ತಿಳಿಸಿದ್ದರು.

ಇದನ್ನೂ ಓದಿ: The Kashmir Files: ಮೀಟುಗೋಲು; ಸುಟ್ಟ ಮನೆಗಳು, ಅರೆಬಿದ್ದ ಮನೆಗಳಿಗೆ ಆಗ ತಾನೇ ಸರ್ಕಾರ ಮರಮ್ಮತ್ತು ಮಾಡಿತ್ತು

Published On - 9:46 am, Wed, 16 March 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು