Jammu Encounter: ಜಮ್ಮು ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಎನ್​ಕೌಂಟರ್; ಮೂವರು ಉಗ್ರರ ಹತ್ಯೆ

ಟ್ರಕ್​ನಲ್ಲಿದ್ದ ಮೂವರೂ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಎನ್‌ಕೌಂಟರ್ ನಡೆದ ಸ್ಥಳದಿಂದ ಒಬ್ಬ ಭಯೋತ್ಪಾದಕನ ಶವವನ್ನು ಹೊರತೆಗೆಯಲಾಗಿದೆ.

Jammu Encounter: ಜಮ್ಮು ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಎನ್​ಕೌಂಟರ್; ಮೂವರು ಉಗ್ರರ ಹತ್ಯೆ
ಜಮ್ಮು ಕಾಶ್ಮೀರದಲ್ಲಿ ಎನ್​ಕೌಂಟರ್ ಕಾರ್ಯಾಚರಣೆ
Edited By:

Updated on: Dec 28, 2022 | 9:51 AM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಸಿದ್ರಾದಲ್ಲಿ ಅಡಗಿಕೊಂಡಿದ್ದ ಮೂವರು ಭಯೋತ್ಪಾದಕರನ್ನು ಇಂದು (ಬುಧವಾರ) ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಹತ್ಯೆ ಮಾಡಲಾಗಿದೆ. ಸೇನಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಾಗ ಟ್ರಕ್‌ನಲ್ಲಿ ಭಯೋತ್ಪಾದಕರು ಇದ್ದರು ಎಂದು ಜೆ-ಕೆ ಎಡಿಜಿಪಿ ಹೇಳಿದ್ದಾರೆ.

ಟ್ರಕ್​ನಲ್ಲಿದ್ದ ಮೂವರೂ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಎನ್‌ಕೌಂಟರ್ ನಡೆದ ಸ್ಥಳದಿಂದ ಒಬ್ಬ ಭಯೋತ್ಪಾದಕನ ಶವವನ್ನು ಹೊರತೆಗೆಯಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ 15 ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪೊಲೀಸರು ನಿಷ್ಕ್ರಿಯಗೊಳಿಸಿದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಸೇನಾ ಪಡೆ ಸಿಬ್ಬಂದಿ ಸಿದ್ರಾದಲ್ಲಿ ಪ್ರಮುಖ ಭಯೋತ್ಪಾದಕ ದಾಳಿಯನ್ನು ತಪ್ಪಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ಉಧಂಪುರನಲ್ಲಿ ತಪ್ಪಿದ ದುರಂತ; 15 ಕೆಜಿ ಸ್ಫೋಟಕ ನಿಷ್ಕ್ರಿಯಗೊಳಿಸಿದ ಪೊಲೀಸರು

ಬಸಂತ್‌ಗಢ ಪ್ರದೇಶದಲ್ಲಿ ಸಿಲಿಂಡರ್ ಆಕಾರದ ಐಇಡಿ, 300-400 ಗ್ರಾಂ ಆರ್‌ಡಿಎಕ್ಸ್, 7 7.62 ಎಂಎಂ ಕಾರ್ಟ್ರಿಡ್ಜ್‌ಗಳು ಮತ್ತು 5 ಡಿಟೋನೇಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಯ ಕೋಡೆಡ್ ಶೀಟ್ ಮತ್ತು ಲೆಟರ್ ಪ್ಯಾಡ್ ಪುಟವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಮತ್ತು ಶಂಕಿತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ 2 ನಕ್ಸಲರನ್ನು ಎನ್‌ಕೌಂಟರ್‌ ಮಾಡಿದ ಭದ್ರತಾ ಪಡೆ

ಉಗ್ರರಿದ್ದ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ. ಜಮ್ಮುವಿನ ಸಿದ್ರಾದಲ್ಲಿ ಟ್ರಕ್ ಅನ್ನು ತಡೆದು ನಿಲ್ಲಿಸಲಾಗಿದ್ದು, ಚಾಲಕ ಪರಾರಿಯಾಗಿದ್ದಾನೆ. ಟ್ರಕ್‌ನಲ್ಲಿ ಅಡಗಿ ಕುಳಿತಿದ್ದ ಉಗ್ರರು ತಪಾಸಣೆ ನಡೆಸಿದಾಗ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ. ಅವರ ಮೇಲೆ ಪ್ರತೀಕಾರದ ಗುಂಡಿನ ದಾಳಿ ನಡೆಸಿ, ಆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ