AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ

ವಾಹನಗಳು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವಂತೆ  ಈ ಕಾರಿಡಾರ್​​ನ್ನು ವಿನ್ಯಾಸಗೊಳಿಸಲಾಗಿದೆ. ವಾಹನ ಸವಾರರ ಸುರಕ್ಷತೆಗಾಗಿ ಮೇಲ್ಸೇತುವೆ ಮೇಲೆ ಕ್ರ್ಯಾಶ್​ ಬ್ಯಾರಿಯರ್ ನಿರ್ಮಿಸಲಾಗಿದೆ.

ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ
ಹೈದರಾಬಾದ್-ಬೆಂಗಳೂರು ಹೈವೇ
TV9 Web
| Edited By: |

Updated on:Nov 22, 2021 | 6:19 PM

Share

ಬೆಂಗಳೂರಿನಿಂದ ಹೈದರಾಬಾದ್​​ಗೆ ರಾಷ್ಟ್ರೀಯ ಹೆದ್ದಾರಿ 44(ಎನ್​ಎಚ್​ 44)ಮೂಲಕ  ಪ್ರಯಾಣ ಇನ್ನಷ್ಟು ಸುಗಮ ಮತ್ತು ವೇಗಗೊಳ್ಳಲಿದೆ. ಶಂಶಾಬಾದ್​ ಮಾರ್ಗದಲ್ಲಿ ಈ ರಸ್ತೆ ಸುಧಾರಣೆಯಾಗುತ್ತಿದ್ದು, ಸುಮಾರು 280 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಕಾರಿಡಾರ್​ ಮತ್ತು ಮೂರು ಅಂಡರ್​ಪಾಸ್​​ಗಳನ್ನು ನಿರ್ಮಾಣ ಮಾಡಲಾಗುತ್ತಿದೆ.​ ಶಂಶಾಬಾದ್​​ ಮಾರ್ಗದಲ್ಲಿ 1.6 ಕಿಮೀ ದೂರದವರೆಗೆ ಎವೆಲೇಟೆಡ್​ ಕಾರಿಡಾರ್​ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದು ರಸ್ತೆಗಳು ಮತ್ತು ಕಟ್ಟಡಗಳ ಡಿಪಾರ್ಟ್​ಮೆಂಟ್​ ಅಧಿಕಾರಿಗಳು ತಿಳಿಸಿದ್ದಾರೆ.  ಅಂದಹಾಗೆ ಇದು 6 ಲೇನ್​​ಗಳ, ನಗರದಲ್ಲೇ ಅತ್ಯಂತ ಉದ್ದವಾದ ಮೇಲ್ಸೇತುವೆ ಎನಿಸಿದೆ. 150 ಮೀಟರ್​ಗಳಷ್ಟು ಕಾರ್ಯ ಮಾತ್ರ ಬಾಕಿ ಇದೆ ಎಂದೂ ಹೇಳಲಾಗಿದೆ.   

ವಾಹನಗಳು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವಂತೆ  ಈ ಕಾರಿಡಾರ್​​ನ್ನು ವಿನ್ಯಾಸಗೊಳಿಸಲಾಗಿದೆ. ವಾಹನ ಸವಾರರ ಸುರಕ್ಷತೆಗಾಗಿ ಮೇಲ್ಸೇತುವೆ ಮೇಲೆ ಕ್ರ್ಯಾಶ್​ ಬ್ಯಾರಿಯರ್​ (ಅಪಘಾತ ತಡೆ ಬೇಲಿಗಳು) ನಿರ್ಮಿಸಲಾಗಿದೆ. ಈ ಯೋಜನೆ 2020ರಲ್ಲಿಯೇ ಮುಗಿಯಬೇಕಾಗಿತ್ತು. ಆದರೆ ಭೂ ಸ್ವಾಧೀನ, ಮಾರ್ಗದುದ್ದಕ್ಕೂ ಇರುವ ವಿದ್ಯುತ್​ ಕಂಬಗಳ ತೆರವಿಗೆ ಒಪ್ಪಿಗೆ ವಿಳಂಬ ಮತ್ತು ಸಾಂಕ್ರಾಮಿಕ ರೋಗದಿಂದಾಗಿ ತಡವಾಯಿತು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಎರಡು ವರ್ಷದ ಮಗಳ ಚಿಕಿತ್ಸೆಗಾಗಿ ತಮ್ಮ ಉದ್ಯೋಗಿಗೆ ₹16 ಕೋಟಿ ಸಹಾಯ ನೀಡಿದ ಕೋಲ್ ಇಂಡಿಯಾ

Published On - 6:18 pm, Mon, 22 November 21

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ