AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ

ವಾಹನಗಳು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವಂತೆ  ಈ ಕಾರಿಡಾರ್​​ನ್ನು ವಿನ್ಯಾಸಗೊಳಿಸಲಾಗಿದೆ. ವಾಹನ ಸವಾರರ ಸುರಕ್ಷತೆಗಾಗಿ ಮೇಲ್ಸೇತುವೆ ಮೇಲೆ ಕ್ರ್ಯಾಶ್​ ಬ್ಯಾರಿಯರ್ ನಿರ್ಮಿಸಲಾಗಿದೆ.

ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ
ಹೈದರಾಬಾದ್-ಬೆಂಗಳೂರು ಹೈವೇ
TV9 Web
| Edited By: |

Updated on:Nov 22, 2021 | 6:19 PM

Share

ಬೆಂಗಳೂರಿನಿಂದ ಹೈದರಾಬಾದ್​​ಗೆ ರಾಷ್ಟ್ರೀಯ ಹೆದ್ದಾರಿ 44(ಎನ್​ಎಚ್​ 44)ಮೂಲಕ  ಪ್ರಯಾಣ ಇನ್ನಷ್ಟು ಸುಗಮ ಮತ್ತು ವೇಗಗೊಳ್ಳಲಿದೆ. ಶಂಶಾಬಾದ್​ ಮಾರ್ಗದಲ್ಲಿ ಈ ರಸ್ತೆ ಸುಧಾರಣೆಯಾಗುತ್ತಿದ್ದು, ಸುಮಾರು 280 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಕಾರಿಡಾರ್​ ಮತ್ತು ಮೂರು ಅಂಡರ್​ಪಾಸ್​​ಗಳನ್ನು ನಿರ್ಮಾಣ ಮಾಡಲಾಗುತ್ತಿದೆ.​ ಶಂಶಾಬಾದ್​​ ಮಾರ್ಗದಲ್ಲಿ 1.6 ಕಿಮೀ ದೂರದವರೆಗೆ ಎವೆಲೇಟೆಡ್​ ಕಾರಿಡಾರ್​ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದು ರಸ್ತೆಗಳು ಮತ್ತು ಕಟ್ಟಡಗಳ ಡಿಪಾರ್ಟ್​ಮೆಂಟ್​ ಅಧಿಕಾರಿಗಳು ತಿಳಿಸಿದ್ದಾರೆ.  ಅಂದಹಾಗೆ ಇದು 6 ಲೇನ್​​ಗಳ, ನಗರದಲ್ಲೇ ಅತ್ಯಂತ ಉದ್ದವಾದ ಮೇಲ್ಸೇತುವೆ ಎನಿಸಿದೆ. 150 ಮೀಟರ್​ಗಳಷ್ಟು ಕಾರ್ಯ ಮಾತ್ರ ಬಾಕಿ ಇದೆ ಎಂದೂ ಹೇಳಲಾಗಿದೆ.   

ವಾಹನಗಳು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವಂತೆ  ಈ ಕಾರಿಡಾರ್​​ನ್ನು ವಿನ್ಯಾಸಗೊಳಿಸಲಾಗಿದೆ. ವಾಹನ ಸವಾರರ ಸುರಕ್ಷತೆಗಾಗಿ ಮೇಲ್ಸೇತುವೆ ಮೇಲೆ ಕ್ರ್ಯಾಶ್​ ಬ್ಯಾರಿಯರ್​ (ಅಪಘಾತ ತಡೆ ಬೇಲಿಗಳು) ನಿರ್ಮಿಸಲಾಗಿದೆ. ಈ ಯೋಜನೆ 2020ರಲ್ಲಿಯೇ ಮುಗಿಯಬೇಕಾಗಿತ್ತು. ಆದರೆ ಭೂ ಸ್ವಾಧೀನ, ಮಾರ್ಗದುದ್ದಕ್ಕೂ ಇರುವ ವಿದ್ಯುತ್​ ಕಂಬಗಳ ತೆರವಿಗೆ ಒಪ್ಪಿಗೆ ವಿಳಂಬ ಮತ್ತು ಸಾಂಕ್ರಾಮಿಕ ರೋಗದಿಂದಾಗಿ ತಡವಾಯಿತು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಎರಡು ವರ್ಷದ ಮಗಳ ಚಿಕಿತ್ಸೆಗಾಗಿ ತಮ್ಮ ಉದ್ಯೋಗಿಗೆ ₹16 ಕೋಟಿ ಸಹಾಯ ನೀಡಿದ ಕೋಲ್ ಇಂಡಿಯಾ

Published On - 6:18 pm, Mon, 22 November 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ