AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ

ವಾಹನಗಳು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವಂತೆ  ಈ ಕಾರಿಡಾರ್​​ನ್ನು ವಿನ್ಯಾಸಗೊಳಿಸಲಾಗಿದೆ. ವಾಹನ ಸವಾರರ ಸುರಕ್ಷತೆಗಾಗಿ ಮೇಲ್ಸೇತುವೆ ಮೇಲೆ ಕ್ರ್ಯಾಶ್​ ಬ್ಯಾರಿಯರ್ ನಿರ್ಮಿಸಲಾಗಿದೆ.

ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ
ಹೈದರಾಬಾದ್-ಬೆಂಗಳೂರು ಹೈವೇ
TV9 Web
| Updated By: Lakshmi Hegde|

Updated on:Nov 22, 2021 | 6:19 PM

Share

ಬೆಂಗಳೂರಿನಿಂದ ಹೈದರಾಬಾದ್​​ಗೆ ರಾಷ್ಟ್ರೀಯ ಹೆದ್ದಾರಿ 44(ಎನ್​ಎಚ್​ 44)ಮೂಲಕ  ಪ್ರಯಾಣ ಇನ್ನಷ್ಟು ಸುಗಮ ಮತ್ತು ವೇಗಗೊಳ್ಳಲಿದೆ. ಶಂಶಾಬಾದ್​ ಮಾರ್ಗದಲ್ಲಿ ಈ ರಸ್ತೆ ಸುಧಾರಣೆಯಾಗುತ್ತಿದ್ದು, ಸುಮಾರು 280 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಕಾರಿಡಾರ್​ ಮತ್ತು ಮೂರು ಅಂಡರ್​ಪಾಸ್​​ಗಳನ್ನು ನಿರ್ಮಾಣ ಮಾಡಲಾಗುತ್ತಿದೆ.​ ಶಂಶಾಬಾದ್​​ ಮಾರ್ಗದಲ್ಲಿ 1.6 ಕಿಮೀ ದೂರದವರೆಗೆ ಎವೆಲೇಟೆಡ್​ ಕಾರಿಡಾರ್​ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದು ರಸ್ತೆಗಳು ಮತ್ತು ಕಟ್ಟಡಗಳ ಡಿಪಾರ್ಟ್​ಮೆಂಟ್​ ಅಧಿಕಾರಿಗಳು ತಿಳಿಸಿದ್ದಾರೆ.  ಅಂದಹಾಗೆ ಇದು 6 ಲೇನ್​​ಗಳ, ನಗರದಲ್ಲೇ ಅತ್ಯಂತ ಉದ್ದವಾದ ಮೇಲ್ಸೇತುವೆ ಎನಿಸಿದೆ. 150 ಮೀಟರ್​ಗಳಷ್ಟು ಕಾರ್ಯ ಮಾತ್ರ ಬಾಕಿ ಇದೆ ಎಂದೂ ಹೇಳಲಾಗಿದೆ.   

ವಾಹನಗಳು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವಂತೆ  ಈ ಕಾರಿಡಾರ್​​ನ್ನು ವಿನ್ಯಾಸಗೊಳಿಸಲಾಗಿದೆ. ವಾಹನ ಸವಾರರ ಸುರಕ್ಷತೆಗಾಗಿ ಮೇಲ್ಸೇತುವೆ ಮೇಲೆ ಕ್ರ್ಯಾಶ್​ ಬ್ಯಾರಿಯರ್​ (ಅಪಘಾತ ತಡೆ ಬೇಲಿಗಳು) ನಿರ್ಮಿಸಲಾಗಿದೆ. ಈ ಯೋಜನೆ 2020ರಲ್ಲಿಯೇ ಮುಗಿಯಬೇಕಾಗಿತ್ತು. ಆದರೆ ಭೂ ಸ್ವಾಧೀನ, ಮಾರ್ಗದುದ್ದಕ್ಕೂ ಇರುವ ವಿದ್ಯುತ್​ ಕಂಬಗಳ ತೆರವಿಗೆ ಒಪ್ಪಿಗೆ ವಿಳಂಬ ಮತ್ತು ಸಾಂಕ್ರಾಮಿಕ ರೋಗದಿಂದಾಗಿ ತಡವಾಯಿತು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಎರಡು ವರ್ಷದ ಮಗಳ ಚಿಕಿತ್ಸೆಗಾಗಿ ತಮ್ಮ ಉದ್ಯೋಗಿಗೆ ₹16 ಕೋಟಿ ಸಹಾಯ ನೀಡಿದ ಕೋಲ್ ಇಂಡಿಯಾ

Published On - 6:18 pm, Mon, 22 November 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?