AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ

ವಾಹನಗಳು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವಂತೆ  ಈ ಕಾರಿಡಾರ್​​ನ್ನು ವಿನ್ಯಾಸಗೊಳಿಸಲಾಗಿದೆ. ವಾಹನ ಸವಾರರ ಸುರಕ್ಷತೆಗಾಗಿ ಮೇಲ್ಸೇತುವೆ ಮೇಲೆ ಕ್ರ್ಯಾಶ್​ ಬ್ಯಾರಿಯರ್ ನಿರ್ಮಿಸಲಾಗಿದೆ.

ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ
ಹೈದರಾಬಾದ್-ಬೆಂಗಳೂರು ಹೈವೇ
TV9 Web
| Edited By: |

Updated on:Nov 22, 2021 | 6:19 PM

Share

ಬೆಂಗಳೂರಿನಿಂದ ಹೈದರಾಬಾದ್​​ಗೆ ರಾಷ್ಟ್ರೀಯ ಹೆದ್ದಾರಿ 44(ಎನ್​ಎಚ್​ 44)ಮೂಲಕ  ಪ್ರಯಾಣ ಇನ್ನಷ್ಟು ಸುಗಮ ಮತ್ತು ವೇಗಗೊಳ್ಳಲಿದೆ. ಶಂಶಾಬಾದ್​ ಮಾರ್ಗದಲ್ಲಿ ಈ ರಸ್ತೆ ಸುಧಾರಣೆಯಾಗುತ್ತಿದ್ದು, ಸುಮಾರು 280 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಕಾರಿಡಾರ್​ ಮತ್ತು ಮೂರು ಅಂಡರ್​ಪಾಸ್​​ಗಳನ್ನು ನಿರ್ಮಾಣ ಮಾಡಲಾಗುತ್ತಿದೆ.​ ಶಂಶಾಬಾದ್​​ ಮಾರ್ಗದಲ್ಲಿ 1.6 ಕಿಮೀ ದೂರದವರೆಗೆ ಎವೆಲೇಟೆಡ್​ ಕಾರಿಡಾರ್​ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದು ರಸ್ತೆಗಳು ಮತ್ತು ಕಟ್ಟಡಗಳ ಡಿಪಾರ್ಟ್​ಮೆಂಟ್​ ಅಧಿಕಾರಿಗಳು ತಿಳಿಸಿದ್ದಾರೆ.  ಅಂದಹಾಗೆ ಇದು 6 ಲೇನ್​​ಗಳ, ನಗರದಲ್ಲೇ ಅತ್ಯಂತ ಉದ್ದವಾದ ಮೇಲ್ಸೇತುವೆ ಎನಿಸಿದೆ. 150 ಮೀಟರ್​ಗಳಷ್ಟು ಕಾರ್ಯ ಮಾತ್ರ ಬಾಕಿ ಇದೆ ಎಂದೂ ಹೇಳಲಾಗಿದೆ.   

ವಾಹನಗಳು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವಂತೆ  ಈ ಕಾರಿಡಾರ್​​ನ್ನು ವಿನ್ಯಾಸಗೊಳಿಸಲಾಗಿದೆ. ವಾಹನ ಸವಾರರ ಸುರಕ್ಷತೆಗಾಗಿ ಮೇಲ್ಸೇತುವೆ ಮೇಲೆ ಕ್ರ್ಯಾಶ್​ ಬ್ಯಾರಿಯರ್​ (ಅಪಘಾತ ತಡೆ ಬೇಲಿಗಳು) ನಿರ್ಮಿಸಲಾಗಿದೆ. ಈ ಯೋಜನೆ 2020ರಲ್ಲಿಯೇ ಮುಗಿಯಬೇಕಾಗಿತ್ತು. ಆದರೆ ಭೂ ಸ್ವಾಧೀನ, ಮಾರ್ಗದುದ್ದಕ್ಕೂ ಇರುವ ವಿದ್ಯುತ್​ ಕಂಬಗಳ ತೆರವಿಗೆ ಒಪ್ಪಿಗೆ ವಿಳಂಬ ಮತ್ತು ಸಾಂಕ್ರಾಮಿಕ ರೋಗದಿಂದಾಗಿ ತಡವಾಯಿತು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಎರಡು ವರ್ಷದ ಮಗಳ ಚಿಕಿತ್ಸೆಗಾಗಿ ತಮ್ಮ ಉದ್ಯೋಗಿಗೆ ₹16 ಕೋಟಿ ಸಹಾಯ ನೀಡಿದ ಕೋಲ್ ಇಂಡಿಯಾ

Published On - 6:18 pm, Mon, 22 November 21

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ