AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಾಜ್​ಗೆ ಅಡ್ಡಿಪಡಿಸಿ, ಪ್ರತಿಭಟನೆ ನಡೆಸಿದ 30 ಜನರನ್ನು ವಶಕ್ಕೆ ಪಡೆದ ಪೊಲೀಸರು

ಸತತ ಮೂರು ವಾರಗಳಿಂದಲೂ ಗುರ್​ಗಾಂವ್​​ನ ಈ ಪ್ರದೇಶದಲ್ಲಿ ಮುಸ್ಲಿಮರ ನಮಾಜ್​​ಗೆ ಅಡ್ಡಿಪಡಿಸಲಾಗುತ್ತಿದೆ. ಕಳೆದ ವಾರವಂತೂ 12-A ಸೆಕ್ಟರ್​​ನಲ್ಲಿ ಮುಸ್ಲಿಮರು ತಮ್ಮದೇ ಖಾಸಗಿ ಜಾಗದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು.

ನಮಾಜ್​ಗೆ ಅಡ್ಡಿಪಡಿಸಿ, ಪ್ರತಿಭಟನೆ ನಡೆಸಿದ 30 ಜನರನ್ನು ವಶಕ್ಕೆ ಪಡೆದ ಪೊಲೀಸರು
ಸೆಕ್ಟರ್​ 12 ಎಯಲ್ಲಿ ಪೊಲೀಸ್​ ಬಿಗಿ ಭದ್ರತೆ
TV9 Web
| Edited By: |

Updated on: Oct 29, 2021 | 5:57 PM

Share

ಗುರ್​ಗಾಂವ್​​ನ ತೆರೆದ ಪ್ರದೇಶದಲ್ಲಿ ಮುಸ್ಲಿಮರು ಇಂದು ನಮಾಜ್ ಸಲ್ಲಿಸುವ ವೇಳೆ ಮತ್ತೆ ಕೆಲವು ಹಿಂದೂ ಸಂಘಟನೆಗಳ ಜನರು ಪ್ರತಿಭಟನೆ ನಡೆಸಿದ್ದಾರೆ. ಮುಸ್ಲಿಮರ ನಮಾಜ್​ (ಪ್ರಾರ್ಥನೆ) ವಿರುದ್ಧವೇ ಘೋಷಣೆಗಳನ್ನು ಕೂಗಿದ್ದಲ್ಲದೆ, ‘ಗುರ್​ಗಾಂವ್ ಆಡಳಿತವೇ, ನಿನ್ನೆ ನಿದ್ದೆಯಿಂದ ಎದ್ದೇಳು’ ಎಂಬ ಪೋಸ್ಟರ್​ಗಳನ್ನು ಹಿಡಿದುಕೊಂಡಿದ್ದರು. ಗುರ್​ಗಾಂವ್​​ನ ಸೆಕ್ಟರ್​ 12-A ಪ್ರದೇಶದಲ್ಲಿ ಪ್ರತಿಭಟನೆ ನಡೆದಿದ್ದು, ಸುಮಾರು 30 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೇ, ಸ್ಥಳೀಯವಾಗಿ ಪೊಲೀಸ್ ಬಿಗಿ ಭದ್ರತೆಯನ್ನೂ ಕಲ್ಪಿಸಲಾಗಿದೆ. ಗುರ್​ಗಾಂವ್​​ನ ಸೆಕ್ಟರ್​ 12-A ಮತ್ತು ಸೆಕ್ಟರ್​ 47ರಲ್ಲಿ ಈ ತಿಂಗಳ ಪ್ರಾರಂಭದಲ್ಲಿ ತೀವ್ರತರ ಪ್ರತಿಭಟನೆಗಳು ನಡೆದಿದ್ದವು. ಅಷ್ಟರಮಟ್ಟಿಗಿನ ಹಾನಿ ಆಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಬಾರಿ ಪೊಲೀಸರು ಶೀಘ್ರದಲ್ಲೇ ಬಿಗಿ ಭದ್ರತೆ ಕಲ್ಪಿಸಿದ್ದಾರೆ.  

ಇಲ್ಲೀಗ ಎಲ್ಲವೂ ಶಾಂತಿಯುತವಾಗಿದೆ. ಇಂದು ಮುಸ್ಲಿಮರ ನಮಾಜ್​ಗೆ ಅಡ್ಡಿಪಡಿಸಲು ಪ್ರತಿಭಟನೆ ನಡೆಸಿದವರನ್ನು ನಾವು ವಶಕ್ಕೆ ಪಡೆದಿದ್ದೇವೆ. ಇಂದು ಪ್ರತಿಭಟನೆ ನಡೆದವರ ಜತೆ ನಾವು ಕಳೆದ ಕೆಲವು ವಾರಗಳಿಂದಲೂ ಮಾತುಕತೆ ನಡೆಸುತ್ತ, ಗಲಾಟೆ ಮಾಡದಂತೆ ತಿಳಿವಳಿಕೆ ಹೇಳುತ್ತಲೇ ಬಂದಿದ್ದೇವೆ. ಆದರೆ ಇವತ್ತು ಕೂಡ ಅವರು ಬಯಲಿಗೆ ಇಳಿದರು. ಹಾಗಾಗಿ ತ್ವರಿತ ಕ್ರಮ ಕೈಗೊಂಡಿದ್ದೇವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಸುಮಾರು 37 ಗುರುತಿಸಲಾದ ಸ್ಥಳಗಳಲ್ಲಿ ಜನರು ನಮಾಜ್​ ಮಾಡಿದ್ದಾರೆ. ಮುಂದಿನ ದಿನದಲ್ಲಿ ಕೂಡ ಅವರಿಗೆ ಎಲ್ಲ ರೀತಿಯ ರಕ್ಷಣೆ ನೀಡಲಾಗುವುದು ಎಂದು ತಿಳಿಸಿದ್ದಾರೆ.  ಇಂದು ನಡೆದ ಪ್ರತಿಭಟನೆಯ ವಿಡಿಯೋಗಳೂ ವೈರಲ್​ ಆಗಿದೆ. ಇವರೆಲ್ಲ ನಮಾಜ್​ ಮಾಡುವ ಸ್ಥಳಕ್ಕೆ ಹೋಗಿ ನಿಲ್ಲಿಸಿ, ನಿಲ್ಲಿಸಿ ಎಂದು ಕೂಗಿದ್ದಾರೆ.

ಹೀಗೆ ಸತತ ಮೂರು ವಾರಗಳಿಂದಲೂ ಗುರ್​ಗಾಂವ್​​ನ ಈ ಪ್ರದೇಶದಲ್ಲಿ ಮುಸ್ಲಿಮರ ನಮಾಜ್​​ಗೆ ಅಡ್ಡಿಪಡಿಸಲಾಗುತ್ತಿದೆ. ಕಳೆದ ವಾರವಂತೂ 12-A ಸೆಕ್ಟರ್​​ನಲ್ಲಿ ಮುಸ್ಲಿಮರು ತಮ್ಮದೇ ಖಾಸಗಿ ಜಾಗದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಆಗಲೂ ಕೂಡ ಕೆಲವರು ಅಲ್ಲಿ ಹೋಗಿ ಜೈ ಶ್ರೀರಾಮ್​ ಎಂದು ಕೂಗಿದ್ದರು.  ಗುರ್​ಗಾಂವ್​ನ ಸೆಕ್ಟರ್​ 47 ಮತ್ತು 12-ಎ ಗಳಲ್ಲಿ ಹಿಂದೂ-ಮುಸ್ಲಿಂ ಪ್ರಾರ್ಥನೆ ಜಾಗದ ವಿವಾದ ಈಗಿನಿದಲ್ಲ. 2018ರಲ್ಲಿಯೂ ಹೀಗೆ ಪ್ರತಿಭಟನೆ ನಡೆದಿತ್ತು. ಅದಾದ ಬಳಿಕ ಪ್ರತ್ಯೇಕವಾಗಿಯೇ ಸ್ಥಳಗಳನ್ನು ಗುರುತಿಸಲಾಗಿತ್ತು.  ಅಷ್ಟಾದರೂ ಕೂಡ ಈಗ ಸತತ ಮೂರು ವಾರಗಳಿಂದ ಮತ್ತೆ ಪ್ರತಿಭಟನೆ, ನಮಾಜ್​​ಗೆ ಅಡ್ಡಿಪಡಿಸುವ ಕೆಲಸಗಳು ನಡೆಯುತ್ತಿವೆ. ಈ ಮಧ್ಯೆ ನಿಮ್ಮ ಪ್ರಾರ್ಥನೆಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಜಿ20 ಶೃಂಗಸಭೆ; ರೋಮ್​ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಸಾವಿಗೆ ಯಾವ ವಯಸಾದರೇನು? ಅಕಾಲಿಕ ಮರಣ ಹೊಂದಿದ ಕನ್ನಡದ ಸಿನಿತಾರೆಯರು ಇವರು

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?