AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar News: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ ಶೂಟ್ ಮಾಡಿ ಹತ್ಯೆ; ಕಾರಣ ಇಲ್ಲಿದೆ

2022ರಲ್ಲಿ 10ಕ್ಕೂ ಹೆಚ್ಚು ಜನರ ಮೇಲೆ ನರಭಕ್ಷಕ ನಾಯಿಗಳು ದಾಳಿ ನಡೆಸಿದ್ದವು. ಈ ನಾಯಿಗಳ ಹಾವಳಿಯನ್ನು ತಡೆಯುವ ಪ್ರಯತ್ನದಲ್ಲಿ ಜಿಲ್ಲಾಡಳಿತವು ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಕೊಲ್ಲಲು ಆದೇಶಿಸಿತ್ತು.

Bihar News: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ ಶೂಟ್ ಮಾಡಿ ಹತ್ಯೆ; ಕಾರಣ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 05, 2023 | 4:27 PM

Share

ಬೇಗುಸರಾಯ್: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ (Stray Dogs) ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಬಿಹಾರದ (Bihar) ಬೇಗುಸರಾಯ್ ಜಿಲ್ಲೆಯಲ್ಲಿ ಶೂಟರ್‌ಗಳ ತಂಡವು ಸುಮಾರು 30 ಬೀದಿ ನಾಯಿಗಳನ್ನು ಹೊಡೆದುರುಳಿಸಿದೆ. ಈ ಜಿಲ್ಲೆಯಲ್ಲಿ ನಾಯಿಗಳ ಹಾವಳಿಯನ್ನು ಕೊನೆಗೊಳಿಸಲು ಪಾಟ್ನಾದಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಮತ್ತು ಪರಿಸರ ಇಲಾಖೆಯಿಂದ ತಂಡವನ್ನು ರಚಿಸಲಾಗಿದೆ.

ಈ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದ್ದು, ಬೇಗುಸರಾಯ್ ಜಿಲ್ಲೆಯಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪಾಟ್ನಾದಿಂದ ಆಗಮಿಸಿದ ವಿಶೇಷ ತಂಡ ಮಂಗಳವಾರ 16 ಬೀದಿನಾಯಿಗಳು ಮತ್ತು ಬುಧವಾರ 14 ಬೀದಿ ನಾಯಿಗಳನ್ನು ಶೂಟ್ ಮಾಡಿ ಕೊಂದಿದೆ. ಮನುಷ್ಯರ ಮೇಲೆ ಪದೇಪದೆ ದಾಳಿ ನಡೆಸುತ್ತಿದ್ದ ಬೀದಿ ನಾಯಿಗಳ ಕಾಟವನ್ನು ನಿಲ್ಲಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Street Dog Attack: 8 ವರ್ಷದ ಬಾಲಕಿ ಹಾಗೂ ತಂದೆ ಮೇಲೆ ಬೀದಿ ನಾಯಿ ದಾಳಿ, ಬಾಲಕಿ ಮುಖ ಮತ್ತು ಕುತ್ತಿಗೆ ಭಾಗಕ್ಕೆ ಹೊಲಿಗೆ

ಈ ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಪತ್ತೆಹಚ್ಚಲು ಮತ್ತು ಕೊಲ್ಲಲು ಹಲವಾರು ಸ್ಥಳೀಯರು ಶೂಟರ್​ಗಳಿಗೆ ಸಹಾಯ ಮಾಡಿದರು. ಈ ನಾಯಿಗಳು ಗ್ರಾಮದಲ್ಲಿ ಸಾಕಷ್ಟು ಜನರನ್ನು ಕಚ್ಚಿ ಸಾಯಿಸಿದ್ದವು. 2022ರಲ್ಲಿ 10ಕ್ಕೂ ಹೆಚ್ಚು ಜನರ ಮೇಲೆ ನರಭಕ್ಷಕ ನಾಯಿಗಳು ದಾಳಿ ನಡೆಸಿದ್ದವು. ಈ ನಾಯಿಗಳ ಹಾವಳಿಯನ್ನು ತಡೆಯುವ ಪ್ರಯತ್ನದಲ್ಲಿ ಜಿಲ್ಲಾಡಳಿತವು ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಕೊಲ್ಲಲು ಆದೇಶಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ