AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 300 ರೂಪಾಯಿ ಟಿಕೆಟ್ ಬಿಡುಗಡೆ; ದೈನಂದಿನ ಹುಂಡಿ ಆದಾಯದಲ್ಲಿಯೂ ಹೆಚ್ಚಳ

ಟಿಟಿಡಿ‌ ವೆಬ್ ಸೈಟ್‌ ಮೂಲಕ‌ ಭಕ್ತರು ಟಿಕೆಟ್‌ ಬುಕ್ ಮಾಡಲು ಕೂಡ‌ ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ಕೊವಿಡ್ ಎರಡನೇ ಅಲೆಯ ನಂತರ ತಿರುಪತಿಗೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ.

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 300 ರೂಪಾಯಿ ಟಿಕೆಟ್ ಬಿಡುಗಡೆ; ದೈನಂದಿನ ಹುಂಡಿ ಆದಾಯದಲ್ಲಿಯೂ ಹೆಚ್ಚಳ
ತಿರುಪತಿ ದೇವಾಲಯ
TV9 Web
| Edited By: |

Updated on: Aug 24, 2021 | 1:29 PM

Share

ತಿರುಪತಿ: ಆಂಧ್ರದ‌ ತಿರುಮಲದಲ್ಲಿ 300 ರೂಪಾಯಿಗೆ ದೇವರ ದರ್ಶನ‌ದ ಟಿಕೆಟ್ ಬಿಡುಗಡೆ ಮಾಡಲಾಗಿದೆ. ದಿನಕ್ಕೆ 8 ಟಿಕೆಟ್​ಗಳಂತೆ ಸಾರ್ವಜನಿಕರಿಗೆ ಸೆಪ್ಟೆಂಬರ್ ತಿಂಗಳ ಮುಂಗಡ ಟಿಕೆಟ್ ಬಿಡುಗಡೆ ಮಾಡಲಾಗಿದೆ. ಅಲ್ಲದೆ ಟಿಟಿಡಿ‌ ವೆಬ್ ಸೈಟ್‌ ಮೂಲಕ‌ ಭಕ್ತರು ಟಿಕೆಟ್‌ ಬುಕ್ ಮಾಡಲು ಕೂಡ‌ ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ಕೊವಿಡ್ ಎರಡನೇ ಅಲೆಯ ನಂತರ ತಿರುಪತಿಗೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ.

ಕೊರೊನಾ ಎರಡನೇ ಅಲೆಯ ಲಾಕ್​ಡೌನ್​ ನಂತರದಲ್ಲಿ ದೇವಾಲಯದ ಪ್ರವೇಶಕ್ಕೆ ಅವಕಾಶ ದೊರೆತಿದ್ದು, ಭಕ್ತರು ದೇವರ ದರ್ಶನಕ್ಕೆ ಮುಂದಾಗಿದ್ದಾರೆ. ಇದರ ಅನುಸಾರ ಆಂಧ್ರ ಪ್ರದೇಶದಲ್ಲಿನ ತಿರುಮಲದ‌ ಬಾಲಾಜಿ ದೇವಾಲಯವೂ ಕೂಡ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಆ ಪ್ರಕಾರ ಕಳೆದ‌ 24 ಗಂಟೆಗಳಲ್ಲಿ ತಿರುಮಲದ‌ ಬಾಲಾಜಿ ದೇವಾಲಯದ ಹುಂಡಿಯಲ್ಲಿ ಅಧಿಕ ಪ್ರಮಾಣದ ಆದಾಯ‌ ಸಂಗ್ರಹವಾಗಿದೆ. ನಿನ್ನೆ (ಆಗಸ್ಟ್, 23) 2.32 ಕೋಟಿ ರೂಪಾಯಿ ಹುಂಡಿಗೆ‌ ಆದಾಯ ಸಂಗ್ರಹವಾಗಿದ್ದು, 22076 ಭಕ್ತರು ಬಾಲಾಜಿಯ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೆ 11250 ಭಕ್ತರು ತಿರುಮಲದ‌ ಬಾಲಾಜಿ ದೇವಾಲಯದಲ್ಲಿ ತಲೆಕೂದಲು ಸಮರ್ಪಣೆ ಮಾಡಿದ್ದಾರೆ.

ಕಳೆದ ಬಾರಿ ಅಂದರೆ ಕೊರೊನಾ ಮೊದಲನೇ ಅಲೆಯ ಸಂದರ್ಭದಲ್ಲಿನ ಲಾಕ್​ಡೌನ್​ಗೂ ಮುನ್ನ ತಿರುಮಲದ ಬಾಲಾಜಿ ದೇವಸ್ಥಾನದಲ್ಲಿ 800 ಕೋಟಿ ರೂಪಾಯಿ ಹುಂಡಿ ಹಣ ಸಂಗ್ರಹವಾಗುತ್ತಿತ್ತು. ನಂತರ ಅಂದರೆ ಮೊದಲ ಕೊರೊನಾ ಅಲೆಯ ಅನ್​ಲಾಕ್​ ಬಳಿಕ (ಜೂನ್ 2020 ರಲ್ಲಿ )ಕೊವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಹಲವಾರು ನಿರ್ಬಂಧಗಳೊಂದಿಗೆ ಈ ದೇವಾಲಯವನ್ನು ತೆರೆಯಲಾಯಿತು. ಅದರಂತೆ ಟಿಕೆಟ್ ಸಂಗ್ರಹಣೆ, ಪ್ರಸಾದಗಳ ಮಾರಾಟ, ವಸತಿ ಸೌಕರ್ಯಗಳು ಮತ್ತು ಹುಂಡಿ ಸಂಗ್ರಹಗಳು ಸೇರಿದಂತೆ ಒಟ್ಟಾರೆ ಆದಾಯದ ಮೇಲೆ ಪರಿಣಾಮ ಬೀರಿತು. ಆ ಪ್ರಕಾರ 100-150 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ.

ಕೊವಿಡ್​ಗೂ ಮುನ್ನ60,000ದಿಂದ ಒಂದು ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದರು ಮತ್ತು ಸರಾಸರಿ ಹುಂಡಿ ಸಂಗ್ರಹವು ಪ್ರತಿದಿನ ಸುಮಾರು 3.5 ರಿಂದ 5 ಕೋಟಿ ರೂಪಾಯಿವರೆಗೆ ಸಂಗ್ರಹವಾಗುತ್ತಿತ್ತು. ಮೊದಲನೇ ಅಲೆಯ ಲಾಕ್​ಡೌನ್​ ಮುಗಿದ ನಂತರ ಹಂತ ಹಂತವಾಗಿ ಹುಂಡಿ ಆದಾಯ ಹೆಚ್ಚಾಗಿದ್ದು, ಜೂನ್‌ನಲ್ಲಿ ದೇವಾಲಯಕ್ಕೆ 1.1 ಕೋಟಿ ರೂಪಾಯಿ, ಜುಲೈ 16.69 ಕೋಟಿ ರೂಪಾಯಿ, ಆಗಸ್ಟ್ 18.43 ಕೋಟಿ ರೂಪಾಯಿ, ಸೆಪ್ಟೆಂಬರ್ 32.04 ಕೋಟಿ ರೂಪಾಯಿ, ಅಕ್ಟೋಬರ್ 47.52 ಕೋಟಿ ರೂಪಾಯಿ, ನವೆಂಬರ್ 61.29 ಕೋಟಿ ರೂಪಾಯಿ, ಡಿಸೆಂಬರ್ 79.64 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಇದನ್ನೂ ಓದಿ: ತಿರುಪತಿ ದೇವಾಲಯದ ಹುಂಡಿ ಹಣ ಎಣಿಕೆ; 24 ಗಂಟೆಗಳಲ್ಲಿ 2.55 ಕೋಟಿ ರೂ. ಸಂಗ್ರಹ

ಮಂತ್ರಾಲಯದಲ್ಲಿ ಮಧ್ಯರಾಧನೆ: ತಿರುಪತಿ ತಿರುಮಲದಿಂದ ಬಂದ ಶೇಷವಸ್ತ್ರ ರಾಯರ ಬೃಂದಾವನಕ್ಕೆ ಸಮರ್ಪಣೆ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?