AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ರಚಿಸಿ 1 ತಿಂಗಳು ಪೂರ್ಣ; ಪಂಜಾಬ್ ಜನರಿಗೆ ಭರ್ಜರಿ ಸಿಹಿ ಸುದ್ದಿ ಕೊಟ್ಟ ಮುಖ್ಯಮಂತ್ರಿ ಭಗವಂತ್ ಮಾನ್​

ಪಂಜಾಬ್ ಅಭಿವೃದ್ಧಿಯೇ ನಮ್ಮ ಗುರಿ ಎಂದು ಹೇಳಿರುವ ಮುಖ್ಯಮಂತ್ರಿ ಭಗವಂತ್ ಮಾನ್​ ಅವರು ಈಗಾಗಲೇ ಹಲವು ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ.

ಸರ್ಕಾರ ರಚಿಸಿ 1 ತಿಂಗಳು ಪೂರ್ಣ; ಪಂಜಾಬ್ ಜನರಿಗೆ ಭರ್ಜರಿ ಸಿಹಿ ಸುದ್ದಿ ಕೊಟ್ಟ ಮುಖ್ಯಮಂತ್ರಿ ಭಗವಂತ್ ಮಾನ್​
ಭಗವಂತ್ ಮಾನ್
TV9 Web
| Updated By: Lakshmi Hegde|

Updated on:Apr 16, 2022 | 10:22 AM

Share

ಪಂಜಾಬ್​​ ಜನರಿಗೆ ಆಪ್​ ಸರ್ಕಾರ ಗುಡ್​ ನ್ಯೂಸ್​ವೊಂದನ್ನು ನೀಡಿದೆ. ಜುಲೈ 1ರಿಂದ 300 ಯೂನಿಟ್​​ ವಿದ್ಯುತ್​​ನ್ನು ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿದೆ. ಆಪ್​ ಅಧಿಕಾರ ಹಿಡಿದು ಒಂದು ತಿಂಗಳು ಪೂರ್ಣಗೊಂಡ ಬೆನ್ನಲ್ಲೇ ಈ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಗುರುವಾರ ಜಲಂಧರ್​​ನಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ್ದ ಪಂಜಾಬ್​ ಸಿಎಂ ಭಗವಂತ್ ಮಾನ್​, ನಾವು ಏಪ್ರಿಲ್​ 16ರಂದು ಇಲ್ಲಿನ ಜನರಿಗೆ ಒಂದು ಬಹುದೊಡ್ಡ ಸುದ್ದಿ ಕೊಡಲಿದ್ದೇವೆ ಎಂದಿದ್ದರು. ಅದರಂತೆ ಜುಲೈ 1ರಿಂದ 300 ಯೂನಿಟ್ ವಿದ್ಯುತ್​ನ್ನು ಉಚಿತವಾಗಿ ಕೊಡುವ ಘೋಷಣೆ ಮಾಡಿದ್ದಾರೆ.

ಭಗವಂತ್ ಮಾನ್ ಅವರು ಮಂಗಳವಾರ (ಏಪ್ರಿಲ್​ 12) ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ರನ್ನು ಭೇಟಿಯಾಗಿ ಉಚಿತ ವಿದ್ಯುತ್ ನೀಡುವ ಬಗ್ಗೆ ಚರ್ಚಿಸಿದ್ದರು.  ಕಳೆದ ವಿಧಾನಸಭೆ ಚುನಾವಣೆಗೂ ಪೂರ್ವ ಆಪ್​ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಇದೂ ಇತ್ತು. ಪಂಜಾಬ್​​ನಲ್ಲಿ ಆಮ್​ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಇಲ್ಲಿನ ಪ್ರತಿ ಮನೆಗೂ 300 ಯೂನಿಟ್​ವರೆಗಿನ ವಿದ್ಯುತ್​​ನ್ನು ಉಚಿತವಾಗಿ ನೀಡಲಾಗುತ್ತದೆ ಎಂಬ ಭರವಸೆ ಕೊಟ್ಟಿದ್ದರು. ಆ ಭರವಸೆಯನ್ನೀಗ ಸರ್ಕಾರ ಉಳಿಸಿಕೊಂಡಿದೆ.

ದೆಹಲಿಯಲ್ಲಿ ಮಾತ್ರ ಆಡಳಿತ ಹಿಡಿದಿದ್ದ ಆಮ್​ ಆದ್ಮಿ ಪಕ್ಷ ಈ ಬಾರಿ ಪಂಜಾಬ್​​ನಲ್ಲೂ ಸರ್ಕಾರ ರಚನೆ ಮಾಡುವ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಪಂಜಾಬ್ ಅಭಿವೃದ್ಧಿಯೇ ನಮ್ಮ ಗುರಿ ಎಂದು ಹೇಳಿರುವ ಮುಖ್ಯಮಂತ್ರಿ ಭಗವಂತ್ ಮಾನ್​ ಅವರು ಈಗಾಗಲೇ ಹಲವು ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ. ಮನೆ ಬಾಗಿಲಿಗೆ ಪಡಿತರ ಡಿಲೆವರಿ ಕೊಡುವ ಯೋಜನೆಯನ್ನು ಕಳೆದ ತಿಂಗಳು ಜಾರಿಗೆ ತರಲಾಗಿದೆ. ಇದೂ ಕೂಡ ಆಪ್​ ಚುನಾವಣಾ ಪ್ರಣಾಳಿಕೆಯಲ್ಲಿದ್ದ ಪ್ರಮುಖ ಯೋಜನೆಯಾಗಿತ್ತು. ಪಂಜಾಬ್​​ನಲ್ಲಿ ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತೊಗೆಯುವುದಾಗಿ ಹೇಳಿರುವ ಮಾನ್​, ಈಗಾಗಲೇ ಅದಕ್ಕಾಗಿ ಸಹಾಯವಾಣಿಯನ್ನೂ ಪ್ರಾರಂಭಿಸಿದ್ದಾರೆ. ಯಾರೇ ಹಣ ಕೇಳಿದರೂ, ಕೊಡುವುದಿಲ್ಲ ಎನ್ನಬೇಡಿ, ಬದಲಿಗೆ ಈ ನಂಬರ್​ಗೆ ಕರೆ ಮಾಡಿ ಎಂದು ಒಂದು ಹೆಲ್ಪ್​ಲೈನ್​ ನಂಬರ್​ನ್ನು ಅಲ್ಲಿನ ಸಾರ್ವಜನಿಕರಿಗೆ ನೀಡಲಾಗಿದೆ.

ಆಗಲೇ ಹೇಳಿದಂತೆ ಪಂಜಾಬ್​​ನಲ್ಲಿ ಆಪ್​ ಪಕ್ಷ ಅಧಿಕಾರಕ್ಕೆ ಬಂದಿದ್ದು ಇತಿಹಾಸ. ಆಡಳಿತದಲ್ಲಿದ್ದ ಕಾಂಗ್ರೆಸ್​ ಅತ್ಯಂತ ಹೀನಾಯವಾಗಿ ಸೋತಿದೆ. ದೆಹಲಿಯಲ್ಲೂ ಕೂಡ ಅರವಿಂದ್ ಕೇಜ್ರಿವಾಲ್​ ತಮ್ಮ ಜನಪರ ಯೋಜನೆಗಳ ಮೂಲಕವೇ ಎರಡನೇ ಅವಧಿಗೆ ಅಧಿಕಾರ ಹಿಡಿದಿದ್ದಾರೆ. ಮುಂದಿನ ಗುರಿ ಗುಜರಾತ್​, ಹಿಮಾಚಲಯ ಪ್ರದೇಶಗಳು ಎಂದು ಹೇಳಿಕೊಂಡಿದ ಆಮ್​ ಆದ್ಮಿ ಪಾರ್ಟಿ ಅಲ್ಲಿ ಪಕ್ಷ ಸಂಘಟನೆಗಾಗಿ ಸಿದ್ಧತೆ ನಡೆಸಿದೆ. ಈ ವರ್ಷಾಂತ್ಯದಲ್ಲಿ ಅದೆರಡೂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: David Warner: ವಾರ್ನರ್ ಮೈಮೇಲೆ ವೈಲೆನ್ಸ್ ರಾಕಿ ಭಾಯ್: ಆರ್​ಸಿಬಿ ತಂಡಕ್ಕೆ ದೊಡ್ಡ ಸಿಗ್ನಲ್ ಕೊಟ್ಟ ಡೇವಿಡ್

Published On - 9:58 am, Sat, 16 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ