AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ 300 ವರ್ಷ ಹಳೆಯ ಶಿವನ ದೇವಸ್ಥಾನ ನೆಲಸಮ; ಗೆಹ್ಲೋಟ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಈ ಘಟನೆಯ ಬಗ್ಗೆ ಟೀಕಿಸಿರುವ ಅಮಿತ್ ಮಾಳವಿಯಾ, ಏ. 18ರಂದು ಯಾವುದೇ ಸೂಚನೆ ನೀಡದೆ, ಆಡಳಿತವು ರಾಜಸ್ಥಾನದ ರಾಜ್‌ಗಢ ಪಟ್ಟಣದಲ್ಲಿ 85 ಹಿಂದೂಗಳ ಮನೆಗಳು ಮತ್ತು ಅಂಗಡಿಗಳನ್ನು ಜೆಸಿಬಿಯಿಂದ ಧ್ವಂಸ ಮಾಡಿದೆ ಎಂದು ಆರೋಪಿಸಿದ್ದಾರೆ.

ರಾಜಸ್ಥಾನದಲ್ಲಿ 300 ವರ್ಷ ಹಳೆಯ ಶಿವನ ದೇವಸ್ಥಾನ ನೆಲಸಮ; ಗೆಹ್ಲೋಟ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಶಿವನ ದೇವಸ್ಥಾನ ಧ್ವಂಸ
TV9 Web
| Updated By: ಸುಷ್ಮಾ ಚಕ್ರೆ|

Updated on: Apr 22, 2022 | 3:15 PM

Share

ಜೈಪುರ: ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಸರಾಯ್ ಮೊಹಲ್ಲಾದಲ್ಲಿ 300 ವರ್ಷ ಪ್ರಾಚೀನ ಶಿವನ ದೇವಾಲಯವನ್ನು (Shiva Temple) ಕೆಡವಲಾಗಿದೆ. ಈ ಘಟನೆಯ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕ ಅಮಿತ್ ಮಾಳವಿಯಾ (Amit Malviya) ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರೌಲಿ ಮತ್ತು ಜಹಾಂಗೀರಪುರಿಯಲ್ಲಿ ಕಣ್ಣೀರು ಸುರಿಸಿ ಹಿಂದೂಗಳ ನಂಬಿಕೆಗೆ ಧಕ್ಕೆ ತರುತ್ತಿರುವುದು ಕಾಂಗ್ರೆಸ್‌ನ ಜಾತ್ಯತೀತತೆಯಾಗಿದೆ ಎಂದು ಕಿಡಿ ಕಾರಿದ್ದಾರೆ. ನಗರ ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿ (ಇಒ), ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಮತ್ತು ಪುರಸಭೆಯ ರಾಜಗಢ ಶಾಸಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ದೂರು ದಾಖಲಿಸಲಾಗಿದೆ.

ಈ ಘಟನೆಯ ಬಗ್ಗೆ ಟ್ವೀಟ್​ನಲ್ಲಿ ಟೀಕಿಸಿರುವ ಅಮಿತ್ ಮಾಳವಿಯಾ, ಏಪ್ರಿಲ್ 18ರಂದು ಯಾವುದೇ ಸೂಚನೆ ನೀಡದೆ, ಆಡಳಿತವು ರಾಜಸ್ಥಾನದ ರಾಜ್‌ಗಢ ಪಟ್ಟಣದಲ್ಲಿ 85 ಹಿಂದೂಗಳ ಮನೆಗಳು ಮತ್ತು ಅಂಗಡಿಗಳನ್ನು ಜೆಸಿಬಿಯಿಂದ ಧ್ವಂಸ ಮಾಡಿದೆ ಎಂದು ಆರೋಪಿಸಿದ್ದಾರೆ.

ಆದರೆ, ಬಿಜೆಪಿಯ ಹೇಳಿಕೆ ಸುಳ್ಳು ಎಂದು ರಾಜಸ್ಥಾನದ ಸಚಿವ ಪ್ರತಾಪ್ ಸಿಂಗ್ ಖಚರಿಯಾವಾಸ್ ಹೇಳಿದ್ದಾರೆ. ಬಿಜೆಪಿ ಸದಸ್ಯರಾಗಿರುವ ರಾಜ್‌ಗಢ ನಗರ ಪಾಲಿಕೆಯ ಅಧ್ಯಕ್ಷರು ದೇವಾಲಯಗಳು ಮತ್ತು ಮನೆಗಳನ್ನು ಉರುಳಿಸಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅಧ್ಯಕ್ಷರ ಆದೇಶದ ಮೇರೆಗೆ ದೇವಾಲಯವನ್ನು ಕೆಡವಲಾಯಿತು ಎಂದು ಖಚರಿಯಾವಾಸ್ ಆರೋಪಿಸಿದರು.

ಆ. 6ರಂದು ಅತಿಕ್ರಮಣ ತೆರವಿಗೆ ಸಂಬಂಧಿಸಿದಂತೆ 86 ಮಂದಿಗೆ ನಗರಸಭೆ ನೋಟಿಸ್‌ ಜಾರಿ ಮಾಡಿತ್ತು. ಅಲ್ವಾರ್‌ನ ರಾಜ್‌ಗಢ್‌ನಲ್ಲಿ ಸ್ಥಳೀಯರು ವಿರೋಧಿಸಿದರೂ ಅಧಿಕಾರಿಗಳು ಮೂರು ದೇವಾಲಯಗಳನ್ನು ಕೆಡವಿದರು. ಈ ದೇವಾಲಯಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶಿವ, ಹನುಮಂತ ಮತ್ತು ಇತರ ದೇವತೆಗಳ ವಿಗ್ರಹಗಳು ನಾಶವಾಗಿವೆ. ದೇವಾಲಯದಲ್ಲಿ ಪೂಜೆ ನಡೆಯುತ್ತಿದ್ದಾಗ ಅಧಿಕಾರಿಗಳು ಚಪ್ಪಲಿ ಧರಿಸಿ ವಿಗ್ರಹಗಳ ಬಳಿ ತೆರಳಿ ಕಟರ್ ಮೆಷಿನ್ ಬಳಸಿ ವಿಗ್ರಹಗಳನ್ನು ತೆಗೆಯಲು ಮುಂದಾದರು.

ಈ ಘಟನೆಯ ನಂತರ, ರಾಜ್‌ಗಢ ಶಾಸಕ ಜೋಹ್ರಿ ಲಾಲ್ ಮೀನಾ, ಎಸ್‌ಡಿಎಂ ಕೇಶವ್ ಕುಮಾರ್ ಮೀನಾ ಮತ್ತು ಮುನ್ಸಿಪಲ್ ಇಒ ಬನ್ವಾರಿ ಲಾಲ್ ಮೀನಾ ಅವರು ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಪೊಲೀಸರಿಗೆ ಲಿಖಿತ ದೂರು ನೀಡಿವೆ. ಆದರೆ, ಇನ್ನೂ ಎಫ್‌ಐಆರ್‌ ದಾಖಲಾಗಿಲ್ಲ. ಸಂಘಟನೆಗಳ ಸದಸ್ಯರು ರಾಜ್‌ಗಢ್‌ನ ಪೊಲೀಸ್ ಠಾಣೆಯನ್ನು ತಲುಪಿ ಪ್ರತಿಭಟನೆ ನಡೆಸಿದರು ಮತ್ತು ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದರು.

ದೆಹಲಿಯ ಜಹಾಂಗೀರ್‌ಪುರಿ ಮತ್ತು ರಾಜಸ್ಥಾನದ ಕರೌಲಿಯಲ್ಲಿ ಕೋಮುಗಲಭೆ ವರದಿಯಾದ ಕೆಲವು ದಿನಗಳ ನಂತರ 300 ವರ್ಷಗಳಷ್ಟು ಹಳೆಯದಾದ ಶಿವ ದೇವಾಲಯವನ್ನು ಕೆಡವಿರುವುದು ಬೆಳಕಿಗೆ ಬಂದಿದೆ. ಜಹಾಂಗೀರ್‌ಪುರಿಯಲ್ಲಿನ ಅಕ್ರಮ ಒತ್ತುವರಿ ಧ್ವಂಸ ಮತ್ತು ರಾಜಕೀಯ ಪಟಾಕಿಗಳ ಕುರಿತು ತೀವ್ರ ಚರ್ಚೆಯ ನಡುವೆ ಇಂದು ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಶಿವ ದೇವಾಲಯವನ್ನು ನೆಲಸಮ ಮಾಡಲಾಗಿದೆ. 300 ವರ್ಷಗಳಷ್ಟು ಹಳೆಯದಾದ ದೇವಾಲಯವನ್ನು ಬುಲ್ಡೋಜರ್‌ಗಳನ್ನು ನಿಯೋಜಿಸಿ ಧ್ವಂಸಗೊಳಿಸಲಾಯಿತು. ದೇವರ ವಿಗ್ರಹಗಳನ್ನು ಸ್ಥಳಾಂತರಿಸಲು ಕಟ್ಟರ್‌ಗಳನ್ನು ಬಳಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯ ಹನುಮಾನ್ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭೇಟಿ ನೀಡಿದರು

ಗಣೇಶನ ದೇವಸ್ಥಾನದಲ್ಲಿ ದೇವರ ಬಲಗಡೆಯಿಂದ ಹೂವಿನ ಪ್ರಸಾದ ಸಿಕ್ಕು ಆತ್ಮವಿಶ್ವಾಸದಿಂದ ಬೀಗುತ್ತಿದ್ದಾರೆ ಈಶ್ವರಪ್ಪ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!