AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NZC: ಜೈಪುರದಲ್ಲಿ ಉತ್ತರ ವಲಯ ಮಂಡಳಿಯ 30 ನೇ ಸಭೆ ಯಶಸ್ವಿ: ಬಗೆಹರಿದ ರಾಜ್ಯಗಳ 35 ಸಮಸ್ಯೆಗಳು

ರಾಜಸ್ಥಾನದ ಜೈಪುರದಲ್ಲಿ ಇಂದು (ಜುಲೈ 9) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಉತ್ತರ ವಲಯ ಮಂಡಳಿಯ (NZC) 30 ನೇ ಸಭೆ ನಡೆಯಿತು.

NZC: ಜೈಪುರದಲ್ಲಿ ಉತ್ತರ ವಲಯ ಮಂಡಳಿಯ 30 ನೇ ಸಭೆ ಯಶಸ್ವಿ: ಬಗೆಹರಿದ ರಾಜ್ಯಗಳ 35 ಸಮಸ್ಯೆಗಳು
TV9 Web
| Edited By: |

Updated on: Jul 09, 2022 | 10:37 PM

Share

ಜೈಪುರ: ರಾಜಸ್ಥಾನದ (Rajsthan) ಜೈಪುರದಲ್ಲಿ (Jaipur) ಇಂದು (ಜುಲೈ 9) ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Shah) ಅವರ ಅಧ್ಯಕ್ಷತೆಯಲ್ಲಿ ಉತ್ತರ ವಲಯ ಮಂಡಳಿಯ (NZC) 30 ನೇ ಸಭೆ ನಡೆಯಿತು. ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ ಉತ್ತಮಗೊಳಿಸುವುದು, ಅಂತರ ರಾಜ್ಯ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವುದು. ರಾಜ್ಯಗಳ ನಡುವೆ ಪ್ರಾದೇಶಿಕ ಸಹಕಾರವನ್ನು ಹೆಚ್ಚಿಸುವುದು ಮತ್ತು ದೇಶದಾದ್ಯಂತ ಜಾರಿಗೆ ತರಬೇಕಾದ ಸಾಮಾನ್ಯ ರಾಷ್ಟ್ರೀಯ ಯೋಜನೆಗಳ ಕುರಿತು ಚರ್ಚಿಸಲಾಗಿದೆ.

ಸಭೆಯಲ್ಲಿ ರಾಜ್ಯಗಳ 47 ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ. ಅದರಲ್ಲಿ 4 ರಾಷ್ಟ್ರೀಯ ಸಮಸ್ಯೆಗಳಾಗಿವೆ. 47 ಸಮಸ್ಯೆಗಳಲ್ಲಿ 35 ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಸಭೆಯಲ್ಲಿ ಚರ್ಚಿಸಲಾದ ಕೆಲವು ಅಂಶಗಳು ಇಲ್ಲಿವೆ

1. ಭಾಕ್ರಾ ಮತ್ತು ಪಾಂಗ್ ಅಣೆಕಟ್ಟಿನ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸುವುದು.

2. ಬಾಲಕಿಯರ ಮೇಲೆ  ಅತ್ಯಾಚಾರ ಪ್ರಕರಣಗಳನ್ನು POCSO ಕಾಯ್ದೆಯಡಿ ದಾಖಲಿಸಿಕೊಂಡು ತನಿಖೆಯನ್ನು ಚುರುಕುಗೊಳಿಸಿ ಪ್ರಕರಣವನ್ನು ಬೇಗ ಇತ್ಯರ್ಥಗೊಳಿಸುವುದು.

3. ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಡೈರೆಕ್ಟ್​ ಬೆನಿಫಿಟ್​ ಟ್ರಾನ್ಸಫರ್​ (DBT) ಯನ್ನು ಅತ್ಯುತ್ತಮವಾಗಿ ಬಳಸಿಕೊಳ್ಳುವುದು.

4. PMGSY ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣ ಮಾಡುವುದು.

5. ಬೇಳೆಗಳನ್ನು ಬೆಳೆದ ನಂತರ ಅದರ ಹುಲ್ಲು-ದಂಟುಗಳ ಸುಡುವುದನ್ನು ತಡೆಯುವುದು.

6. ಭದ್ರತೆ, ಸೈಬರ್ ಕ್ರೈಮ್, ಡ್ರಗ್ಸ್ ವ್ಯಾಪಾರ, ರಾಜ್ಯಗಳ ನಡುವಿನ ಪರಸ್ಪರ ಗಡಿ ವಿವಾದ, ರಸ್ತೆ, ಸಾರಿಗೆ, ಕೈಗಾರಿಕೆಗಳು, ನೀರು, ವಿದ್ಯುತ್ ಮತ್ತು ಇತರ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

ಉತ್ತರ ವಲಯ ಮಂಡಳಿಯಲ್ಲಿ ಉತ್ತರ ಭಾರತದ ದೆಹಲಿ, ರಾಜಸ್ಥಾನ, ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್ ರಾಜ್ಯಗಳು  ಮತ್ತು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಚಂಡೀಗಢ ಕೇಂದ್ರಾಡಳಿತ ಪ್ರದೇಶಗಳು ಒಳಗೊಂಡಿವೆ. NZC ಯ ಕೊನೆಯ ಸಭೆಯು 2019 ರಲ್ಲಿ ಚಂಡೀಗಢದಲ್ಲಿ ನಡೆದಿತ್ತು.

25 ವರ್ಷಗಳ ನಂತರ ಜೈಪುರದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ರಾಜ್ಯಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯ ಪ್ರಮುಖ ವಿಷಯಗಳ ಕುರಿತು ಚರ್ಚೆಗಳು ನಡೆದಿವೆ. ರಾಜ್ಯಗಳಿಂದ ಅಭಿಪ್ರಾಯಗಳನ್ನು ಪಡೆಯಲಾಗಿದೆ. ಈ ಸಭೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಉತ್ತಮ ಕಾರ್ಯವೈಖರಿ ಕುರಿತು ಮಾಹಿತಿ ಹಂಚಿಕೊಳ್ಳಲು ಉತ್ತಮ ವೇದಿಕೆಯಾಗಿದೆ.

ಸಭೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮತ್ತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ (LG) ವಿನಯ್ ಕುಮಾರ್ ಸಕ್ಸೇನಾ, ಲಡಾಖ್‌ನ ಎಲ್‌ಜಿ ಆರ್‌ಕೆ ಮಾಥುರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವರಿ ಲಾಲ್ ಪುರೋಹಿತ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ