AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಶಿಕ್ಷಕರು,ರೈತರು ಸೇರಿದಂತೆ 31 ಸಾಧಕರಿಗೆ ವಿಶೇಷ ಆಹ್ವಾನ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣವನ್ನು ಕೇಳಲು ಆಹ್ವಾನಿತರು ಮತ್ತು ಫಲಾನುಭವಿಗಳನ್ನು ಅವರ ಕುಟುಂಬಗಳೊಂದಿಗೆ ಆಹ್ವಾನಿಸಲಾಗುತ್ತಿದೆ. ‘ಜನ್ ಭಾಗಿದಾರಿ’ (ಸಾಮಾನ್ಯ ಜನರ ಭಾಗವಹಿಸುವಿಕೆ) ಉಪಕ್ರಮದಡಿಯಲ್ಲಿ ದೇಶದಾದ್ಯಂತ, ಎಲ್ಲಾ ವರ್ಗದ ಜನರನ್ನು ಆಹ್ವಾನಿಸಲು ಮತ್ತು ಆಚರಣೆಯ ಭಾಗವಾಗಲು ಸರ್ಕಾರ ಆಹ್ವಾನ ನೀಡಿದೆ.

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಶಿಕ್ಷಕರು,ರೈತರು ಸೇರಿದಂತೆ 31 ಸಾಧಕರಿಗೆ ವಿಶೇಷ ಆಹ್ವಾನ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Aug 12, 2023 | 8:42 PM

Share

ಬೆಂಗಳೂರು ಆಗಸ್ಟ್ 12: ನವದೆಹಲಿಯಲ್ಲಿ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ವೀಕ್ಷಿಸಲು ಕರ್ನಾಟಕದ (Karnataka) 31 ಮಂದಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಶಿಕ್ಷಕರು, ಮೀನುಗಾರರು, ಕುಶಲಕರ್ಮಿಗಳು ಮತ್ತು ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳನ್ನು 2023 ಆಗಸ್ಟ್ 15 2023 ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ವಿಶೇಷ ಅತಿಥಿಗಳಲ್ಲಿ ಆರು ಶಿಕ್ಷಕರು, ನಾಲ್ವರು ಮೀನುಗಾರರು, ಮೂವರು ಕುಶಲಕರ್ಮಿಗಳು, ಜಲ ಜೀವನ್ ಮಿಷನ್‌ನ ಮೂವರು ಫಲಾನುಭವಿಗಳು, ಅಮೃತ್ ಸರೋವರ ಮತ್ತು ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆಯ ತಲಾ ಇಬ್ಬರು ಫಲಾನುಭವಿಗಳು, ಕರ್ನಾಟಕದ 13 ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು ಸೇರಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣವನ್ನು ಕೇಳಲು ಆಹ್ವಾನಿತರು ಮತ್ತು ಫಲಾನುಭವಿಗಳನ್ನು ಅವರ ಕುಟುಂಬಗಳೊಂದಿಗೆ ಆಹ್ವಾನಿಸಲಾಗುತ್ತಿದೆ. ‘ಜನ್ ಭಾಗಿದಾರಿ’ (ಸಾಮಾನ್ಯ ಜನರ ಭಾಗವಹಿಸುವಿಕೆ) ಉಪಕ್ರಮದಡಿಯಲ್ಲಿ ದೇಶದಾದ್ಯಂತ, ಎಲ್ಲಾ ವರ್ಗದ ಜನರನ್ನು ಆಹ್ವಾನಿಸಲು ಮತ್ತು ಆಚರಣೆಯ ಭಾಗವಾಗಲು ಸರ್ಕಾರ ಆಹ್ವಾನ ನೀಡಿದೆ.

15 ಆಗಸ್ಟ್ 2023 ರಂದು ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಾಗ ನವದೆಹಲಿಯಲ್ಲಿ ಸ್ವಾತಂತ್ರ್ಯ ಸಂಭ್ರಮಾಚರಣೆಗೆ ದೇಶಾದ್ಯಂತದ ಸುಮಾರು 1,800 ವಿಶೇಷ ಆಹ್ವಾನಿತರು ಸಾಕ್ಷಿಯಾಗಲಿದ್ದಾರೆ. ದೇಶಕ್ಕೆ ಈ ವರ್ಷ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡಿದ್ದು, ವಿವಿಧ ಗ್ರಾಮಗಳ ಸರಪಂಚ್‌ಗಳು, ಶಿಕ್ಷಕರು, ದಾದಿಯರು, ರೈತರು, ಮೀನುಗಾರರು, ನವದೆಹಲಿಯಲ್ಲಿ ಕೇಂದ್ರ ವಿಸ್ಟಾ ಯೋಜನೆಯನ್ನು ನಿರ್ಮಿಸಲು ಸಹಾಯ ಮಾಡಿದ ಶ್ರಮ ಯೋಗಿಗಳು, ಖಾದಿ ವಲಯದ ಕಾರ್ಯಕರ್ತರು, ರಾಷ್ಟ್ರ ಪ್ರಶಸ್ತಿ ವಿಜೇತ ಶಾಲಾ ಶಿಕ್ಷಕರು, ಗಡಿ ರಸ್ತೆಗಳ ಸಂಸ್ಥೆ ದೇಶದ ವಿವಿಧ ಭಾಗಗಳಲ್ಲಿ ಜಾರಿಗೊಳಿಸಲಾದ ಅಮೃತ್ ಸರೋವರ ಯೋಜನೆಗಳು ಮತ್ತು ಹರ್ ಘರ್ ಜಲ ಯೋಜನೆ ಯೋಜನೆಗಳಿಗೆ ಸಹಾಯ ಮಾಡಿದ ಮತ್ತು ಕೆಲಸ ಮಾಡಿದ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: 76ನೇ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಆಹ್ವಾನಿತರಾಗಿ ಮಂಡ್ಯದ ರೈತನಿಗೆ ಪಿಎಂಒ ಆಹ್ವಾನ

ಜಲ ಜೀವನ್ ಮಿಷನ್ ಯೋಜನೆಯಡಿ ಜಲಮಹಿಳೆಯಾಗಿ ಕಾರ್ಯನಿರ್ವಹಿಸುತ್ತಿರುವ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಿಕ್ಕ ಕುರುವತ್ತಿ ಗ್ರಾಮ ಪಂಚಾಯಿತಿಯ ಪುಷ್ಪಾ ಹೊನ್ನಟ್ಟಿ ಅವರು ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿತರಾಗಿದ್ದಾರೆ.

ಹಾವೇರಿ ಜಿಲ್ಲೆ ಗುತ್ತಲ ಗ್ರಾಮದ ಸಣ್ಣ ರೈತ ಶ ನೀಲಪ್ಪ ಶಂಭಪ್ಪ ನೀಲಣ್ಣನವರ್ ಕೂಡ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿದ್ದಾರೆ.

ಚಾಮರಾಜ ನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಗ್ರಾಮ ಪಂಚಾಯತ್‌ನ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಪುಸ್ತಕ ಲೇಖಕಿಯಾಗಿ ಕೆಲಸ ಮಾಡುತ್ತಿರುವ ನಳಿನಾ ಕುಮಾರಿ, ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಗ್ರಾಮದ ರೈತ ಶ್ರೀ ಎನ್.ಎಚ್.ವಿರೂಪಾಕ್ಷಮೂರ್ತಿ ಅವರು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಕಣ್ತುಂಬಿಕೊಳ್ಳಲಿದ್ದಾರೆ

ವಿಶೇಷ ಅತಿಥಿಗಳಾಗಿ ಕಲಬುರ್ಗಿ ಜಿಲ್ಲೆ ಬೆಳಗುಂಪಿಯ ರೈತ ಆನಂದ ನಾಗೇಂದ್ರಪ್ಪ ಕೂಡ ಆಹ್ವಾನಿತರಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ