ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ, ಉಸಿರುಗಟ್ಟಿ 32 ಮಂದಿ ಸಾವು

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ, ಭಾರಿ ಹೊಗೆಯಿಂದ ಉಸಿರುಗಟ್ಟಿ 32 ಮಂದಿ ಮೃತಪಟ್ಟಿದ್ದಾರೆ. 3ನೇ ಮಹಡಿಯ ಬೇಕರಿಯಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ 27 ಅಗ್ನಿಶಾಮಕ ವಾಹನಗಳು ಆಗಮಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಕಾರ್ಖಾನೆಯಲ್ಲಿ ಸಿಲುಕಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಉಳಿದವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ, ಉಸಿರುಗಟ್ಟಿ 32 ಮಂದಿ ಸಾವು

Updated on: Dec 08, 2019 | 9:23 AM

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ, ಭಾರಿ ಹೊಗೆಯಿಂದ ಉಸಿರುಗಟ್ಟಿ 32 ಮಂದಿ ಮೃತಪಟ್ಟಿದ್ದಾರೆ. 3ನೇ ಮಹಡಿಯ ಬೇಕರಿಯಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ.

ಘಟನಾ ಸ್ಥಳಕ್ಕೆ 27 ಅಗ್ನಿಶಾಮಕ ವಾಹನಗಳು ಆಗಮಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಕಾರ್ಖಾನೆಯಲ್ಲಿ ಸಿಲುಕಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಉಳಿದವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

Published On - 9:05 am, Sun, 8 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us