ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ, ಉಸಿರುಗಟ್ಟಿ 32 ಮಂದಿ ಸಾವು

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ, ಭಾರಿ ಹೊಗೆಯಿಂದ ಉಸಿರುಗಟ್ಟಿ 32 ಮಂದಿ ಮೃತಪಟ್ಟಿದ್ದಾರೆ. 3ನೇ ಮಹಡಿಯ ಬೇಕರಿಯಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ 27 ಅಗ್ನಿಶಾಮಕ ವಾಹನಗಳು ಆಗಮಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಕಾರ್ಖಾನೆಯಲ್ಲಿ ಸಿಲುಕಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಉಳಿದವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ, ಉಸಿರುಗಟ್ಟಿ 32 ಮಂದಿ ಸಾವು

Updated on: Dec 08, 2019 | 9:23 AM

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ, ಭಾರಿ ಹೊಗೆಯಿಂದ ಉಸಿರುಗಟ್ಟಿ 32 ಮಂದಿ ಮೃತಪಟ್ಟಿದ್ದಾರೆ. 3ನೇ ಮಹಡಿಯ ಬೇಕರಿಯಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ.

ಘಟನಾ ಸ್ಥಳಕ್ಕೆ 27 ಅಗ್ನಿಶಾಮಕ ವಾಹನಗಳು ಆಗಮಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಕಾರ್ಖಾನೆಯಲ್ಲಿ ಸಿಲುಕಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಉಳಿದವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

Published On - 9:05 am, Sun, 8 December 19