AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Kaveri: ಆಪರೇಷನ್ ಕಾವೇರಿ ಅಡಿಯಲ್ಲಿ ಇದುವರೆಗೆ ಸುಡಾನ್​​ನಿಂದ 3,200 ಭಾರತೀಯರ ಸ್ಥಳಾಂತರ

ಆಪರೇಷನ್ ಕಾವೇರಿ ಅಡಿಯಲ್ಲಿ ಇದುವರೆಗೆ 3,200 ಭಾರತೀಯರನ್ನು ಸುಡಾನ್‌ನಿಂದ ಸ್ಥಳಾಂತರಿಸಲಾಗಿದೆ. ನಿನ್ನೆಯವರೆಗೆ ಸುಡಾನ್​​ನಲ್ಲಿದ್ದ ಭಾರತೀಯರು ಐದು ಭಾರತೀಯ ನೌಕಾ ಹಡಗುಗಳು ಮತ್ತು ವಾಡಿ ಸಯ್ಯಿದ್​​​ನ ಮಿಲಿಟರಿ ವಾಯುನೆಲೆ ಸೇರಿದಂತೆ 13 ಭಾರತೀಯ ವಾಯುಪಡೆಯ ವಿಮಾನಗಳನ್ನು ಬಳಸಿಕೊಂಡು ಪೋರ್ಟ್ ಸುಡಾನ್‌ನಿಂದ ಹೊರಬಂದಿದ್ದಾರೆ.

Operation Kaveri: ಆಪರೇಷನ್ ಕಾವೇರಿ ಅಡಿಯಲ್ಲಿ ಇದುವರೆಗೆ ಸುಡಾನ್​​ನಿಂದ 3,200 ಭಾರತೀಯರ ಸ್ಥಳಾಂತರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 03, 2023 | 1:13 PM

Share

ದೆಹಲಿ: ಯುದ್ಧಪೀಡಿತ ಸುಡಾನ್​​ನಲ್ಲಿ ಭಾರತೀಯರನ್ನು ಭಾರತಕ್ಕೆ ಸ್ಥಳಾಂತರಿಸುವ ಕಾರ್ಯ ಭರದಿಂದ ಸಾಗುತ್ತಿದೆ, ಸುಡಾನ್​​​ನಿಂದ ಭಾರತಕ್ಕೆ ಕರೆತರಲು ಆಪರೇಷನ್ ಕಾವೇರಿ ಎಂಬ ಕಾರ್ಯಚರಣೆ ಪ್ರಾರಂಭಿಸಲಾಗಿತ್ತು. ಇದೀಗ ಆಪರೇಷನ್ ಕಾವೇರಿ ಅಡಿಯಲ್ಲಿ ಇದುವರೆಗೆ 3,200 ಭಾರತೀಯರನ್ನು ಸುಡಾನ್‌ನಿಂದ ಸ್ಥಳಾಂತರಿಸಲಾಗಿದೆ. ನಿನ್ನೆಯವರೆಗೆ ಸುಡಾನ್​​ನಲ್ಲಿದ್ದ ಭಾರತೀಯರು ಐದು ಭಾರತೀಯ ನೌಕಾ ಹಡಗುಗಳು ಮತ್ತು ವಾಡಿ ಸಯ್ಯಿದ್​​​ನ ಮಿಲಿಟರಿ ವಾಯುನೆಲೆ ಸೇರಿದಂತೆ 13 ಭಾರತೀಯ ವಾಯುಪಡೆಯ ವಿಮಾನಗಳನ್ನು ಬಳಸಿಕೊಂಡು ಪೋರ್ಟ್ ಸುಡಾನ್‌ನಿಂದ ಹೊರಬಂದಿದ್ದಾರೆ ಎಂದು ಖಾರ್ಟೂಮ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ತಿಳಿಸಿದೆ. ಸುಡಾನ್‌ನ ಖಾರ್ಟೂಮ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಪೋರ್ಟ್ ಸುಡಾನ್‌ಗೆ ಸ್ಥಳಾಂತರಿಸಲಾಗುತ್ತದೆ.

ಖಾರ್ಟೂಮ್ ನಗರದಲ್ಲಿ ನಡೆದ ದಾಳಿಗಳು ಸೇರಿದಂತೆ ಸುಡಾನ್‌ನಲ್ಲಿ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಮುಂದಿನ ಬೆಳವಣಿಗೆ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಹಿನ್ನೆಲೆಯಲ್ಲಿ ಈ ಕ್ರಮವನ್ನು ಅನುಸರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Operation Kaveri: ಸುಡಾನ್​​ನಿಂದ ಇಲ್ಲಿಯವರೆಗೆ ವಾಯುಪಡೆ ಕರೆತಂದಿದ್ದು 1,400 ಭಾರತೀಯರನ್ನು

ಖರ್ಟೂಮ್ ಮತ್ತು ಸುಡಾನ್‌ನ ಇತರ ಭಾಗಗಳಲ್ಲಿ ಏ.15ರಂದು ಸುಡಾನ್​​ ಸೈನ್ಯಗಳ ನಡುವೆ ಸಂಘರ್ಷ ಪ್ರಾರಂಭವಾಯಿತು. ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಸರ್ಕಾರವು ‘ಆಪರೇಷನ್ ಕಾವೇರಿ’ ಅನ್ನು ಪ್ರಾರಂಭಿಸಿತು ಮತ್ತು ಭಾರತೀಯ ನೌಕಾ ಹಡಗುಗಳು, ಭಾರತೀಯ ವಾಯುಪಡೆಯ ವಿಮಾನಗಳು ತ್ವರಿತ ಕಾರ್ಯಚರಣೆ ನಡೆಸಿದೆ ಎಂದು AIR ವರದಿಗಾರರು ವರದಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಉಪಚುನಾವಣಾ ಪ್ರಚಾರಕ್ಕೆ ಕರೆದಿಲ್ಲ; ಜಬ್ಬಾರ್​ಗೆ ಸಚಿವ ಖಡಕ್ ಕೌಂಟರ್
ಉಪಚುನಾವಣಾ ಪ್ರಚಾರಕ್ಕೆ ಕರೆದಿಲ್ಲ; ಜಬ್ಬಾರ್​ಗೆ ಸಚಿವ ಖಡಕ್ ಕೌಂಟರ್
50 ಲಕ್ಷ, 1 ಕೋಟಿ ಹಣ ಹಂಚಿಕೆಯ ಆರೋಪದ ಬಗ್ಗೆ ಚಮನ್ ಸಾಬ್ ಸ್ಫೋಟಕ ಮಾತು!
50 ಲಕ್ಷ, 1 ಕೋಟಿ ಹಣ ಹಂಚಿಕೆಯ ಆರೋಪದ ಬಗ್ಗೆ ಚಮನ್ ಸಾಬ್ ಸ್ಫೋಟಕ ಮಾತು!
ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿದ್ದುಗೆ 'ಗೋಲ್ಡನ್' ಗಿಫ್ಟ್
ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿದ್ದುಗೆ 'ಗೋಲ್ಡನ್' ಗಿಫ್ಟ್
ಸಿಎಸ್​ಕೆ ಪರ ಕೊನೆಗೂ ಅಬ್ಬರಿಸಿದ ಸಂಜು ಸ್ಯಾಮ್ಸನ್
ಸಿಎಸ್​ಕೆ ಪರ ಕೊನೆಗೂ ಅಬ್ಬರಿಸಿದ ಸಂಜು ಸ್ಯಾಮ್ಸನ್
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?