AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Kaveri: ಆಪರೇಷನ್ ಕಾವೇರಿ ಅಡಿಯಲ್ಲಿ ಇದುವರೆಗೆ ಸುಡಾನ್​​ನಿಂದ 3,200 ಭಾರತೀಯರ ಸ್ಥಳಾಂತರ

ಆಪರೇಷನ್ ಕಾವೇರಿ ಅಡಿಯಲ್ಲಿ ಇದುವರೆಗೆ 3,200 ಭಾರತೀಯರನ್ನು ಸುಡಾನ್‌ನಿಂದ ಸ್ಥಳಾಂತರಿಸಲಾಗಿದೆ. ನಿನ್ನೆಯವರೆಗೆ ಸುಡಾನ್​​ನಲ್ಲಿದ್ದ ಭಾರತೀಯರು ಐದು ಭಾರತೀಯ ನೌಕಾ ಹಡಗುಗಳು ಮತ್ತು ವಾಡಿ ಸಯ್ಯಿದ್​​​ನ ಮಿಲಿಟರಿ ವಾಯುನೆಲೆ ಸೇರಿದಂತೆ 13 ಭಾರತೀಯ ವಾಯುಪಡೆಯ ವಿಮಾನಗಳನ್ನು ಬಳಸಿಕೊಂಡು ಪೋರ್ಟ್ ಸುಡಾನ್‌ನಿಂದ ಹೊರಬಂದಿದ್ದಾರೆ.

Operation Kaveri: ಆಪರೇಷನ್ ಕಾವೇರಿ ಅಡಿಯಲ್ಲಿ ಇದುವರೆಗೆ ಸುಡಾನ್​​ನಿಂದ 3,200 ಭಾರತೀಯರ ಸ್ಥಳಾಂತರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 03, 2023 | 1:13 PM

Share

ದೆಹಲಿ: ಯುದ್ಧಪೀಡಿತ ಸುಡಾನ್​​ನಲ್ಲಿ ಭಾರತೀಯರನ್ನು ಭಾರತಕ್ಕೆ ಸ್ಥಳಾಂತರಿಸುವ ಕಾರ್ಯ ಭರದಿಂದ ಸಾಗುತ್ತಿದೆ, ಸುಡಾನ್​​​ನಿಂದ ಭಾರತಕ್ಕೆ ಕರೆತರಲು ಆಪರೇಷನ್ ಕಾವೇರಿ ಎಂಬ ಕಾರ್ಯಚರಣೆ ಪ್ರಾರಂಭಿಸಲಾಗಿತ್ತು. ಇದೀಗ ಆಪರೇಷನ್ ಕಾವೇರಿ ಅಡಿಯಲ್ಲಿ ಇದುವರೆಗೆ 3,200 ಭಾರತೀಯರನ್ನು ಸುಡಾನ್‌ನಿಂದ ಸ್ಥಳಾಂತರಿಸಲಾಗಿದೆ. ನಿನ್ನೆಯವರೆಗೆ ಸುಡಾನ್​​ನಲ್ಲಿದ್ದ ಭಾರತೀಯರು ಐದು ಭಾರತೀಯ ನೌಕಾ ಹಡಗುಗಳು ಮತ್ತು ವಾಡಿ ಸಯ್ಯಿದ್​​​ನ ಮಿಲಿಟರಿ ವಾಯುನೆಲೆ ಸೇರಿದಂತೆ 13 ಭಾರತೀಯ ವಾಯುಪಡೆಯ ವಿಮಾನಗಳನ್ನು ಬಳಸಿಕೊಂಡು ಪೋರ್ಟ್ ಸುಡಾನ್‌ನಿಂದ ಹೊರಬಂದಿದ್ದಾರೆ ಎಂದು ಖಾರ್ಟೂಮ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ತಿಳಿಸಿದೆ. ಸುಡಾನ್‌ನ ಖಾರ್ಟೂಮ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಪೋರ್ಟ್ ಸುಡಾನ್‌ಗೆ ಸ್ಥಳಾಂತರಿಸಲಾಗುತ್ತದೆ.

ಖಾರ್ಟೂಮ್ ನಗರದಲ್ಲಿ ನಡೆದ ದಾಳಿಗಳು ಸೇರಿದಂತೆ ಸುಡಾನ್‌ನಲ್ಲಿ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಮುಂದಿನ ಬೆಳವಣಿಗೆ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಹಿನ್ನೆಲೆಯಲ್ಲಿ ಈ ಕ್ರಮವನ್ನು ಅನುಸರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Operation Kaveri: ಸುಡಾನ್​​ನಿಂದ ಇಲ್ಲಿಯವರೆಗೆ ವಾಯುಪಡೆ ಕರೆತಂದಿದ್ದು 1,400 ಭಾರತೀಯರನ್ನು

ಖರ್ಟೂಮ್ ಮತ್ತು ಸುಡಾನ್‌ನ ಇತರ ಭಾಗಗಳಲ್ಲಿ ಏ.15ರಂದು ಸುಡಾನ್​​ ಸೈನ್ಯಗಳ ನಡುವೆ ಸಂಘರ್ಷ ಪ್ರಾರಂಭವಾಯಿತು. ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಸರ್ಕಾರವು ‘ಆಪರೇಷನ್ ಕಾವೇರಿ’ ಅನ್ನು ಪ್ರಾರಂಭಿಸಿತು ಮತ್ತು ಭಾರತೀಯ ನೌಕಾ ಹಡಗುಗಳು, ಭಾರತೀಯ ವಾಯುಪಡೆಯ ವಿಮಾನಗಳು ತ್ವರಿತ ಕಾರ್ಯಚರಣೆ ನಡೆಸಿದೆ ಎಂದು AIR ವರದಿಗಾರರು ವರದಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ